AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯ ಏಮ್ಸ್ ಬಳಿ ಪೊಲೀಸರಿಂದ ಫೈರಿಂಗ್; ದುಷ್ಕರ್ಮಿಯ ಕಾಲಿಗೆ ಗುಂಡೇಟು

Delhi ಮಂಗಳವಾರ ಬೆಳಗ್ಗೆ ದಕ್ಷಿಣ ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (AIIMS) ಬಳಿ ದೆಹಲಿ ಪೊಲೀಸರ ಗಸ್ತು ತಂಡದೊಂದಿಗೆ ಗುಂಡಿನ ಚಕಮಕಿ ನಡೆದ ನಂತರ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದೆಹಲಿಯ ಏಮ್ಸ್ ಬಳಿ ಪೊಲೀಸರಿಂದ ಫೈರಿಂಗ್; ದುಷ್ಕರ್ಮಿಯ ಕಾಲಿಗೆ ಗುಂಡೇಟು
ದೆಹಲಿ ಪೊಲೀಸ್
TV9 Web
| Edited By: |

Updated on: Nov 09, 2021 | 12:03 PM

Share

ದೆಹಲಿ: ದೆಹಲಿಯಲ್ಲಿ(Delhi) ಪೊಲೀಸರು ಮತ್ತು ದುಷ್ಕರ್ಮಿಗಳ ನಡುವೆ ಗುಂಡಿನ ಚಕಮಕಿ ನಡೆದಿದೆ. ಮಂಗಳವಾರ ಬೆಳಗ್ಗೆ 5 ಗಂಟೆ ಸುಮಾರಿಗೆ ಏಮ್ಸ್ (AIIMS) ಬಳಿ ಗುಂಡಿನ ದಾಳಿ ನಡೆದಿದ್ದು, ದುಷ್ಕರ್ಮಿಯ ಕಾಲಿಗೆ ಗುಂಡು ತಗುಲಿದೆ. ಈ ದುಷ್ಕರ್ಮಿ ಹಲವು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದನು ಎಂದು ಎನ್​​ಡಿಟಿವಿ ವರದಿ ಮಾಡಿದೆ. ಮಂಗಳವಾರ ಬೆಳಗ್ಗೆ ದಕ್ಷಿಣ ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (AIIMS) ಬಳಿ ದೆಹಲಿ ಪೊಲೀಸರ ಗಸ್ತು ತಂಡದೊಂದಿಗೆ ಗುಂಡಿನ ಚಕಮಕಿ ನಡೆದ ನಂತರ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬೈಕ್ ನಲ್ಲಿ ಬಂದ ವ್ಯಕ್ತಿಗಳು ಪೊಲೀಸರ ಮೇಲೆ ಗುಂಡು ಹಾರಿಸಿ ಪರಾರಿಯಾಗಲು ಯತ್ನಿಸಿದ್ದಾರೆ ಎನ್ನಲಾಗಿದೆ. ಪ್ರತೀಕಾರವಾಗಿ ಪೊಲೀಸರು ಎರಡು ಸುತ್ತು ಗುಂಡು ಹಾರಿಸಿದ್ದು, ಒಬ್ಬ ಆರೋಪಿ ಗಾಯಗೊಂಡಿದ್ದಾನೆ. ಯಾವುದೇ ಪೊಲೀಸರಿಗೆ ಗಾಯಗಳಾಗಿಲ್ಲ ಎಂದು ಪೊಲೀಸರು ತಿಳಿಸಿರುವುದಾಗಿ ದಿ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.

ಏಮ್ಸ್ ಬಳಿಯ ಕಿದ್ವಾಯಿ ನಗರದಲ್ಲಿ ಮುಂಜಾನೆ 3-4 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೋಟ್ಲಾ ಮುಬಾರಕ್‌ಪುರದಲ್ಲಿ ನಿಯೋಜನೆಗೊಂಡಿದ್ದ ಗಸ್ತು ತಂಡವು ಬೈಕ್‌ನಲ್ಲಿ ಮೂವರು ವ್ಯಕ್ತಿಗಳನ್ನು ಗುರುತಿಸಿ ನಿಲ್ಲಿಸುವಂತೆ ಸೂಚಿಸಿತು. ಆದರೆ ಅವರು ನಿಲ್ಲಿಸದೆ ವೇಗವಾಗಿ ಹೋದರು. ಪೊಲೀಸ್ ತಂಡವು ಅವರನ್ನು ಬೆನ್ನಟ್ಟಿದಾಗ  ಒಬ್ಬ ವ್ಯಕ್ತಿ ಪಿಸ್ತೂಲನ್ನು ಹೊರತೆಗೆದು ನಮ್ಮ ಮೇಲೆ ಗುಂಡು ಹಾರಿಸಲು ಪ್ರಾರಂಭಿಸಿದನು. ಪ್ರತೀಕಾರದ ಗುಂಡಿನ ದಾಳಿಯಲ್ಲಿ, ಪಿಲಿಯನ್ ರೈಡರ್ ಕಾಲಿಗೆ ಗುಂಡು ಹಾರಿಸಲಾಯಿತು. ಮೂವರನ್ನೂ ಬಂಧಿಸಲಾಗಿದೆ ಎಂದು ಡಿಸಿಪಿ (ದಕ್ಷಿಣ) ಬೆನಿಟಾ ಮೇರಿ ಜೈಕರ್ ಹೇಳಿದರು.

ವ್ಯಕ್ತಿಗಳನ್ನು ಅಭಿ ಸೌರವ್, ಗುರುದೇವ್ ಸಿಂಗ್ ಮತ್ತು ಇನ್ನೊಬ್ಬ ಅಪ್ರಾಪ್ತ ಎಂದು ಗುರುತಿಸಲಾಗಿದೆ. ಪೊಲೀಸರು ಅವರ ಬಳಿಯಿದ್ದ ಪಿಸ್ತೂಲ್ ವಶಪಡಿಸಿಕೊಂಡಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ಏಮ್ಸ್ ಟ್ರಾಮಾ ಸೆಂಟರ್‌ಗೆ ಕರೆದೊಯ್ಯಲಾಗಿದ್ದು, ಪೊಲೀಸರು ಅವರ ಅಪರಾಧ ಇತಿಹಾಸವನ್ನು ಪರಿಶೀಲಿಸುತ್ತಿದ್ದಾರೆ.

ಇತ್ತೀಚೆಗೆ ದ್ವಾರಕಾದಲ್ಲಿ ನಡೆದ ಗುಂಡಿನ ದಾಳಿ ಬಳಿಕ ಸುಹೇಲ್ ಖಾನ್ ಎಂಬ ವಂಚಕನ್ನು ಪೊಲೀಸರು ಹಿಡಿದಿದ್ದರು. ಕೊಲೆ ಪ್ರಕರಣದಲ್ಲಿ ಪೊಲೀಸರು ಸುಹೇಲ್‌ಗಾಗಿ ಹುಡುಕಾಟ ನಡೆಸಿದ್ದರು. ಈತನ ವಿರುದ್ಧ ಸುಮಾರು ಅರ್ಧ ಡಜನ್ ಪ್ರಕರಣಗಳು ದಾಖಲಾಗಿವೆ. ಈ ದಾಳಿಯಲ್ಲಿ ಸುಹೇಲ್ ಕಾಲಿಗೆ ಗುಂಡು ತಗುಲಿತ್ತು.

ಇದನ್ನೂ ಓದಿ:  ಮುಕೇಶ್ ಅಂಬಾನಿ ಅವರ ಮನೆಯ ವಿಳಾಸ ಕೇಳಿ ಆತಂಕ ಸೃಷ್ಟಿಸಿದ ವ್ಯಕ್ತಿ ಪೊಲೀಸ್ ವಶಕ್ಕೆ

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ