AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Odisha: ಏಳೆಂಟು ವಲಸೆ ಕಾರ್ಮಿಕರಿಗೆ ಡಿಕ್ಕಿ ಹೊಡೆದ ರೈಲು; ಮೂವರು ಸ್ಥಳದಲ್ಲೇ ಸಾವು

Odisha: ಹೀಗೆ ವಲಸೆ ಕಾರ್ಮಿಕರು ರೈಲಿಗೆ ಬಲಿಯಾಗಿದ್ದು ಇದೇ ಮೊದಲಲ್ಲ. ಹಿಂದೆ ಕೂಡ ಹಲವು ಘಟನೆಗಳು ನಡೆದಿವೆ. ಕೆಲವೇ ದಿನಗಳ ಹಿಂದೆ ಉತ್ತರಪ್ರದೇಶದಲ್ಲಿ ಇಂಥದ್ದೇ ಅವಘಡ ನಡೆದಿತ್ತು.

Odisha: ಏಳೆಂಟು ವಲಸೆ ಕಾರ್ಮಿಕರಿಗೆ ಡಿಕ್ಕಿ ಹೊಡೆದ ರೈಲು; ಮೂವರು ಸ್ಥಳದಲ್ಲೇ ಸಾವು
ರೈಲ್ವೆ ಹಳಿ (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on:Aug 30, 2021 | 5:40 PM

Share

ರೈಲ್ವೆ ಸ್ಟೇಶನ್ (Railway Station) ​​ ತಲುಪಲು ಹಳಿಯ ಮೇಲೆ ನಡೆದುಕೊಂಡು ಹೋಗುತ್ತಿದ್ದ ವಲಸೆ ಕಾರ್ಮಿಕ (Migrant Labourers)ರಿಗೆ  ರೈಲು ಡಿಕ್ಕಿ ಹೊಡೆದ ಪರಿಣಾಮ ಮೂವರು ಕಾರ್ಮಿಕರು ಮೃತಪಟ್ಟು, ಉಳಿದವರು ಗಾಯಗೊಂಡ ಘಟನೆ ಒಡಿಶಾದ ಗಂಜಮ್​ ಜಿಲ್ಲೆಯಲ್ಲಿ ನಡೆದಿದೆ. ಇವರೆಲ್ಲ ಬಿಹಾರ (Bihar)ದ ಕಾರ್ಮಿಕರಾಗಿದ್ದು, ಮನೆಗೆ ಹೋಗುವ ಸಲುವಾಗಿ ರೈಲ್ವೆ ನಿಲ್ದಾಣಕ್ಕೆ ತೆರಳುತ್ತಿದ್ದರು ಎಂದು ಸರ್ಕಾರಿ ರೈಲ್ವೆ ಪೊಲೀಸ್​ ಅಧಿಕಾರಿ (GRP)ಯೊಬ್ಬರು ತಿಳಿಸಿದ್ದಾರೆ.

ಸುಮಾರು 7-8 ವಲಸೆ ಕಾರ್ಮಿಕರು ಭಾನುವಾರ ರಾತ್ರಿ ಬ್ರಹ್ಮಾಪುರ ರೈಲ್ವೆ ಸ್ಟೇಶನ್​ಗೆ ಹೋಗುತ್ತಿದ್ದರು. ಇವರೆಲ್ಲ ಹಳಿಯ ಮೇಲೇ ನಡೆದುಕೊಂಡು ಹೋಗುತ್ತಿದ್ದು, ಅದೇ ಸಮಯದಲ್ಲಿ ಬಂದ ವಿಶಾಖಪಟ್ಟಣಂ-ಟಾಟಾನಗರ ಎಕ್ಸ್​ಪ್ರೆಸ್​ ರೈಲು ಡಿಕ್ಕಿ ಹೊಡೆದಿದೆ. ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಗಾಯಗೊಂಡ ಉಳಿದವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಎಲ್ಲ ಕಾರ್ಮಿಕರೂ ಸ್ಥಳೀಯ ಒಂದು ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು.

ಈ ಹಿಂದೆಯೂ ಹಲವು ಘಟನೆಗಳು ನಡೆದಿವೆ ಹೀಗೆ ವಲಸೆ ಕಾರ್ಮಿಕರು ರೈಲಿಗೆ ಬಲಿಯಾಗಿದ್ದು ಇದೇ ಮೊದಲಲ್ಲ. ಹಿಂದೆ ಕೂಡ ಹಲವು ಘಟನೆಗಳು ನಡೆದಿವೆ. ಕೆಲವೇ ದಿನಗಳ ಹಿಂದೆ ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ 68 ವರ್ಷದ ರೈತನೊಬ್ಬನಿಗೆ ಸಿಲ್ವಾರ್​ ಗ್ರಾಮದ ಬಳಿ ದೆಹಲಿ-ಸಹರನ್​ಪುರ ರೈಲು ಡಿಕ್ಕಿ ಹೊಡೆದು ಮೃತಪಟ್ಟಿದ್ದರು. ಈ ರೈತ ಕೂಡ ರೈಲ್ವೆ ಹಳಿ ದಾಟುತ್ತಿದ್ದಾಗಲೇ ಅವಘಡ ಸಂಭವಿಸಿತ್ತು.

ಇದನ್ನೂ ಓದಿ: ಉಡುಗೆ ಯಾವುದಾದರೇನು, ರಣವೀರ್ ಸಿಂಗ್ ಮಟ್ಟಸ ದೇಹದ ಮೇಲೆ ಚೆನ್ನಾಗಿ ಕಾಣುತ್ತದೆ ಅನ್ನೋದು ಸುಳ್ಳಲ್ಲ!

Closing Bell: ದಿನಾಂತ್ಯಕ್ಕೆ ಸಾರ್ವಕಾಲಿಕ ದಾಖಲೆ ಮಟ್ಟಕ್ಕೆ ಸೆನ್ಸೆಕ್ಸ್, ನಿಫ್ಟಿ; ಹೂಡಿಕೆದಾರರ ಸಂಪತ್ತು 3.58 ಲಕ್ಷ ಕೋಟಿ ರೂ. ಹೆಚ್ಚಳ

Published On - 5:33 pm, Mon, 30 August 21

Follow Us
ದೇಶಕ್ಕೆ ಮೋದಿ ಕರ್ನಾಟಕಕ್ಕೆ ಜೆಸಿಬಿ: ಹೊಸ ಪಕ್ಷದ ಸುಳಿವು ಕೊಟ್ಟ ಯತ್ನಾಳ್​​
ದೇಶಕ್ಕೆ ಮೋದಿ ಕರ್ನಾಟಕಕ್ಕೆ ಜೆಸಿಬಿ: ಹೊಸ ಪಕ್ಷದ ಸುಳಿವು ಕೊಟ್ಟ ಯತ್ನಾಳ್​​
ಡಾಗ್ ಸತೀಶ್​​ಗೆ ಟಾಂಗ್ ಕೊಟ್ಟ ಮಾಜಿ ಬಿಗ್​​ಬಾಸ್ ಸ್ಪರ್ಧಿ ರಿಷಿಕಾ ಸಿಂಗ್
ಡಾಗ್ ಸತೀಶ್​​ಗೆ ಟಾಂಗ್ ಕೊಟ್ಟ ಮಾಜಿ ಬಿಗ್​​ಬಾಸ್ ಸ್ಪರ್ಧಿ ರಿಷಿಕಾ ಸಿಂಗ್
ಮುಂಬೈಗೆ ಆರಂಭದಲ್ಲೇ ಮರ್ಮಾಘಾತ ನೀಡಿದ ಭುವಿ
ಮುಂಬೈಗೆ ಆರಂಭದಲ್ಲೇ ಮರ್ಮಾಘಾತ ನೀಡಿದ ಭುವಿ
ಸಚಿವ ಡಿ.ಸುಧಾಕರ್ ಅಂತಿಮ ದರ್ಶನದ ವೇಳೆ ಬಿಕ್ಕಿ ಬಿಕ್ಕಿ ಅತ್ತ ಡಿಕೆಶಿ
ಸಚಿವ ಡಿ.ಸುಧಾಕರ್ ಅಂತಿಮ ದರ್ಶನದ ವೇಳೆ ಬಿಕ್ಕಿ ಬಿಕ್ಕಿ ಅತ್ತ ಡಿಕೆಶಿ
‘ರುದ್ರಾಭಿಷೇಕಂ’ ಸಿನಿಮಾ ಬಗ್ಗೆ ನಟಿ ಪ್ರಿಯಾಂಕಾ ತಿಮ್ಮೇಶ್ ಮಾತು
‘ರುದ್ರಾಭಿಷೇಕಂ’ ಸಿನಿಮಾ ಬಗ್ಗೆ ನಟಿ ಪ್ರಿಯಾಂಕಾ ತಿಮ್ಮೇಶ್ ಮಾತು
ಮೋದಿ ಸಂಚರಿಸುವ ರಸ್ತೆ ಬಳಿ ಜಿಲೆಟಿನ್ ಕಡ್ಡಿ ಪತ್ತೆ: DIG ಹೇಳಿದ್ದಿಷ್ಟು
ಮೋದಿ ಸಂಚರಿಸುವ ರಸ್ತೆ ಬಳಿ ಜಿಲೆಟಿನ್ ಕಡ್ಡಿ ಪತ್ತೆ: DIG ಹೇಳಿದ್ದಿಷ್ಟು
ಮೊದಲ ಭಾಷಣದಲ್ಲೇ ಸಾಲದ ಬಗ್ಗೆ ಮಾತಾಡಿದ ತಮಿಳುನಾಡು ಸಿಎಂ ವಿಜಯ್​​
ಮೊದಲ ಭಾಷಣದಲ್ಲೇ ಸಾಲದ ಬಗ್ಗೆ ಮಾತಾಡಿದ ತಮಿಳುನಾಡು ಸಿಎಂ ವಿಜಯ್​​
ರವಿಶಂಕರ್ ಗುರೂಜಿ ಮಾತಿಗೆ ಪ್ರಧಾನಿ ಮೋದಿಗೂ ನಗು!
ರವಿಶಂಕರ್ ಗುರೂಜಿ ಮಾತಿಗೆ ಪ್ರಧಾನಿ ಮೋದಿಗೂ ನಗು!
ರವಿಶಂಕರ್ ಗುರೂಜಿಯ 100ನೇ ಹುಟ್ಟುಹಬ್ಬಕ್ಕೂ ಬರುತ್ತೇನೆ ಎಂದ ಪ್ರಧಾನಿ ಮೋದಿ
ರವಿಶಂಕರ್ ಗುರೂಜಿಯ 100ನೇ ಹುಟ್ಟುಹಬ್ಬಕ್ಕೂ ಬರುತ್ತೇನೆ ಎಂದ ಪ್ರಧಾನಿ ಮೋದಿ
ಮೋದಿ ಸಂಚರಿಸೋ ರಸ್ತೇಲಿ ಜಿಲೆಟಿನ್ ಕಡ್ಡಿಗಳು ಪತ್ತೆ: ಶಂಕಿತ ಪೊಲೀಸ್ ವಶಕ್ಕೆ
ಮೋದಿ ಸಂಚರಿಸೋ ರಸ್ತೇಲಿ ಜಿಲೆಟಿನ್ ಕಡ್ಡಿಗಳು ಪತ್ತೆ: ಶಂಕಿತ ಪೊಲೀಸ್ ವಶಕ್ಕೆ