AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಬೈಲ್​ನಲ್ಲಿ ಗೇಮ್ ಆಡದಂತೆ ತಂದೆ ತಡೆದಿದ್ದಕ್ಕೆ ಮನೆಬಿಟ್ಟು ಹೋದ ಮೂವರು ಮಕ್ಕಳು

ಮೊಬೈಲ್​ನಲ್ಲಿ ಗೇಮ್ ಆಡದಂತೆ ತಂದೆ ತಡೆದಿದ್ದಕ್ಕೆ ಮೂವರು ಅಪ್ರಾಪ್ತ ಮಕ್ಕಳು ಮನೆ ಬಿಟ್ಟು ಹೋಗಿರುವ ಘಟನೆ ಗುಜರಾತ್​ನ ಸೂರತ್​ನಲ್ಲಿ ನಡೆದಿದೆ. ಫ್ರೀ ಫೈರ್ ಗೇಮ್ ದಿನವಿಡೀ ಆಡುತ್ತಿದ್ದರು, ಇದಕ್ಕೆ ಕೋಪಗೊಂಡ ತಂದೆ ಗೇಮ್ ಆಡಬೇಡಿ ಎಂದು ಮೊಬೈಲ್ ಕಿತ್ತಿಟ್ಟುಕೊಂಡಿದ್ದರು. ಮೂವರು ಮನೆಯಿಂದ 15,000 ರೂ. ತೆಗೆದುಕೊಂಡು ಹೋಗಿದ್ದಾರೆಂದು ಆರೋಪಿಸಲಾಗಿದೆ.

ಮೊಬೈಲ್​ನಲ್ಲಿ ಗೇಮ್ ಆಡದಂತೆ ತಂದೆ ತಡೆದಿದ್ದಕ್ಕೆ ಮನೆಬಿಟ್ಟು ಹೋದ ಮೂವರು ಮಕ್ಕಳು
ಮಕ್ಕಳುImage Credit source: Google Gemini
ನಯನಾ ರಾಜೀವ್
|

Updated on: May 22, 2026 | 9:14 AM

Share

ಸೂರತ್, ಮೇ 22: ಮೊಬೈಲ್​(Mobile)ನಲ್ಲಿ ಗೇಮ್ ಆಡದಂತೆ ತಂದೆ ತಡೆದಿದ್ದಕ್ಕೆ ಮೂವರು ಅಪ್ರಾಪ್ತ ಮಕ್ಕಳು ಮನೆ ಬಿಟ್ಟು ಹೋಗಿರುವ ಘಟನೆ ಗುಜರಾತ್​ನ ಸೂರತ್​ನಲ್ಲಿ ನಡೆದಿದೆ. ಫ್ರೀ ಫೈರ್ ಗೇಮ್ ದಿನವಿಡೀ ಆಡುತ್ತಿದ್ದರು, ಇದಕ್ಕೆ ಕೋಪಗೊಂಡ ತಂದೆ ಗೇಮ್ ಆಡಬೇಡಿ ಎಂದು ಮೊಬೈಲ್ ಕಿತ್ತಿಟ್ಟುಕೊಂಡಿದ್ದರು. ಮೂವರು ಮನೆಯಿಂದ 15,000 ರೂ. ತೆಗೆದುಕೊಂಡು ಹೋಗಿದ್ದಾರೆಂದು ಆರೋಪಿಸಲಾಗಿದೆ.

ಅವರು ಮುಂಬೈ ರೈಲು ಹತ್ತಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.ಪೊಲೀಸರ ಪ್ರಕಾರ ಕಾಣೆಯಾದ ಮಕ್ಕಳ ವಯಸ್ಸು 14, 11 ಮತ್ತು 9 ವರ್ಷ, ಅವರಲ್ಲಿ ಒಬ್ಬ ಬಾಲಕಿ ಕೂಡ ಇದ್ದಾಳೆ. ಮೇ 19ರ ಬೆಳಗಿನ ಜಾವ ಕುಟುಂಬದವರೆಲ್ಲಾ ಮಲಗಿರುವಾಗ ಅವರು ಮನೆಯಿಂದ ಓಡಿ ಹೋಗಿದ್ದಾರೆ.

ಮಕ್ಕಳು ತಮ್ಮ ತಂದೆಯ ಮೊಬೈಲ್ ಫೋನ್‌ನಲ್ಲಿ ಜನಪ್ರಿಯ ಆನ್‌ಲೈನ್ ಬ್ಯಾಟಲ್ ಗೇಮ್ ಗರೆನಾ ಫ್ರೀ ಫೈರ್ ಆಡುತ್ತಿದ್ದರು, ಅದರ ದಾಸರಾಗಿದ್ದರು ಎಂದರೂ ತಪ್ಪಾಗಲಾರದು. ತಂದೆ ಕಳೆದ ತಿಂಗಳ ಕೊನೆಯಲ್ಲಿ ತನ್ನ ಹಳ್ಳಿಗೆ ಹೋಗುವಾಗ ಆಕಸ್ಮಿಕವಾಗಿ ತನ್ನ ಫೋನ್ ಅನ್ನು ಮನೆಯಲ್ಲಿಯೇ ಬಿಟ್ಟು ಹೋಗಿದ್ದರು. ಅವರು ಇರಲಿಲ್ಲವೆಂದು, ಮಕ್ಕಳು ಮೊಬೈಲ್​ನಲ್ಲಿ ಆಟಗಳನ್ನು ಆಡುತ್ತಾ ಕಾಲ ಕಳೆದಿದ್ದರು ಎಂದು ಆರೋಪಿಸಲಾಗಿದೆ.

ತಂದೆ ಮನೆಗೆ ಹಿಂದಿರುಗಿದಾಗ ತಮ್ಮ ಮಕ್ಕಳು ಮೊಬೈಲ್ ಗೇಮ್ ಹುಚ್ಚು ಹಿಡಿಸಿಕೊಂಡಿದ್ದಾರೆ ಎಂದು ತಾಯಿ ದೂರು ಕೊಟ್ಟಿದ್ದರು.ಈ ಅಭ್ಯಾಸವನ್ನು ನಿಲ್ಲಿಸುವ ಪ್ರಯತ್ನದಲ್ಲಿ, ಘಟನೆಗೆ ಮೂರು ದಿನಗಳ ಮೊದಲು ತಂದೆ ಫೋನ್‌ನಿಂದ ಸಿಮ್ ಕಾರ್ಡ್ ತೆಗೆದು ಮೊಬೈಲ್ ಅನ್ನು ಲಾಕ್ ಮಾಡಿದ್ದರು ಎಂದು ವರದಿಯಾಗಿದೆ. ಈ ನಿರ್ಬಂಧದಿಂದ ಮಕ್ಕಳು ಕೋಪಗೊಂಡರು, ನಂತರ ಅವರು ಮನೆ ಬಿಡಲು ನಿರ್ಧರಿಸಿರಬಹುದು ಎಂದಿದ್ದಾರೆ.

ಮತ್ತಷ್ಟು ಓದಿ: ಹುಬ್ಬಳ್ಳಿ ಏರ್‌ಪೋರ್ಟ್‌ಗೆ ಬಂತು ಹೈಟೆಕ್ ‘ಮೂವಿಂಗ್ ಆಫೀಸ್’: ನೆಟ್‌ವರ್ಕ್ ಇಲ್ಲದಿದ್ದರೂ ಕೆಲಸ ಮಾಡುತ್ತೆ ಈ ಸ್ಯಾಟಲೈಟ್ ವಾಹನ!

ಸೂರತ್‌ನ ಜವಳಿ ಉದ್ಯಮದಲ್ಲಿ ತೊಡಗಿರುವ ಕಾರ್ಮಿಕ ಕುಟುಂಬಕ್ಕೆ ಸೇರಿದ ಈ ಮಕ್ಕಳು ಮನೆಯಿಂದ ಹೊರಡುವ ಮೊದಲು 15 ಸಾವಿರ ರೂ. ತೆಗೆದುಕೊಂಡು ಹೋಗಿದ್ದರು. ಮಕ್ಕಳು ಕಾಣೆಯಾಗಿರುವುದನ್ನು ಕಂಡುಕೊಂಡ ನಂತರ, ಕುಟುಂಬವು ತಕ್ಷಣವೇ ಪೊಲೀಸರನ್ನು ಸಂಪರ್ಕಿಸಿ ದೂರು ದಾಖಲಿಸಿತು. ಮಕ್ಕಳು ಹೆಚ್ಚಿನ ಸಮಯವನ್ನು ಮೊಬೈಲ್ ಆಟಗಳನ್ನು ಆಡುವುದರಲ್ಲಿ ಮತ್ತು ಅಂತಹುದೇ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರಲ್ಲಿ ಕಳೆಯುತ್ತಿದ್ದರು.ಇದರಿಂದ ಅಸಮಾಧಾನಗೊಂಡ ತಂದೆ ಅವರನ್ನು ಗದರಿಸಿ ಸಲಹೆ ನೀಡಿದ್ದರು.

ಮಕ್ಕಳು ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಕೆಲವು ವಸ್ತುಗಳು ಮತ್ತು ನಗದು ತೆಗೆದುಕೊಂಡು ಮನೆಯಿಂದ ಹೊರಟು ಹೋಗಿದ್ದಾರೆ. ಇಲ್ಲಿಯವರೆಗೆ ಪರಿಶೀಲಿಸಲಾದ ಸಿಸಿಟಿವಿ ದೃಶ್ಯಾವಳಿಗಳು ಮಕ್ಕಳು ಸುರಕ್ಷಿತವಾಗಿರುವಂತೆ ಕಾಣುತ್ತಿವೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ