AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದರಾಬಾದ್‌ಗೆ 3 ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳ ಭಾಗ್ಯ, ಇದು ಬೆಂಗಳೂರಿಗೂ ವರದಾನ

ಹೈದರಾಬಾದ್​​ಗೆ ಮತ್ತೆ ಮೂರು ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಯೋಜನೆಯನ್ನು ನೀಡುವ ಸಾಧ್ಯತೆ ಇದೆ. ಈ ಮೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳು ಕಾಚೆಗುಡ-ಯಶವಂತಪುರ (ಬೆಂಗಳೂರು) ಸಿಕಂದರಾಬಾದ್-ಪುಣೆ, ಸಿಕಂದರಾಬಾದ್-ನಾಗ್ಪುರದಂತಹ ಮಾರ್ಗಗಳನ್ನು ಒಳಗೊಂಡಿವೆ ಎಂದು ಹೇಳಲಾಗಿದೆ.

ಹೈದರಾಬಾದ್‌ಗೆ 3 ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳ ಭಾಗ್ಯ, ಇದು ಬೆಂಗಳೂರಿಗೂ ವರದಾನ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Aug 26, 2023 | 5:10 PM

Share

ಹೈದರಾಬಾದ್, ಆ.26 : ತೆಲಂಗಾಣಕ್ಕೆ ಕೇಂದ್ರ ಸರ್ಕಾರ ಬಂಪರ್​​ ಕೂಡುಗೆ ನೀಡಲಿದೆ. ಹೈದರಾಬಾದ್​​ಗೆ ಮತ್ತೆ ಮೂರು ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು (Vande bharat express) ಯೋಜನೆಯನ್ನು ನೀಡುವ ಸಾಧ್ಯತೆ ಇದೆ. ಈ ಮೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳು ಕಾಚೆಗುಡ-ಯಶವಂತಪುರ (ಬೆಂಗಳೂರು) ಸಿಕಂದರಾಬಾದ್-ಪುಣೆ, ಸಿಕಂದರಾಬಾದ್-ನಾಗ್ಪುರದಂತಹ ಮಾರ್ಗಗಳನ್ನು ಒಳಗೊಂಡಿವೆ ಎಂದು ಹೇಳಲಾಗಿದೆ. ಯಶವಂತಪುರ ಮತ್ತು ನಾಗ್ಪುರ ಮಾರ್ಗಗಳ ಪ್ರಯೋಗಗಳು ಈಗಾಗಲೇ ಪೂರ್ಣಗೊಂಡಿದ್ದು, ಪುಣೆ ಮಾರ್ಗದಲ್ಲಿ ಶತಾಬ್ದಿ ಎಕ್ಸ್‌ಪ್ರೆಸ್​​ ಬದಲಿಸಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ನೀಡುವ ಸಾಧ್ಯತೆಯಿದೆ. ಈಗಾಗಲೇ ತಿರುಪತಿ, ವೈಜಾಗ್ ಮಾರ್ಗಗಳಲ್ಲಿ ಎರಡು ವಂದೇ ಭಾರತ್ ಎಕ್ಸ್‌ಪ್ರೆಸ್ ಪ್ರಾರಂಭಿಸಿದೆ. ಇನ್ನು ಈ ಮೂರು ರೈಲು ಬಂದರೆ ತೆಲಂಗಾಣದಲ್ಲಿ ಭಾರತ್ ಎಕ್ಸ್‌ಪ್ರೆಸ್ ರೈಲಿನ ಸಂಖ್ಯೆ ಐದಕ್ಕೆ ಏರಲಿದೆ.

ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳು ಗರಿಷ್ಠ 130 ಕಿಮೀ ವೇಗದಲ್ಲಿ ಓಡುವ ಕಾರಣ, ದಕ್ಷಿಣ ಮಧ್ಯ ರೈಲ್ವೆ ಈಗಾಗಲೇ ತನ್ನ ರೈಲು ಜಾಲವನ್ನು ನವೀಕರಿಸಿದೆ. ಪ್ರಸ್ತುತ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲುಗಳಲ್ಲಿ ಹೈದರಾಬಾದ್‌ನಿಂದ ಬೆಂಗಳೂರಿಗೆ 10-12 ಗಂಟೆ ಪ್ರಯಾಣ ಸಮಯವನ್ನು ತೆಗೆದುಕೊಳ್ಳುತ್ತದೆ. ಆದರೆ ವಂದೇ ಭಾರತ್ ರೈಲು ಈ ಪ್ರಯಾಣದ ಸಮಯವನ್ನು ಅದಕ್ಕಿಂತ 8.3 ಗಂಟೆಗಳವರೆಗೆ ಕಡಿತಗೊಳಿಸುವ ನಿರೀಕ್ಷೆಯಿದೆ. ರೈಲು ಕಾಚೇಗೌಡ ರೈಲು ನಿಲ್ದಾಣದಲ್ಲಿ ಬೆಳಗ್ಗೆ 6 ಗಂಟೆಗೆ ಆರಂಭವಾಗಲಿದ್ದು, ಮಧ್ಯಾಹ್ನ 2.30ಕ್ಕೆ ಯಶವಂತಪುರಕ್ಕೆ ತಲುಪಲಿದೆ. ಮತ್ತೆ ಯಶವಂತಪುರದಿಂದ ಮಧ್ಯಾಹ್ನ 3 ಗಂಟೆಗೆ ರೈಲು ಆರಂಭಗೊಂಡು ರಾತ್ರಿ 11.30ಕ್ಕೆ ಕಾಚೇಗೌಡ ತಲುಪಲಿದೆ.

ಇದನ್ನೂ ಓದಿ:ಬೆಂಗಳೂರು ಹೈದರಾಬಾದ್ ವಂದೇ ಭಾರತ್ ಎಕ್ಸ್​​ಪ್ರೆಸ್ ರೈಲಿಗೆ ಶೀಘ್ರ ಚಾಲನೆ

ಇನ್ನು ಸಿಕಂದರಾಬಾದ್-ಪುಣೆ 8.25 ಗಂಟೆಗಳನ್ನು ತೆಗೆದುಕೊಳ್ಳುವ ಶತಾಬ್ದಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಬದಲಾಯಿಸಿ ವಂದೇ ಭಾರತ್ ರೈಲುಗಳನ್ನು ನೀಡಿದರೆ, ಪ್ರಯಾಣದ ಸಮಯವನ್ನು ಮತ್ತಷ್ಟು ಕಡಿತಗೊಳಿಸುತ್ತದೆ. ಸಿಕಂದರಾಬಾದ್-ನಾಗ್ಪುರ ಮಾರ್ಗವು ಕಾಜಿಪೇಟ್, ರಾಮಗುಂಡಂ, ಮಂಚೇರಿಯಲ್, ಸಿರ್ಪುರ್ ಕಾಗಜ್‌ನಗರ ಮತ್ತು ಬಲ್ಹರ್ಷಾದಲ್ಲಿ ನಿಲುಗಡೆಗಳನ್ನು ಹೊಂದಿರುತ್ತದೆ. ಈಗಾಗಲೇ ಇಲ್ಲಿದೆ ಪ್ರಯಾಣದ ಸಮಯ 7 ಗಂಟೆ 30 ನಿಮಿಷಗಳು ಇದ್ದರೆ. ವಂದೇ ಭಾರತ್ ರೈಲು ಎರಡು ಗಂಟೆ ಪ್ರಯಾಣವನ್ನು ಕಡಿತಗೊಳಿಸುವ ನಿರೀಕ್ಷೆಯಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ