AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ-ಚೀನಾ ಸಂಬಂಧಕ್ಕೆ 3 ಪರಸ್ಪರ ಸೂತ್ರವೇ ದಿಕ್ಸೂಚಿ; ಕ್ಸಿ ಜಿನ್‌ಪಿಂಗ್‌ಗೆ ಪ್ರಧಾನಿ ಮೋದಿ ಸಂದೇಶ

ನವದೆಹಲಿಯಲ್ಲಿ ನಡೆದ ಬ್ರಿಕ್ಸ್ (BRICS) ಶೃಂಗಸಭೆಯ ನೇಪಥ್ಯದಲ್ಲಿ ಜರುಗಿದ ಈ ಮಹತ್ವದ ದ್ವಿಪಕ್ಷೀಯ ಸಭೆಯಲ್ಲಿ, ಭಾರತ-ಚೀನಾ ಗಡಿ ಪ್ರದೇಶಗಳಲ್ಲಿ ಶಾಂತಿ ಕಾಪಾಡುವುದು ಮತ್ತು ಬಾಂಧವ್ಯ ಸುಧಾರಣೆಗೆ 'ಮೂರು ಪರಸ್ಪರ' ತತ್ವಗಳನ್ನು ಅನುಸರಿಸುವುದು ಅತ್ಯಗತ್ಯ ಎಂದು ಪ್ರಧಾನಿ ಒತ್ತಿಹೇಳಿದ್ದಾರೆ. ಭಾರತ ಮತ್ತು ಚೀನಾ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು ಸೌಹಾರ್ದಯುತವಾಗಿ ಮರುಸ್ಥಾಪಿಸುವ ಪ್ರಯತ್ನಗಳ ನಡುವೆ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರೊಂದಿಗಿನ ಮಾತುಕತೆಯ ವೇಳೆ ಭಾರತದ ಕಳವಳಗಳನ್ನು ಸ್ಪಷ್ಟವಾಗಿ ಮಂಡಿಸಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.

ಭಾರತ-ಚೀನಾ ಸಂಬಂಧಕ್ಕೆ 3 ಪರಸ್ಪರ ಸೂತ್ರವೇ ದಿಕ್ಸೂಚಿ; ಕ್ಸಿ ಜಿನ್‌ಪಿಂಗ್‌ಗೆ ಪ್ರಧಾನಿ ಮೋದಿ ಸಂದೇಶ
ನರೇಂದ್ರ ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್Image Credit source: PTI
ಸುಷ್ಮಾ ಚಕ್ರೆ
|

Updated on: Sep 15, 2026 | 8:27 PM

Share

ನವದೆಹಲಿ, ಸೆಪ್ಟೆಂಬರ್ 15: ನವದೆಹಲಿಯಲ್ಲಿ ನಡೆದ ಬ್ರಿಕ್ಸ್ (BRICS) ಶೃಂಗಸಭೆಯ ವೇಳೆ ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ನಡುವೆ ನಡೆದ ದ್ವಿಪಕ್ಷೀಯ ಸಭೆಯಲ್ಲಿ, ಭಾರತ-ಚೀನಾ ಬಾಂಧವ್ಯಕ್ಕೆ 3 ಪರಸ್ಪರ ಸೂತ್ರಗಳೇ ದಿಕ್ಸೂಚಿಯಾಗಬೇಕು ಎಂದು ಎರಡೂ ದೇಶಗಳು ಒಪ್ಪಿಕೊಂಡಿವೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ತಿಳಿಸಿದ್ದಾರೆ. ಇಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರಧಾನಿ ಮೋದಿ ಭಾರತದ ಭದ್ರತಾ ಕಾಳಜಿಗಳನ್ನು ಪ್ರತಿಪಾದಿಸಿದ್ದು, ಉಭಯ ದೇಶಗಳು ಪರಸ್ಪರ ಗೌರವ, ಪರಸ್ಪರ ಹಿತಾಸಕ್ತಿ ಮತ್ತು ಪರಸ್ಪರ ಸೂಕ್ಷ್ಮತೆ ಎಂಬ 3 ತತ್ವಗಳಿಗೆ ಬದ್ಧವಾಗಿರಬೇಕು ಎಂದು ಚೀನಾಗೆ ಸ್ಪಷ್ಟಪಡಿಸಿದ್ದಾರೆ ಎಂದು ಹೇಳಿದ್ದಾರೆ.

ಭಾರತ-ಚೀನಾ ಸಂಬಂಧವನ್ನು ಕೇವಲ ಪ್ರಸ್ತುತ ಸನ್ನಿವೇಶಕ್ಕೆ ಸೀಮಿತಗೊಳಿಸದೆ, ಕಾರ್ಯತಂತ್ರ ಹಾಗೂ ದೀರ್ಘಕಾಲೀನ ದೃಷ್ಟಿಕೋನದಿಂದ ನೋಡಲಾಗುವುದು. ಉಭಯ ದೇಶಗಳ ನಡುವಿನ ಭಿನ್ನಾಪ್ರಾಯಗಳು ಯಾವುದೇ ಕಾರಣಕ್ಕೂ ವಿವಾದಗಳಾಗಿ ರೂಪಾಂತರಗೊಳ್ಳಲು ಬಿಡುವುದಿಲ್ಲ. ಗಡಿ ವಿವಾದಕ್ಕೆ ಎರಡೂ ದೇಶಗಳಿಗೆ ಸಮ್ಮತವಾಗುವಂತಹ ನ್ಯಾಯಯುತ ಹಾಗೂ ಶಾಶ್ವತ ಪರಿಹಾರವನ್ನು ಕಂಡುಕೊಳ್ಳಲಾಗುವುದು. ದ್ವಿಪಕ್ಷೀಯ ವಾಣಿಜ್ಯ ಹಾಗೂ ಸಾಂಸ್ಕೃತಿಕ ವಿನಿಮಯವನ್ನು ಮತ್ತಷ್ಟು ಬಲಪಡಿಸಲಾಗುವುದು ಎಂದು ಈ ವೇಳೆ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಇದನ್ನೂ ಓದಿ: ಎಲ್‌ಎಸಿಯಲ್ಲಿ ಚೀನಾ ಸೇನಾ ನಿಯೋಜನೆ ಇಳಿಕೆ, ಆದರೂ ಬೆದರಿಕೆ ತಪ್ಪಿಲ್ಲ: ರಕ್ಷಣಾ ಸಚಿವಾಲಯದ ವಾರ್ಷಿಕ ವರದಿಯಲ್ಲಿ ಎಚ್ಚರಿಕೆ

ಕಳೆದ ವರ್ಷದ ಆಗಸ್ಟ್‌ನಲ್ಲಿ ನಡೆದ ತಿಯಾಂಜಿನ್ ಭೇಟಿಯ ನಂತರ ಭಾರತ-ಚೀನಾ ಬಾಂಧವ್ಯದಲ್ಲಿ ಕಂಡುಬಂದಿರುವ ಸುಧಾರಣೆಯನ್ನು ಉಭಯ ನಾಯಕರು ಸ್ವಾಗತಿಸಿದ್ದು, ಯಾವುದೇ ಭಿನ್ನಾಪ್ರಾಯಗಳು ವಿವಾದಗಳಾಗಿ ರೂಪಾಂತರಗೊಳ್ಳಬಾರದು ಎಂದು ಒಪ್ಪಿಕೊಂಡರು.

ಎರಡೂ ದೇಶಗಳ ನಾಗರಿಕರ ನಡುವಿನ ಪ್ರವಾಸ ಮತ್ತು ಮುಕ್ತ ಸಂಚಾರವನ್ನು ಉತ್ತೇಜಿಸಲಾಗುವುದು. ಉಭಯ ದೇಶಗಳ ವ್ಯಾಪಾರ, ಹೂಡಿಕೆ ಮತ್ತು ಆರ್ಥಿಕ ಕಾಳಜಿಗಳಿಗೆ ಪರಸ್ಪರ ಚರ್ಚೆಯ ಮೂಲಕ ಶೀಘ್ರ ಪರಿಹಾರ ಕಂಡುಕೊಳ್ಳಲಾಗುವುದು. ಪ್ರಾದೇಶಿಕ ಹಾಗೂ ಜಾಗತಿಕ ಸವಾಲುಗಳನ್ನು ಎದುರಿಸುವಲ್ಲಿ ಜಂಟಿ ಸಹಕಾರವನ್ನು ಹೆಚ್ಚಿಸಲಾಗುವುದು ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ತಿಳಿಸಿದ್ದಾರೆ.

ಇದನ್ನೂ ಓದಿ: ಬ್ರಿಕ್ಸ್ ಸಭೆ; ಭಾರತದಲ್ಲಿ ಬದಲಾದ ಚೀನಾ ಭಾಷೆ; ಚಿಕ್ಕ ದೊಡ್ಡ ದೇಶಗಳೆಲ್ಲವೂ ಸಮಾನವೇ ಎಂದ ಷಿ; ಐದು ಉಪಕ್ರಮಗಳ ಘೋಷಣೆ

‘ಕೋರ್’ ವಿಷಯಗಳಿಗೆ ಗೌರವದ ಅಗತ್ಯ:

ವಿದೇಶಾಂಗ ಸಚಿವಾಲಯದ ಪ್ರಕಾರ, ಪ್ರಧಾನಿಯವರು ಉಭಯ ದೇಶಗಳ ನಡುವಿನ ಭಿನ್ನಾಪ್ರಾಯಗಳನ್ನು ಹಂತ ಹಂತವಾಗಿ ಶಮನಗೊಳಿಸಲು ಮತ್ತು ಭಾರತದ ಭದ್ರತೆ ಹಾಗೂ ಆರ್ಥಿಕತೆಗೆ ಸಂಬಂಧಿಸಿದ ಮೂಲಭೂತ ಕಾಳಜಿಗಳಿಗೆ ಚೀನಾ ಸೂಕ್ತ ಗೌರವ ನೀಡಬೇಕೆಂದು ಪ್ರತಿಪಾದಿಸಿದರು. ಗಡಿ ಪ್ರದೇಶಗಳಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡುವುದು ಉಭಯ ದೇಶಗಳ ಸಂಬಂಧಗಳ ನಿರಂತರ ಸುಧಾರಣೆಗೆ ಮೊದಲ ನಿಯಮವಾಗಿದೆ. ಗಡಿ ಸಂಬಂಧಿತ ಹಳೆಯ ಒಪ್ಪಂದಗಳು ಹಾಗೂ ತಿಳುವಳಿಕೆಗಳನ್ನು ಎರಡೂ ದೇಶಗಳು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಮೋದಿ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೊಪ್ಪಳ ಹಾಸ್ಟೆಲ್​​ಗೆ ಬಂದು ತಿಗಣಿಗೆ ಮದ್ದು ನೀಡಿದ ಚೆನ್ನೈ ತಜ್ಞರು
ಕೊಪ್ಪಳ ಹಾಸ್ಟೆಲ್​​ಗೆ ಬಂದು ತಿಗಣಿಗೆ ಮದ್ದು ನೀಡಿದ ಚೆನ್ನೈ ತಜ್ಞರು
ಬಿಗ್​​ಬಾಸ್​​ ಮನೆಯಿಂದ ಹೊರಬಂದಿದ್ದಕ್ಕೆ ಕಾರಣ ತಿಳಿಸಿದ ಓಂ ಪ್ರಕಾಶ್ ರಾವ್
ಬಿಗ್​​ಬಾಸ್​​ ಮನೆಯಿಂದ ಹೊರಬಂದಿದ್ದಕ್ಕೆ ಕಾರಣ ತಿಳಿಸಿದ ಓಂ ಪ್ರಕಾಶ್ ರಾವ್
ಕೆಡಿಪಿ ಸಭೆಗೆ ಪೊಲೀಸ್ ಆಯುಕ್ತ ಗೈರಾಗಿದ್ದಕ್ಕೆ ಸಚಿವ ಯು.ಟಿ.ಖಾದರ್ ಗರಂ
ಕೆಡಿಪಿ ಸಭೆಗೆ ಪೊಲೀಸ್ ಆಯುಕ್ತ ಗೈರಾಗಿದ್ದಕ್ಕೆ ಸಚಿವ ಯು.ಟಿ.ಖಾದರ್ ಗರಂ
ಗಂಭೀರ ಪಡೆದುಕೊಂಡ ಜಾರಕಿಹೊಳಿ ಕೇಸ್: ಇಡಿ ಸಭೆಯಲ್ಲಿ ಮಹತ್ವದ ಚರ್ಚೆ
ಗಂಭೀರ ಪಡೆದುಕೊಂಡ ಜಾರಕಿಹೊಳಿ ಕೇಸ್: ಇಡಿ ಸಭೆಯಲ್ಲಿ ಮಹತ್ವದ ಚರ್ಚೆ
LIVE: ಕೇಂದ್ರ ಸಚಿವ ಜೆ.ಪಿ‌.ನಡ್ಡಾ ಮಹತ್ವದ ಸುದ್ದಿಗೋಷ್ಠಿ
LIVE: ಕೇಂದ್ರ ಸಚಿವ ಜೆ.ಪಿ‌.ನಡ್ಡಾ ಮಹತ್ವದ ಸುದ್ದಿಗೋಷ್ಠಿ
ಕ್ಯಾರೆಕ್ಟರ್ ಲೆಸ್ ಎಂದ ಮಂಜ, ಗಂಡಸೇ ಅಲ್ಲ ಎಂದ ಕಾವ್ಯಾ: ವಿಡಿಯೋ
ಕ್ಯಾರೆಕ್ಟರ್ ಲೆಸ್ ಎಂದ ಮಂಜ, ಗಂಡಸೇ ಅಲ್ಲ ಎಂದ ಕಾವ್ಯಾ: ವಿಡಿಯೋ
ಟಿ.ನರಸೀಪುರ ಇನ್ಸ್​​​ಪೆಕ್ಟರ್ ಪರ ಡಿಕೆ ಶಿವಕುಮಾರ್ ಬ್ಯಾಟಿಂಗ್
ಟಿ.ನರಸೀಪುರ ಇನ್ಸ್​​​ಪೆಕ್ಟರ್ ಪರ ಡಿಕೆ ಶಿವಕುಮಾರ್ ಬ್ಯಾಟಿಂಗ್
ವೈಷ್ಣವಿ ಬಟ್ಟೆ ಬಗ್ಗೆ ಅವಿನಾಶ್ ಕಮೆಂಟ್; ಉತ್ತರಿಸಿದ ಪ್ರಥಮಾ
ವೈಷ್ಣವಿ ಬಟ್ಟೆ ಬಗ್ಗೆ ಅವಿನಾಶ್ ಕಮೆಂಟ್; ಉತ್ತರಿಸಿದ ಪ್ರಥಮಾ
ರಮೇಶ್​​ ಬಳಿಕ ಸತೀಶ್ ಜಾರಕಿಹೊಳಿ ಮುಗಿಸಲೂ ಯತ್ನ: ಕುಮಾರಸ್ವಾಮಿ
ರಮೇಶ್​​ ಬಳಿಕ ಸತೀಶ್ ಜಾರಕಿಹೊಳಿ ಮುಗಿಸಲೂ ಯತ್ನ: ಕುಮಾರಸ್ವಾಮಿ
"ನಮ್ಮ ಕುಟುಂಬದ ಧ್ವನಿ ಅಡಗಿಸಲು ಸಾಧ್ಯವಿಲ್ಲ": ಕುಮಾರಸ್ವಾಮಿ