AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಎನ್‌ಜಿಸಿ ತೈಲ ಸಂಸ್ಕರಣಾ ಘಟಕದ ಬಳಿ ಬೆಳಗಿನ ಜಾವ ಮೂವರು ಉದ್ಯೋಗಿಗಳ ಅಪಹರಣ

ONGC employees abducted| ಅಸ್ಸಾಂನ ಶಿವಸಾಗರ ಜಿಲ್ಲೆಯ ಲಖ್ವಾದಿಂದ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಈ ಮೂವರನ್ನು ಇಂದು ಬೆಳಗಿನ ಜಾವ ಅಪಹರಿಸಿದ್ದಾರೆ ಎಂದು ತಿಳಿದುಬಂದಿದೆ.

ಒಎನ್‌ಜಿಸಿ ತೈಲ ಸಂಸ್ಕರಣಾ ಘಟಕದ ಬಳಿ ಬೆಳಗಿನ ಜಾವ ಮೂವರು ಉದ್ಯೋಗಿಗಳ ಅಪಹರಣ
ತೈಲ ಸಂಸ್ಕರಣಾ ಘಟಕದ ಬಳಿ ಬೆಳಗಿನ ಜಾವ ಒಎನ್‌ಜಿಸಿಯ ಮೂವರು ಉದ್ಯೋಗಿಗಳ ಅಪಹರಣ
ಸಾಧು ಶ್ರೀನಾಥ್​
|

Updated on:Apr 21, 2021 | 9:54 AM

Share

ಶಿವಸಾಗರ: ಸರ್ಕಾರಿ ಸ್ವಾಮ್ಯದ ಒಎನ್‌ಜಿಸಿ ಸಂಸ್ಥೆಯ ತೈಲ ಸಂಸ್ಕರಣಾ ಘಟಕದ ಬಳಿ ಮೂವರು ಉದ್ಯೋಗಿಗಳನ್ನು ಅಪಹರಣ ಮಾಡಲಾಗಿದೆ. ಇಬ್ಬರು ಸಹಾಯಕ ಜೂನಿಯರ್ ಇಂಜಿನಿಯರ್‌ಗಳು ಮತ್ತು ಓರ್ವ ಜೂನಿಯರ್ ಟೆಕ್ನಿಷಿಯನ್​ನ್ನು ಅಪಹರಣಕ್ಕೀಡಾಗಿದ್ದಾರೆ. ಅಸ್ಸಾಂನ ಶಿವಸಾಗರ ಜಿಲ್ಲೆಯ ಲಖ್ವಾದಿಂದ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಈ ಮೂವರನ್ನು ಇಂದು ಬೆಳಗಿನ ಜಾವ ಅಪಹರಿಸಿದ್ದಾರೆ ಎಂದು ತಿಳಿದುಬಂದಿದೆ.

ಅಪಹರಣಕ್ಕೀಡಾದ ಉದ್ಯೋಗಿಗಳನ್ನು ಶಸ್ತ್ರಸಜ್ಜಿತ ದುಷ್ಕರ್ಮಿಗಳು ONGC ಸಂಸ್ಥೆಯ ವಾಹನದಲ್ಲೇ ಅಪಹರಣ ಮಾಡಿದ್ದಾರೆ. ಬಳಿಕ ವಾಹನವನ್ನು ಅಸ್ಸಾಂ-ನಾಗಾಲ್ಯಾಂಡ್​ ಗಡಿ ಭಾಗದಲ್ಲಿ ನಿಮೋನಗಢ ಅರಣ್ಯ ಪ್ರದೇಶದ ಬಳಿ ಬಿಟ್ಟುಹೋಗಿದ್ದಾರೆ. ಸ್ಥಳೀಯ ಆಡಳಿತ, ಪೊಲೀಸರಿಗೆ ಘಟನೆಯ ಬಗ್ಗೆ ಮಾಹಿತಿ ನೀಡಲಾಗಿದೆ. ಸ್ಥಳೀಯ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ. ರಾಜ್ಯದ ಉನ್ನತ ಪೊಲೀಸ್​ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ ಎಂದು ONGC ಮೂಲಗಳು ಹೇಳಿವೆ. ಅಪ್ಪರ್​ ಅಸ್ಸಾಂನ ಈ ಭಾಗದಲ್ಲಿ 1960ರಿಂದಲೂ ONGC ಸಂಸ್ಥೆ ತೈಲ ಮತ್ತು ಅನಿಲವನ್ನು ಉತ್ಪಾದಿಸುತ್ತಾ ಬಂದಿದೆ.

(three ONGC employees abducted by unknown armed miscreants in the early hours of 21 April 2021 at rig site in Lakwa Sivasagar Assam)

Published On - 9:44 am, Wed, 21 April 21

ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ
‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ
ಎಕ್ಸ್​ಟ್ರಾ ಕಾಫಿ ಕಪ್​ಗಾಗಿ ಗಲಾಟೆ: ಹೋಟೆಲ್‌ ಸಿಬ್ಬಂದಿ ಮೇಲೆ ಹಲ್ಲೆ!
ಎಕ್ಸ್​ಟ್ರಾ ಕಾಫಿ ಕಪ್​ಗಾಗಿ ಗಲಾಟೆ: ಹೋಟೆಲ್‌ ಸಿಬ್ಬಂದಿ ಮೇಲೆ ಹಲ್ಲೆ!
ಸುಖಾಸುಮ್ಮನೆ ಹೇಳಿಕೆ ನೀಡುವ ರಾಜಕಾರಣಿಗೆ ಯದುವೀರ್ ಮಾದರಿ
ಸುಖಾಸುಮ್ಮನೆ ಹೇಳಿಕೆ ನೀಡುವ ರಾಜಕಾರಣಿಗೆ ಯದುವೀರ್ ಮಾದರಿ
ಸ್ವಯಂ ನಿವೃತ್ತಿ ಬಗ್ಗೆ ಎಎಸ್​ಪಿ ನಾರಾಯಣ ಭರಮನಿ ಮೊದಲ ಪ್ರತಿಕ್ರಿಯೆ
ಸ್ವಯಂ ನಿವೃತ್ತಿ ಬಗ್ಗೆ ಎಎಸ್​ಪಿ ನಾರಾಯಣ ಭರಮನಿ ಮೊದಲ ಪ್ರತಿಕ್ರಿಯೆ
ಕೋವಿಡ್ ಲಸಿಕೆ ಪಡೆದವರಲ್ಲಿ ಹೃದಯಾಘಾತ ಅಪಾಯ ಕಡಿಮೆ: ಡಾ. ಮೋಹಿತ್ ಗುಪ್ತಾ
ಕೋವಿಡ್ ಲಸಿಕೆ ಪಡೆದವರಲ್ಲಿ ಹೃದಯಾಘಾತ ಅಪಾಯ ಕಡಿಮೆ: ಡಾ. ಮೋಹಿತ್ ಗುಪ್ತಾ
ಸಂಪುಟ ಸಭೆಯನ್ನು ಬೇರೆ ಬೇರೆ ಸ್ಥಳಗಳಲ್ಲಿ ನಡೆಸುವುದು ದುಂದು ವೆಚ್ಚವಲ್ಲವೇ?
ಸಂಪುಟ ಸಭೆಯನ್ನು ಬೇರೆ ಬೇರೆ ಸ್ಥಳಗಳಲ್ಲಿ ನಡೆಸುವುದು ದುಂದು ವೆಚ್ಚವಲ್ಲವೇ?
ಸಂವೇದನೆಯಿಲ್ಲದ, ಸೂಕ್ಷ್ಮತೆ ಗೊತ್ತಿರದ ಸಿಬ್ಬಂದಿಯಿಂದ ಸಮೀಕ್ಷೆ ಬೇಕಿತ್ತೇ?
ಸಂವೇದನೆಯಿಲ್ಲದ, ಸೂಕ್ಷ್ಮತೆ ಗೊತ್ತಿರದ ಸಿಬ್ಬಂದಿಯಿಂದ ಸಮೀಕ್ಷೆ ಬೇಕಿತ್ತೇ?
ಎಲ್ಲ ಮಂತ್ರಿಗಳು ಒಂದೇ ವಾಕ್ಯವನ್ನು ಪುನರಾವರ್ತಿಸುತ್ತಿದ್ದಾರೆ
ಎಲ್ಲ ಮಂತ್ರಿಗಳು ಒಂದೇ ವಾಕ್ಯವನ್ನು ಪುನರಾವರ್ತಿಸುತ್ತಿದ್ದಾರೆ