AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

7 ಕೋಟಿ ರೂ.ಮೌಲ್ಯದ ಚಿನ್ನಾಭರಣ ಸಾಗಿಸುತ್ತಿದ್ದ ಮೂವರನ್ನು ಬಂಧಿಸಿದ ರೈಲ್ವೆ ಪೊಲೀಸರು

ರೈಲ್ವೆ ಸ್ಟೇಶನ್​​ನ ಮುಖ್ಯ ಗೇಟ್​​ಬಳಿ ಇಳಿದಿದ್ದ ಇವರು ಅನುಮಾನಾಸ್ಪದವಾಗಿ ಓಡಾಡುತ್ತಿದ್ದರು. ಅನುಮಾನಗೊಂಡು ಅವರನ್ನು ತಡೆಯಲಾಯಿತು. ಠಾಣೆಗೆ ಕರೆತಂದು ಅವರ ಲಗೇಜ್​ಗಳನ್ನು ಪರಿಶೀಲಿಸಲಾಯಿತು

7 ಕೋಟಿ ರೂ.ಮೌಲ್ಯದ ಚಿನ್ನಾಭರಣ ಸಾಗಿಸುತ್ತಿದ್ದ ಮೂವರನ್ನು ಬಂಧಿಸಿದ ರೈಲ್ವೆ ಪೊಲೀಸರು
ಸಾಂದರ್ಭಿಕ ಚಿತ್ರ
TV9 Web
| Updated By: Lakshmi Hegde|

Updated on: Jun 23, 2021 | 9:23 AM

Share

ಭೋಪಾಲ್​: 7 ಕೋಟಿ ರೂಪಾಯಿ ಮೌಲ್ಯದ 14 ಕೆಜಿ ಚಿನ್ನಾಭರಣಗಳನ್ನು ಗುಜರಾತ್​​ನ ಸೂರತ್​ನಿಂದ ಸಾಗಿಸುತ್ತಿದ್ದ ಮೂವರನ್ನು ಸರ್ಕಾರಿ ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ತಪ್ತಿ ಗಂಗಾ ಎಕ್ಸ್​​ಪ್ರೆಸ್​​ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಇವರನ್ನು ಮಧ್ಯಪ್ರದೇಶದ ಕಟ್ನಿ ಸ್ಟೇಶನ್​​ನಲ್ಲಿ ಬಂಧಿಸಲಾಗಿದೆ. ಇವರು ಚಿನ್ನಾಭರಣಗಳನ್ನು ಬೆನ್ನಿಗೆ ಹಾಕಿದ್ದ ಬ್ಯಾಗ್​​ನಲ್ಲಿ ಪ್ಲಾಸ್ಟಿಕ್​​ನಲ್ಲಿ ಇಟ್ಟಿದ್ದರು.

ರೈಲ್ವೆ ಸ್ಟೇಶನ್​​ನ ಮುಖ್ಯ ಗೇಟ್​​ಬಳಿ ಇಳಿದಿದ್ದ ಇವರು ಅನುಮಾನಾಸ್ಪದವಾಗಿ ಓಡಾಡುತ್ತಿದ್ದರು. ಅನುಮಾನಗೊಂಡು ಅವರನ್ನು ತಡೆಯಲಾಯಿತು. ಠಾಣೆಗೆ ಕರೆತಂದು ಅವರ ಲಗೇಜ್​ಗಳನ್ನು ಪರಿಶೀಲಿಸಲಾಯಿತು. ಆಗ ಅದರಲ್ಲಿ ಬಂಗಾರದ ಚೈನ್​​, ರಿಂಗ್​, ಇಯರ್​ರಿಂಗ್ಸ್​ ಸೇರಿ ಹಲವು ರೀತಿಯ ಚಿನ್ನಾಭರಣಗಳು ಇದ್ದವು. ಎಲ್ಲ ಸೇಇರಿ ಸುಮಾರು 14 ಕೆಜಿ ಚಿನ್ನಾಭರಣಗಳು ಇದ್ದವು. ಇವುಗಳ ಮೌಲ್ಯ 7 ಕೋಟಿ ರೂ. ಆದರೆ ಇವರ ಬಳಿ ಇದ್ದ ಬಿಲ್​​ನಲ್ಲಿ 5.5 ಕೋಟಿ ರೂ. ಎಂದು ಬರೆದುಕೊಂಡಿತ್ತೆಂದು ಪೊಲೀಸರು ಹೇಳಿದ್ದಾರೆ.

ಬಿಲ್​ ನೋಡಿದರೆ ಇದು ಕಳ್ಳತನ ಮಾಡಿದ್ದಲ್ಲ ಎಂದು ಅನ್ನಿಸುತ್ತದೆ. ಆದರೆ ಇಷ್ಟು ಮೌಲ್ಯದ ಚಿನ್ನವನ್ನು ಇವರ್ಯಾಕೆ ಖರೀದಿಸಿದರು? ಎಲ್ಲಿಗೆ ತೆಗೆದುಕೊಂಡು ಹೋಗುತ್ತಿದ್ದರು ಎಂಬಿತ್ಯಾದಿ ವಿಚಾರವನ್ನು ತನಿಖೆ ನಡೆಸುವುದಾಗಿ ಕಟ್ನಿ ಠಾಣೆಯ ಪೊಲೀಸ್ ಅಧಿಕಾರಿ ಆರ್​.ಕೆ. ಪಟೇಲ್​ ತಿಳಿಸಿದ್ದಾರೆ.

ಇದನ್ನೂ ಓದಿ: Covid Vaccination: ನಿನ್ನೆ ಒಂದೇ ದಿನ 53 ಲಕ್ಷಕ್ಕೂ ಹೆಚ್ಚು ಜನರಿಗೆ ಕೊರೊನಾ ಲಸಿಕೆ; 59 ಮಂದಿಗೆ ಅಡ್ಡಪರಿಣಾಮ

(Three persons from Surat detained with 14 kg of gold In Madhya Pradesh)

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!