AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

7 ಕೋಟಿ ರೂ.ಮೌಲ್ಯದ ಚಿನ್ನಾಭರಣ ಸಾಗಿಸುತ್ತಿದ್ದ ಮೂವರನ್ನು ಬಂಧಿಸಿದ ರೈಲ್ವೆ ಪೊಲೀಸರು

ರೈಲ್ವೆ ಸ್ಟೇಶನ್​​ನ ಮುಖ್ಯ ಗೇಟ್​​ಬಳಿ ಇಳಿದಿದ್ದ ಇವರು ಅನುಮಾನಾಸ್ಪದವಾಗಿ ಓಡಾಡುತ್ತಿದ್ದರು. ಅನುಮಾನಗೊಂಡು ಅವರನ್ನು ತಡೆಯಲಾಯಿತು. ಠಾಣೆಗೆ ಕರೆತಂದು ಅವರ ಲಗೇಜ್​ಗಳನ್ನು ಪರಿಶೀಲಿಸಲಾಯಿತು

7 ಕೋಟಿ ರೂ.ಮೌಲ್ಯದ ಚಿನ್ನಾಭರಣ ಸಾಗಿಸುತ್ತಿದ್ದ ಮೂವರನ್ನು ಬಂಧಿಸಿದ ರೈಲ್ವೆ ಪೊಲೀಸರು
ಸಾಂದರ್ಭಿಕ ಚಿತ್ರ
Follow us
TV9 Web
| Updated By: Lakshmi Hegde

Updated on: Jun 23, 2021 | 9:23 AM

ಭೋಪಾಲ್​: 7 ಕೋಟಿ ರೂಪಾಯಿ ಮೌಲ್ಯದ 14 ಕೆಜಿ ಚಿನ್ನಾಭರಣಗಳನ್ನು ಗುಜರಾತ್​​ನ ಸೂರತ್​ನಿಂದ ಸಾಗಿಸುತ್ತಿದ್ದ ಮೂವರನ್ನು ಸರ್ಕಾರಿ ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ತಪ್ತಿ ಗಂಗಾ ಎಕ್ಸ್​​ಪ್ರೆಸ್​​ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಇವರನ್ನು ಮಧ್ಯಪ್ರದೇಶದ ಕಟ್ನಿ ಸ್ಟೇಶನ್​​ನಲ್ಲಿ ಬಂಧಿಸಲಾಗಿದೆ. ಇವರು ಚಿನ್ನಾಭರಣಗಳನ್ನು ಬೆನ್ನಿಗೆ ಹಾಕಿದ್ದ ಬ್ಯಾಗ್​​ನಲ್ಲಿ ಪ್ಲಾಸ್ಟಿಕ್​​ನಲ್ಲಿ ಇಟ್ಟಿದ್ದರು.

ರೈಲ್ವೆ ಸ್ಟೇಶನ್​​ನ ಮುಖ್ಯ ಗೇಟ್​​ಬಳಿ ಇಳಿದಿದ್ದ ಇವರು ಅನುಮಾನಾಸ್ಪದವಾಗಿ ಓಡಾಡುತ್ತಿದ್ದರು. ಅನುಮಾನಗೊಂಡು ಅವರನ್ನು ತಡೆಯಲಾಯಿತು. ಠಾಣೆಗೆ ಕರೆತಂದು ಅವರ ಲಗೇಜ್​ಗಳನ್ನು ಪರಿಶೀಲಿಸಲಾಯಿತು. ಆಗ ಅದರಲ್ಲಿ ಬಂಗಾರದ ಚೈನ್​​, ರಿಂಗ್​, ಇಯರ್​ರಿಂಗ್ಸ್​ ಸೇರಿ ಹಲವು ರೀತಿಯ ಚಿನ್ನಾಭರಣಗಳು ಇದ್ದವು. ಎಲ್ಲ ಸೇಇರಿ ಸುಮಾರು 14 ಕೆಜಿ ಚಿನ್ನಾಭರಣಗಳು ಇದ್ದವು. ಇವುಗಳ ಮೌಲ್ಯ 7 ಕೋಟಿ ರೂ. ಆದರೆ ಇವರ ಬಳಿ ಇದ್ದ ಬಿಲ್​​ನಲ್ಲಿ 5.5 ಕೋಟಿ ರೂ. ಎಂದು ಬರೆದುಕೊಂಡಿತ್ತೆಂದು ಪೊಲೀಸರು ಹೇಳಿದ್ದಾರೆ.

ಬಿಲ್​ ನೋಡಿದರೆ ಇದು ಕಳ್ಳತನ ಮಾಡಿದ್ದಲ್ಲ ಎಂದು ಅನ್ನಿಸುತ್ತದೆ. ಆದರೆ ಇಷ್ಟು ಮೌಲ್ಯದ ಚಿನ್ನವನ್ನು ಇವರ್ಯಾಕೆ ಖರೀದಿಸಿದರು? ಎಲ್ಲಿಗೆ ತೆಗೆದುಕೊಂಡು ಹೋಗುತ್ತಿದ್ದರು ಎಂಬಿತ್ಯಾದಿ ವಿಚಾರವನ್ನು ತನಿಖೆ ನಡೆಸುವುದಾಗಿ ಕಟ್ನಿ ಠಾಣೆಯ ಪೊಲೀಸ್ ಅಧಿಕಾರಿ ಆರ್​.ಕೆ. ಪಟೇಲ್​ ತಿಳಿಸಿದ್ದಾರೆ.

ಇದನ್ನೂ ಓದಿ: Covid Vaccination: ನಿನ್ನೆ ಒಂದೇ ದಿನ 53 ಲಕ್ಷಕ್ಕೂ ಹೆಚ್ಚು ಜನರಿಗೆ ಕೊರೊನಾ ಲಸಿಕೆ; 59 ಮಂದಿಗೆ ಅಡ್ಡಪರಿಣಾಮ

(Three persons from Surat detained with 14 kg of gold In Madhya Pradesh)

ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ
ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ
ಇಡೀ ವಿಶ್ವವೇ ಭಾರತೀಯ ಸೈನಿಕರ ಕಾರ್ಯವನ್ನು ಕೊಂಡಾಡುತ್ತಿದೆ: ಶಾಸಕ
ಇಡೀ ವಿಶ್ವವೇ ಭಾರತೀಯ ಸೈನಿಕರ ಕಾರ್ಯವನ್ನು ಕೊಂಡಾಡುತ್ತಿದೆ: ಶಾಸಕ
ನಾಗರಿಕರ ಹೆಸರಿನಲ್ಲಿ ರಾಜ್ಯಾದ್ಯಂತ ತಿರಂಗಾ ಯಾತ್ರೆ: ಆರ್ ಅಶೋಕ್
ನಾಗರಿಕರ ಹೆಸರಿನಲ್ಲಿ ರಾಜ್ಯಾದ್ಯಂತ ತಿರಂಗಾ ಯಾತ್ರೆ: ಆರ್ ಅಶೋಕ್
ನಮ್ಮ ಸರ್ಕಾರದ ಸಾಧನೆಗಳ ಬಗ್ಗೆ ಬಿಜೆಪಿ ಮಾತಾಡಲ್ಲ: ಶಿವಲಿಂಗೇಗೌಡ
ನಮ್ಮ ಸರ್ಕಾರದ ಸಾಧನೆಗಳ ಬಗ್ಗೆ ಬಿಜೆಪಿ ಮಾತಾಡಲ್ಲ: ಶಿವಲಿಂಗೇಗೌಡ