AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

7 ಕೋಟಿ ರೂ.ಮೌಲ್ಯದ ಚಿನ್ನಾಭರಣ ಸಾಗಿಸುತ್ತಿದ್ದ ಮೂವರನ್ನು ಬಂಧಿಸಿದ ರೈಲ್ವೆ ಪೊಲೀಸರು

ರೈಲ್ವೆ ಸ್ಟೇಶನ್​​ನ ಮುಖ್ಯ ಗೇಟ್​​ಬಳಿ ಇಳಿದಿದ್ದ ಇವರು ಅನುಮಾನಾಸ್ಪದವಾಗಿ ಓಡಾಡುತ್ತಿದ್ದರು. ಅನುಮಾನಗೊಂಡು ಅವರನ್ನು ತಡೆಯಲಾಯಿತು. ಠಾಣೆಗೆ ಕರೆತಂದು ಅವರ ಲಗೇಜ್​ಗಳನ್ನು ಪರಿಶೀಲಿಸಲಾಯಿತು

7 ಕೋಟಿ ರೂ.ಮೌಲ್ಯದ ಚಿನ್ನಾಭರಣ ಸಾಗಿಸುತ್ತಿದ್ದ ಮೂವರನ್ನು ಬಂಧಿಸಿದ ರೈಲ್ವೆ ಪೊಲೀಸರು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jun 23, 2021 | 9:23 AM

Share

ಭೋಪಾಲ್​: 7 ಕೋಟಿ ರೂಪಾಯಿ ಮೌಲ್ಯದ 14 ಕೆಜಿ ಚಿನ್ನಾಭರಣಗಳನ್ನು ಗುಜರಾತ್​​ನ ಸೂರತ್​ನಿಂದ ಸಾಗಿಸುತ್ತಿದ್ದ ಮೂವರನ್ನು ಸರ್ಕಾರಿ ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ತಪ್ತಿ ಗಂಗಾ ಎಕ್ಸ್​​ಪ್ರೆಸ್​​ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಇವರನ್ನು ಮಧ್ಯಪ್ರದೇಶದ ಕಟ್ನಿ ಸ್ಟೇಶನ್​​ನಲ್ಲಿ ಬಂಧಿಸಲಾಗಿದೆ. ಇವರು ಚಿನ್ನಾಭರಣಗಳನ್ನು ಬೆನ್ನಿಗೆ ಹಾಕಿದ್ದ ಬ್ಯಾಗ್​​ನಲ್ಲಿ ಪ್ಲಾಸ್ಟಿಕ್​​ನಲ್ಲಿ ಇಟ್ಟಿದ್ದರು.

ರೈಲ್ವೆ ಸ್ಟೇಶನ್​​ನ ಮುಖ್ಯ ಗೇಟ್​​ಬಳಿ ಇಳಿದಿದ್ದ ಇವರು ಅನುಮಾನಾಸ್ಪದವಾಗಿ ಓಡಾಡುತ್ತಿದ್ದರು. ಅನುಮಾನಗೊಂಡು ಅವರನ್ನು ತಡೆಯಲಾಯಿತು. ಠಾಣೆಗೆ ಕರೆತಂದು ಅವರ ಲಗೇಜ್​ಗಳನ್ನು ಪರಿಶೀಲಿಸಲಾಯಿತು. ಆಗ ಅದರಲ್ಲಿ ಬಂಗಾರದ ಚೈನ್​​, ರಿಂಗ್​, ಇಯರ್​ರಿಂಗ್ಸ್​ ಸೇರಿ ಹಲವು ರೀತಿಯ ಚಿನ್ನಾಭರಣಗಳು ಇದ್ದವು. ಎಲ್ಲ ಸೇಇರಿ ಸುಮಾರು 14 ಕೆಜಿ ಚಿನ್ನಾಭರಣಗಳು ಇದ್ದವು. ಇವುಗಳ ಮೌಲ್ಯ 7 ಕೋಟಿ ರೂ. ಆದರೆ ಇವರ ಬಳಿ ಇದ್ದ ಬಿಲ್​​ನಲ್ಲಿ 5.5 ಕೋಟಿ ರೂ. ಎಂದು ಬರೆದುಕೊಂಡಿತ್ತೆಂದು ಪೊಲೀಸರು ಹೇಳಿದ್ದಾರೆ.

ಬಿಲ್​ ನೋಡಿದರೆ ಇದು ಕಳ್ಳತನ ಮಾಡಿದ್ದಲ್ಲ ಎಂದು ಅನ್ನಿಸುತ್ತದೆ. ಆದರೆ ಇಷ್ಟು ಮೌಲ್ಯದ ಚಿನ್ನವನ್ನು ಇವರ್ಯಾಕೆ ಖರೀದಿಸಿದರು? ಎಲ್ಲಿಗೆ ತೆಗೆದುಕೊಂಡು ಹೋಗುತ್ತಿದ್ದರು ಎಂಬಿತ್ಯಾದಿ ವಿಚಾರವನ್ನು ತನಿಖೆ ನಡೆಸುವುದಾಗಿ ಕಟ್ನಿ ಠಾಣೆಯ ಪೊಲೀಸ್ ಅಧಿಕಾರಿ ಆರ್​.ಕೆ. ಪಟೇಲ್​ ತಿಳಿಸಿದ್ದಾರೆ.

ಇದನ್ನೂ ಓದಿ: Covid Vaccination: ನಿನ್ನೆ ಒಂದೇ ದಿನ 53 ಲಕ್ಷಕ್ಕೂ ಹೆಚ್ಚು ಜನರಿಗೆ ಕೊರೊನಾ ಲಸಿಕೆ; 59 ಮಂದಿಗೆ ಅಡ್ಡಪರಿಣಾಮ

(Three persons from Surat detained with 14 kg of gold In Madhya Pradesh)

Follow Us
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್