AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

7 ಕೋಟಿ ರೂ.ಮೌಲ್ಯದ ಚಿನ್ನಾಭರಣ ಸಾಗಿಸುತ್ತಿದ್ದ ಮೂವರನ್ನು ಬಂಧಿಸಿದ ರೈಲ್ವೆ ಪೊಲೀಸರು

ರೈಲ್ವೆ ಸ್ಟೇಶನ್​​ನ ಮುಖ್ಯ ಗೇಟ್​​ಬಳಿ ಇಳಿದಿದ್ದ ಇವರು ಅನುಮಾನಾಸ್ಪದವಾಗಿ ಓಡಾಡುತ್ತಿದ್ದರು. ಅನುಮಾನಗೊಂಡು ಅವರನ್ನು ತಡೆಯಲಾಯಿತು. ಠಾಣೆಗೆ ಕರೆತಂದು ಅವರ ಲಗೇಜ್​ಗಳನ್ನು ಪರಿಶೀಲಿಸಲಾಯಿತು

7 ಕೋಟಿ ರೂ.ಮೌಲ್ಯದ ಚಿನ್ನಾಭರಣ ಸಾಗಿಸುತ್ತಿದ್ದ ಮೂವರನ್ನು ಬಂಧಿಸಿದ ರೈಲ್ವೆ ಪೊಲೀಸರು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jun 23, 2021 | 9:23 AM

Share

ಭೋಪಾಲ್​: 7 ಕೋಟಿ ರೂಪಾಯಿ ಮೌಲ್ಯದ 14 ಕೆಜಿ ಚಿನ್ನಾಭರಣಗಳನ್ನು ಗುಜರಾತ್​​ನ ಸೂರತ್​ನಿಂದ ಸಾಗಿಸುತ್ತಿದ್ದ ಮೂವರನ್ನು ಸರ್ಕಾರಿ ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ತಪ್ತಿ ಗಂಗಾ ಎಕ್ಸ್​​ಪ್ರೆಸ್​​ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಇವರನ್ನು ಮಧ್ಯಪ್ರದೇಶದ ಕಟ್ನಿ ಸ್ಟೇಶನ್​​ನಲ್ಲಿ ಬಂಧಿಸಲಾಗಿದೆ. ಇವರು ಚಿನ್ನಾಭರಣಗಳನ್ನು ಬೆನ್ನಿಗೆ ಹಾಕಿದ್ದ ಬ್ಯಾಗ್​​ನಲ್ಲಿ ಪ್ಲಾಸ್ಟಿಕ್​​ನಲ್ಲಿ ಇಟ್ಟಿದ್ದರು.

ರೈಲ್ವೆ ಸ್ಟೇಶನ್​​ನ ಮುಖ್ಯ ಗೇಟ್​​ಬಳಿ ಇಳಿದಿದ್ದ ಇವರು ಅನುಮಾನಾಸ್ಪದವಾಗಿ ಓಡಾಡುತ್ತಿದ್ದರು. ಅನುಮಾನಗೊಂಡು ಅವರನ್ನು ತಡೆಯಲಾಯಿತು. ಠಾಣೆಗೆ ಕರೆತಂದು ಅವರ ಲಗೇಜ್​ಗಳನ್ನು ಪರಿಶೀಲಿಸಲಾಯಿತು. ಆಗ ಅದರಲ್ಲಿ ಬಂಗಾರದ ಚೈನ್​​, ರಿಂಗ್​, ಇಯರ್​ರಿಂಗ್ಸ್​ ಸೇರಿ ಹಲವು ರೀತಿಯ ಚಿನ್ನಾಭರಣಗಳು ಇದ್ದವು. ಎಲ್ಲ ಸೇಇರಿ ಸುಮಾರು 14 ಕೆಜಿ ಚಿನ್ನಾಭರಣಗಳು ಇದ್ದವು. ಇವುಗಳ ಮೌಲ್ಯ 7 ಕೋಟಿ ರೂ. ಆದರೆ ಇವರ ಬಳಿ ಇದ್ದ ಬಿಲ್​​ನಲ್ಲಿ 5.5 ಕೋಟಿ ರೂ. ಎಂದು ಬರೆದುಕೊಂಡಿತ್ತೆಂದು ಪೊಲೀಸರು ಹೇಳಿದ್ದಾರೆ.

ಬಿಲ್​ ನೋಡಿದರೆ ಇದು ಕಳ್ಳತನ ಮಾಡಿದ್ದಲ್ಲ ಎಂದು ಅನ್ನಿಸುತ್ತದೆ. ಆದರೆ ಇಷ್ಟು ಮೌಲ್ಯದ ಚಿನ್ನವನ್ನು ಇವರ್ಯಾಕೆ ಖರೀದಿಸಿದರು? ಎಲ್ಲಿಗೆ ತೆಗೆದುಕೊಂಡು ಹೋಗುತ್ತಿದ್ದರು ಎಂಬಿತ್ಯಾದಿ ವಿಚಾರವನ್ನು ತನಿಖೆ ನಡೆಸುವುದಾಗಿ ಕಟ್ನಿ ಠಾಣೆಯ ಪೊಲೀಸ್ ಅಧಿಕಾರಿ ಆರ್​.ಕೆ. ಪಟೇಲ್​ ತಿಳಿಸಿದ್ದಾರೆ.

ಇದನ್ನೂ ಓದಿ: Covid Vaccination: ನಿನ್ನೆ ಒಂದೇ ದಿನ 53 ಲಕ್ಷಕ್ಕೂ ಹೆಚ್ಚು ಜನರಿಗೆ ಕೊರೊನಾ ಲಸಿಕೆ; 59 ಮಂದಿಗೆ ಅಡ್ಡಪರಿಣಾಮ

(Three persons from Surat detained with 14 kg of gold In Madhya Pradesh)

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ