AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಪ್ರದೇಶ ಹೆದ್ದಾರಿಯಲ್ಲಿ 3 ಟ್ರಕ್‌ಗಳು ಡಿಕ್ಕಿ; 2 ಸಾವು, ಓರ್ವ ಗಂಭೀರ

ಟ್ರಕ್‌ಗಳಿಗೆ ಬೆಂಕಿ ಹೊತ್ತಿಕೊಂಡಿದ್ದರಿಂದ ಪೊಲೀಸರು  ಸ್ಥಳಕ್ಕೆ ಧಾವಿಸಿದ್ದಾರೆ. ಕಂಟೈನರ್‌ಗಳಲ್ಲಿ ಬೆಂಕಿಯನ್ನು ಅಗ್ನಿಶಾಮಕ ದಳ ನಿಯಂತ್ರಿಸಿದೆ. ಬೆಂಕಿಯಿಂದ ಸುಟ್ಟಗಾಯಗಳಿಂದ ಇಬ್ಬರು ಸಾವನ್ನಪ್ಪಿದರೆ, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ

ಮಧ್ಯಪ್ರದೇಶ ಹೆದ್ದಾರಿಯಲ್ಲಿ 3 ಟ್ರಕ್‌ಗಳು ಡಿಕ್ಕಿ; 2 ಸಾವು, ಓರ್ವ ಗಂಭೀರ
ರಸ್ತೆ ಅಪಘಾತ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Mar 11, 2023 | 9:54 PM

Share

ಮಧ್ಯಪ್ರದೇಶದ (Madhya Pradesh) ಧಾರ್ (Dhar) ಜಿಲ್ಲೆಯಲ್ಲಿ ಶನಿವಾರ ಮೂರು ಟ್ರಾವ್ಲರ್ ಟ್ರಕ್‌ಗಳು ಡಿಕ್ಕಿ ಹೊಡೆದಿದ್ದು, ಇಬ್ಬರು ಚಾಲಕರು ಸಾವನ್ನಪ್ಪಿದ್ದಾರೆ. ಒಬ್ಬರಿಗೆ ಗಾಯವಾಗಿದೆ. ಮುಂಬೈ-ಆಗ್ರಾ ಚತುಷ್ಪಥ ಹೆದ್ದಾರಿಯಲ್ಲಿ ಈ ದುರ್ಘಟನೆ ನಡೆದಿದೆ. ಮುಂಬೈ-ಆಗ್ರಾ ರಾಷ್ಟ್ರೀಯ ಹೆದ್ದಾರಿಯ ಧಾರ್ ಸ್ಟ್ರೆಚ್‌ನ ಗಣೇಶ್ ಘಾಟ್‌ನಲ್ಲಿ ಬ್ರೇಕ್ ಫೇಲ್ ಆಗಿ ಮುಂಬೈ ಕಡೆಗೆ ಹೋಗುತ್ತಿದ್ದ ಟ್ರಕ್ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಇತರ ಎರಡು ಟ್ರಕ್‌ಗಳಿಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತದ ನಂತರ ಅಮೃತಶಿಲೆ, ಪಾರ್ಸೆಲ್‌ಗಳನ್ನು ಹೊಂದಿರುವ ಟ್ರಕ್ ಬೆಂಕಿಗೀಡಾಗಿದ್ದು ಸುತ್ತಲೂ ಕಪ್ಪು ಹೊಗೆ ಆವರಿಸಿದೆ. ಟ್ರಕ್‌ಗಳಲ್ಲಿ ಒಂದು ಹೆದ್ದಾರಿಯಲ್ಲಿ ಪಲ್ಟಿಯಾಗಿದ್ದು, ಆ ಲೇನ್‌ಗೆ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಿದೆ.

ಇದನ್ನೂ ಓದಿ:ಇದಕ್ಕಿಂತ ದೊಡ್ಡ ಸುಳ್ಳು ಇಲ್ಲ: ಸಂಸತ್​​ನಲ್ಲಿ ಮೈಕ್ ಆಫ್ ಮಾಡಲಾಗುತ್ತದೆ ಎಂಬ ರಾಹುಲ್ ಗಾಂಧಿ ಹೇಳಿಕೆ ಬಗ್ಗೆ ಜಗದೀಪ್ ಧನ್ಖರ್

ಟ್ರಕ್‌ಗಳಿಗೆ ಬೆಂಕಿ ಹೊತ್ತಿಕೊಂಡಿದ್ದರಿಂದ ಪೊಲೀಸರು  ಸ್ಥಳಕ್ಕೆ ಧಾವಿಸಿದ್ದಾರೆ. ಕಂಟೈನರ್‌ಗಳಲ್ಲಿ ಬೆಂಕಿಯನ್ನು ಅಗ್ನಿಶಾಮಕ ದಳ ನಿಯಂತ್ರಿಸಿದೆ. ಬೆಂಕಿಯಿಂದ ಸುಟ್ಟಗಾಯಗಳಿಂದ ಇಬ್ಬರು ಸಾವನ್ನಪ್ಪಿದರೆ, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬದುಕುಳಿದಿರುವ ಲಕ್ಷ್ಮಿ ಲಾಲ್ ಪ್ರಸ್ತುತ ಧನಮೋಡ್ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಬ್ಬರು ಸಂತ್ರಸ್ತರ ಮರಣೋತ್ತರ ಪರೀಕ್ಷೆಯನ್ನು ಧನ್ಮೋದ್ ಆಸ್ಪತ್ರೆಯಲ್ಲಿ ಮಾಡಲಾಗುವುದು ಮತ್ತು ಸ್ಥಳೀಯ ಪೊಲೀಸರು ಘರ್ಷಣೆಯ ಬಗ್ಗೆ ತನಿಖೆ ನಡೆಸಲಿದ್ದಾರೆ.

ಅಗ್ನಿಶಾಮಕ ದಳ ಮತ್ತು ಪೊಲೀಸರು ಬೆಂಕಿಯನ್ನು ಹತೋಟಿಗೆ ತಂದ ನಂತರ ಗಣೇಶ್ ಘಾಟ್ ರಸ್ತೆಯಲ್ಲಿ ಹೆದ್ದಾರಿ ಸಂಚಾರಕ್ಕೆ ತೆರೆದಿದೆ. ಪ್ರಸ್ತುತ, ಮಾರ್ಗಗಳನ್ನು ನಿರ್ಬಂಧಿಸಲಾಗಿಲ್ಲ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ