Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಪ್ರದೇಶ ಹೆದ್ದಾರಿಯಲ್ಲಿ 3 ಟ್ರಕ್‌ಗಳು ಡಿಕ್ಕಿ; 2 ಸಾವು, ಓರ್ವ ಗಂಭೀರ

ಟ್ರಕ್‌ಗಳಿಗೆ ಬೆಂಕಿ ಹೊತ್ತಿಕೊಂಡಿದ್ದರಿಂದ ಪೊಲೀಸರು  ಸ್ಥಳಕ್ಕೆ ಧಾವಿಸಿದ್ದಾರೆ. ಕಂಟೈನರ್‌ಗಳಲ್ಲಿ ಬೆಂಕಿಯನ್ನು ಅಗ್ನಿಶಾಮಕ ದಳ ನಿಯಂತ್ರಿಸಿದೆ. ಬೆಂಕಿಯಿಂದ ಸುಟ್ಟಗಾಯಗಳಿಂದ ಇಬ್ಬರು ಸಾವನ್ನಪ್ಪಿದರೆ, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ

ಮಧ್ಯಪ್ರದೇಶ ಹೆದ್ದಾರಿಯಲ್ಲಿ 3 ಟ್ರಕ್‌ಗಳು ಡಿಕ್ಕಿ; 2 ಸಾವು, ಓರ್ವ ಗಂಭೀರ
ರಸ್ತೆ ಅಪಘಾತ
Follow us
ರಶ್ಮಿ ಕಲ್ಲಕಟ್ಟ
|

Updated on: Mar 11, 2023 | 9:54 PM

ಮಧ್ಯಪ್ರದೇಶದ (Madhya Pradesh) ಧಾರ್ (Dhar) ಜಿಲ್ಲೆಯಲ್ಲಿ ಶನಿವಾರ ಮೂರು ಟ್ರಾವ್ಲರ್ ಟ್ರಕ್‌ಗಳು ಡಿಕ್ಕಿ ಹೊಡೆದಿದ್ದು, ಇಬ್ಬರು ಚಾಲಕರು ಸಾವನ್ನಪ್ಪಿದ್ದಾರೆ. ಒಬ್ಬರಿಗೆ ಗಾಯವಾಗಿದೆ. ಮುಂಬೈ-ಆಗ್ರಾ ಚತುಷ್ಪಥ ಹೆದ್ದಾರಿಯಲ್ಲಿ ಈ ದುರ್ಘಟನೆ ನಡೆದಿದೆ. ಮುಂಬೈ-ಆಗ್ರಾ ರಾಷ್ಟ್ರೀಯ ಹೆದ್ದಾರಿಯ ಧಾರ್ ಸ್ಟ್ರೆಚ್‌ನ ಗಣೇಶ್ ಘಾಟ್‌ನಲ್ಲಿ ಬ್ರೇಕ್ ಫೇಲ್ ಆಗಿ ಮುಂಬೈ ಕಡೆಗೆ ಹೋಗುತ್ತಿದ್ದ ಟ್ರಕ್ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಇತರ ಎರಡು ಟ್ರಕ್‌ಗಳಿಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತದ ನಂತರ ಅಮೃತಶಿಲೆ, ಪಾರ್ಸೆಲ್‌ಗಳನ್ನು ಹೊಂದಿರುವ ಟ್ರಕ್ ಬೆಂಕಿಗೀಡಾಗಿದ್ದು ಸುತ್ತಲೂ ಕಪ್ಪು ಹೊಗೆ ಆವರಿಸಿದೆ. ಟ್ರಕ್‌ಗಳಲ್ಲಿ ಒಂದು ಹೆದ್ದಾರಿಯಲ್ಲಿ ಪಲ್ಟಿಯಾಗಿದ್ದು, ಆ ಲೇನ್‌ಗೆ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಿದೆ.

ಇದನ್ನೂ ಓದಿ:ಇದಕ್ಕಿಂತ ದೊಡ್ಡ ಸುಳ್ಳು ಇಲ್ಲ: ಸಂಸತ್​​ನಲ್ಲಿ ಮೈಕ್ ಆಫ್ ಮಾಡಲಾಗುತ್ತದೆ ಎಂಬ ರಾಹುಲ್ ಗಾಂಧಿ ಹೇಳಿಕೆ ಬಗ್ಗೆ ಜಗದೀಪ್ ಧನ್ಖರ್

ಟ್ರಕ್‌ಗಳಿಗೆ ಬೆಂಕಿ ಹೊತ್ತಿಕೊಂಡಿದ್ದರಿಂದ ಪೊಲೀಸರು  ಸ್ಥಳಕ್ಕೆ ಧಾವಿಸಿದ್ದಾರೆ. ಕಂಟೈನರ್‌ಗಳಲ್ಲಿ ಬೆಂಕಿಯನ್ನು ಅಗ್ನಿಶಾಮಕ ದಳ ನಿಯಂತ್ರಿಸಿದೆ. ಬೆಂಕಿಯಿಂದ ಸುಟ್ಟಗಾಯಗಳಿಂದ ಇಬ್ಬರು ಸಾವನ್ನಪ್ಪಿದರೆ, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬದುಕುಳಿದಿರುವ ಲಕ್ಷ್ಮಿ ಲಾಲ್ ಪ್ರಸ್ತುತ ಧನಮೋಡ್ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಬ್ಬರು ಸಂತ್ರಸ್ತರ ಮರಣೋತ್ತರ ಪರೀಕ್ಷೆಯನ್ನು ಧನ್ಮೋದ್ ಆಸ್ಪತ್ರೆಯಲ್ಲಿ ಮಾಡಲಾಗುವುದು ಮತ್ತು ಸ್ಥಳೀಯ ಪೊಲೀಸರು ಘರ್ಷಣೆಯ ಬಗ್ಗೆ ತನಿಖೆ ನಡೆಸಲಿದ್ದಾರೆ.

ಅಗ್ನಿಶಾಮಕ ದಳ ಮತ್ತು ಪೊಲೀಸರು ಬೆಂಕಿಯನ್ನು ಹತೋಟಿಗೆ ತಂದ ನಂತರ ಗಣೇಶ್ ಘಾಟ್ ರಸ್ತೆಯಲ್ಲಿ ಹೆದ್ದಾರಿ ಸಂಚಾರಕ್ಕೆ ತೆರೆದಿದೆ. ಪ್ರಸ್ತುತ, ಮಾರ್ಗಗಳನ್ನು ನಿರ್ಬಂಧಿಸಲಾಗಿಲ್ಲ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ