AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Modi in Kerala: ರಾಜ್ಯದ ಜನರಿಗೆ ಮೋದಿ ಬಗ್ಗೆ ಮೆಚ್ಚುಗೆ ಇದೆ: ಕೇರಳದ ಬಿಷಪ್

ನಾವು ಹೇಳುವುದನ್ನು ಪ್ರಧಾನಮಂತ್ರಿಯವರು ಗಮನವಿಟ್ಟು ಆಲಿಸಿದ್ದು ಎಲ್ಲ ವಿಶ್ವಾಸಿಗಳಿಗೆ ರಕ್ಷಣೆ ನೀಡುವುದಾಗಿ ಭರವಸೆ ನೀಡಿದರು. ಕೇರಳದ ಜನರು ಪ್ರಧಾನಿ ಮೋದಿಯವರನ್ನು ಮೆಚ್ಚುತ್ತಿದ್ದಾರೆ. ನಾವು ಮತ್ತಷ್ಟು ಅಭಿವೃದ್ಧಿಯನ್ನು ಎದುರು ನೋಡುತ್ತಿದ್ದೇವೆ ಎಂದು ಅವರು ಹೇಳಿದರು.

Modi in Kerala: ರಾಜ್ಯದ ಜನರಿಗೆ ಮೋದಿ ಬಗ್ಗೆ ಮೆಚ್ಚುಗೆ ಇದೆ: ಕೇರಳದ ಬಿಷಪ್
ಕೇರಳದ ಕ್ರೈಸ್ತ ನಾಯಕರನ್ನು ಭೇಟಿ ಮಾಡಿದ ಮೋದಿ
ರಶ್ಮಿ ಕಲ್ಲಕಟ್ಟ
|

Updated on:Apr 25, 2023 | 8:30 PM

Share

ಪ್ರಧಾನಿ ನರೇಂದ್ರ ಮೋದಿ (Narendra Modi) ಸೋಮವಾರ ಕೇರಳದ (Kerala) ಕ್ರೈಸ್ತ ನಾಯಕರನ್ನು ಭೇಟಿ ಮಾಡಿದ್ದಾರೆ. ಭೇಟಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಿರೋ-ಮಲಬಾರ್ ಚರ್ಚ್‌ನ ಆರ್ಚ್‌ಬಿಷಪ್ ಕಾರ್ಡಿನಲ್ ಜಾರ್ಜ್ ಅಲೆಂಚೇರಿ (Cardinal George Allencherry) ಕೇರಳದ ಜನರು ಪ್ರಧಾನಿ ಮೋದಿಯನ್ನು ಮೆಚ್ಚುತ್ತಿದ್ದಾರೆ ಮತ್ತು ಅಭಿವೃದ್ಧಿಯನ್ನು ಎದುರು ನೋಡುತ್ತಿದ್ದಾರೆ ಎಂದು ಹೇಳಿದ್ದಾರೆ. ವಿವಿಧ ಕ್ರಿಶ್ಚಿಯನ್ ಪಂಥಗಳ ಏಳು ಬಿಷಪ್‌ಗಳೊಂದಿಗಿನ ಪ್ರಧಾನ ಮಂತ್ರಿ ಸಭೆ ನಡೆಸಿದ್ದಾರೆ. ಕೇರಳದಲ್ಲಿ ಕ್ರಿಶ್ಚಿಯನ್ನರು ಶೇಕಡಾ 18 ರಷ್ಟು ಜನಸಂಖ್ಯೆಯನ್ನು ಹೊಂದಿದ್ದಾರೆ, ಅಲ್ಲಿ ಬಿಜೆಪಿಯು ಚುನಾವಣಾ ಕ್ಷೇತ್ರದಲ್ಲಿ ಹೆಚ್ಚು ಮುನ್ನಡೆ ಸಾಧಿಸಿಲ್ಲ. ಆದರೆ ಕ್ರಿಶ್ಚಿಯನ್ ಜನಸಂಖ್ಯೆ ಮತ್ತು ಯುವಕರನ್ನು ಸಕ್ರಿಯವಾಗಿ ತಲುಪುವ ಮೂಲಕ, 2024 ರ ರಾಷ್ಟ್ರೀಯ ಚುನಾವಣೆಯಲ್ಲಿ ಇಲ್ಲಿನ ರಾಜಕೀಯ ಚಿತ್ರಣ ಬದಲಾಗಬೇಕು ಎಂದು ಬಿಜೆಪಿ ಆಶಿಸುತ್ತಿದೆ.

ನಿನ್ನೆ ಸಂಜೆ ಪ್ರಧಾನ ಮಂತ್ರಿಯನ್ನು ಭೇಟಿಯಾದ ಬಿಷಪ್‌ಗಳ ಪೈಕಿ ಸಿರೋ-ಮಲಬಾರ್ ಚರ್ಚ್‌ನ ಆರ್ಚ್‌ಬಿಷಪ್ ಕಾರ್ಡಿನಲ್ ಜಾರ್ಜ್ ಅಲೆಂಚೆರಿ ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಉತ್ತರ ಭಾರತದಲ್ಲಿ ನಮ್ಮ ಮಿಷನ್ ಕಾರ್ಯಗಳ ಬಗ್ಗೆ ನಮಗೆ ಇರುವ ಆತಂಕಗಳನ್ನು ಹಂಚಿಕೊಂಡಿದ್ದಾರೆ. ದಲಿತ ಕ್ರೈಸ್ತರು, ಬಡವರು ಮತ್ತು ಅಂಚಿನಲ್ಲಿರುವವರ ಹಕ್ಕುಗಳ ಬಗ್ಗೆಯೂ ಚರ್ಚೆಗಳು ನಡೆದವು. ನಾವು ರೈತರು, ಮೀನುಗಾರರು ಮತ್ತು ಕರಾವಳಿ ಪ್ರದೇಶದ ಜನರ ಸಂಕಷ್ಟಗಳನ್ನು ಹೇಳಿದ್ದೇವೆ ಎಂದು ಅಲೆಂಚೆರಿ ಹೇಳಿದ್ದಾರೆ.

ನಾವು ಹೇಳುವುದನ್ನು ಪ್ರಧಾನಮಂತ್ರಿಯವರು ಗಮನವಿಟ್ಟು ಆಲಿಸಿದ್ದು ಎಲ್ಲ ವಿಶ್ವಾಸಿಗಳಿಗೆ ರಕ್ಷಣೆ ನೀಡುವುದಾಗಿ ಭರವಸೆ ನೀಡಿದರು. ಕೇರಳದ ಜನರು ಪ್ರಧಾನಿ ಮೋದಿಯವರನ್ನು ಮೆಚ್ಚುತ್ತಿದ್ದಾರೆ. ನಾವು ಮತ್ತಷ್ಟು ಅಭಿವೃದ್ಧಿಯನ್ನು ಎದುರು ನೋಡುತ್ತಿದ್ದೇವೆ ಎಂದು ಅವರು ಹೇಳಿದರು.

ಪಕ್ಷದ ಕೊನೆಯ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ, ಪ್ರಧಾನಿ ಮೋದಿ ಅವರು ಅಂಚಿನಲ್ಲಿರುವ ವರ್ಗಗಳು ಮತ್ತು ಅಲ್ಪಸಂಖ್ಯಾತರನ್ನು ತಲುಪಲು ಕರೆ ನೀಡಿದ್ದರು. ಈಸ್ಟರ್ ದಿನದಂದು ಅವರು ದೆಹಲಿಯ ಸೇಕ್ರೆಡ್ ಹಾರ್ಟ್ ಕ್ಯಾಥೆಡ್ರಲ್‌ಗೆ ಭೇಟಿ ನೀಡಿ ಸಮುದಾಯದೊಂದಿಗೆ ಸಂವಾದ ನಡೆಸಿದರು.

ಇದನ್ನೂ ಓದಿ: Delhi liquor policy scam: ದೆಹಲಿ ಅಬಕಾರಿ ನೀತಿ ಹಗರಣ: ಮೊದಲ ಬಾರಿ ಸಿಬಿಐ ಆರೋಪಪಟ್ಟಿಯಲ್ಲಿ ಮನೀಶ್ ಸಿಸೋಡಿಯಾ ಹೆಸರು

ಕೇರಳದಲ್ಲಿ ಬಿಜೆಪಿ ನಾಯಕರು ಕ್ರೈಸ್ತ ಸಮುದಾಯದ ಪಾದ್ರಿಗಳು ಮತ್ತು ಮುಖಂಡರನ್ನು ಅವರ ಮನೆಗಳಲ್ಲಿ ಭೇಟಿ ಮಾಡಿದರು. ಮಲಯಾಳಂ ಹೊಸ ವರ್ಷದ ದಿನವಾದ ವಿಷುವಿನಂದ ಬಿಜೆಪಿ ಕಾರ್ಯಕರ್ತರು ಬಿಷಪ್‌ಗಳು ಮತ್ತು ಇತರ ಕ್ರಿಶ್ಚಿಯನ್ ನಾಯಕರಿಗೆ ತಮ್ಮ ಮನೆಯಲ್ಲಿ ಉಪಹಾರವನ್ನು ಏರ್ಪಡಿಸಿದ್ದರು. ಏತನ್ಮಧ್ಯೆ, ಬಿಜೆಪಿ ರಬ್ಬರ್ ಬೆಲೆಯನ್ನು ಬೆಂಬಲಿಸಿದರೆ ಕೇರಳ ಬಿಜೆಪಿ ಸಂಸದರಿಗೆ ಮತ ಚಲಾಯಿಸಬಹುದು ಎಂದು ತಲಶ್ಶೇರಿಯ ಬಿಷಪ್ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:38 pm, Tue, 25 April 23

ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?