ಪ್ರೀಮಿಯಂ ವಂದೇ ಭಾರತ್​ ರೈಲಿನಲ್ಲಿ ಕಾಲಿಡಲು ಜಾಗವಿಲ್ಲ, ಜನವೋ ಜನ

ಪ್ರಧಾನಿ ಮೋದಿಯವರ ಕನಸಿನ ಯೋಜನೆಗೆ ವಂದೇ ಭಾರತ್ ಎಕ್ಸ್‌ಪ್ರೆಸ್ ಎಂದು ಹೆಸರಿಡಲಾಗಿದೆ. ಈ ರೈಲು ದೇಶದ ಅತಿ ವೇಗದ ರೈಲುಗಳಲ್ಲಿ ಒಂದಾಗಿದೆ. ಸೌಲಭ್ಯಗಳು ಬಹುತೇಕ ವಿಮಾನದಲ್ಲಿ ಇದ್ದಂತೆ. ಅಷ್ಟರಮಟ್ಟಿಗೆ ಎಸಿ, ಸ್ವಯಂಚಾಲಿತ ಬಾಗಿಲುಗಳು, ಬಯೋ ಟಾಯ್ಲೆಟ್, ಪ್ರೀಮಿಯಂ ಸೀಟುಗಳು, ಆಧುನಿಕ ಲೈಟಿಂಗ್, ಜಿಪಿಎಸ್, ಮನರಂಜನಾ ವೈಶಿಷ್ಟ್ಯಗಳು, ದಿನಪತ್ರಿಕೆ, ಆಹಾರ ಪದಾರ್ಥಗಳು ಹೀಗೆ ಎಲ್ಲಾ ಸೌಲಭ್ಯಗಳಿವೆ.

ಪ್ರೀಮಿಯಂ ವಂದೇ ಭಾರತ್​ ರೈಲಿನಲ್ಲಿ ಕಾಲಿಡಲು ಜಾಗವಿಲ್ಲ, ಜನವೋ ಜನ
Follow us
|

Updated on: Jun 11, 2024 | 11:53 AM

ಇಷ್ಟು ದಿನ ಸಾಧಾರಣ ರೈಲುಗಳಲ್ಲಿ ಸಾಮಾನ್ಯ ಟಿಕೆಟ್​ ಖರೀದಿಸಿ ಎಸಿ ಕೋಚ್​ನಲ್ಲಿ ಕೂರುವುದು ಅಥವಾ ಟಿಕೆಟ್ ಇಲ್ಲದೆ ರೈಲು ಹತ್ತುವ ಘಟನೆಗಳು ನಡೆಯುತ್ತಿದ್ದವು. ಇದೀಗ ಅದೇ ಪರಿಸ್ಥಿತಿ ವಂದೇ ಭಾರತ್​ ರೈಲಿಗೂ ಬಂದಿದೆ. ಪ್ರಧಾನಿ ಮೋದಿಯವರ ಕನಸಿನ ಯೋಜನೆಗೆ ವಂದೇ ಭಾರತ್ ಎಕ್ಸ್‌ಪ್ರೆಸ್ (Vande Bharat Express) ಎಂದು ಹೆಸರಿಡಲಾಗಿದೆ. ಈ ರೈಲು ದೇಶದ ಅತಿ ವೇಗದ ರೈಲುಗಳಲ್ಲಿ ಒಂದಾಗಿದೆ. ಸೌಲಭ್ಯಗಳು ಬಹುತೇಕ ವಿಮಾನದಲ್ಲಿ ಇದ್ದಂತೆ. ಅಷ್ಟರಮಟ್ಟಿಗೆ ಎಸಿ, ಸ್ವಯಂಚಾಲಿತ ಬಾಗಿಲುಗಳು, ಬಯೋ ಟಾಯ್ಲೆಟ್, ಪ್ರೀಮಿಯಂ ಸೀಟುಗಳು, ಆಧುನಿಕ ಲೈಟಿಂಗ್, ಜಿಪಿಎಸ್, ಮನರಂಜನಾ ವೈಶಿಷ್ಟ್ಯಗಳು, ದಿನಪತ್ರಿಕೆ, ಆಹಾರ ಪದಾರ್ಥಗಳು ಹೀಗೆ ಎಲ್ಲಾ ಸೌಲಭ್ಯಗಳಿವೆ. ಇಲ್ಲಿಯವರೆಗೆ 51 ವಂದೇ ಭಾರತ್ ರೈಲುಗಳನ್ನು ನಿಯೋಜಿಸಲಾಗಿದೆ.

ಜನರು ಸಾಗರೋಪಾದಿಯಲ್ಲಿ ರೈಲನ್ನು ಹತ್ತುತ್ತಿದ್ದಾರೆ, ಒಮ್ಮೆ ರೈಲಿನ ಬಾಗಿಲು ಹಾಕಿದರೆ ಮುಂದಿನ ನಿಲ್ದಾಣದಲ್ಲೇ ತೆರೆಯುತ್ತದೆ. ಟಿಕೆಟ್​ ಪಡೆದಿದ್ದಾರೆಯೋ ಇಲ್ಲವೋ ಎಂದು ಪರಿಶೀಲಿಸಲು ಕೂಡ ಸಾಧ್ಯವಾಗುತ್ತಿಲ್ಲ ಎಂಬುದು ಅಧಿಕಾರಿಗಳ ಅಳಲಾಗಿದೆ.

ಸೆಮಿ ಹೈಸ್ಪೀಡ್​ ವಂದೇ ಭಾರತ್ ರೈಲಿನಲ್ಲಿ ಜನರು ಕಕ್ಕಿರಿದು ತುಂಬಿರುವ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ. ಲಕ್ನೋ ಜಂಕ್ಷನ್ ಹಾಗೂ ಡೆಹ್ರಾಡೂನ್​ ನಡುವೆ ಚಲಿಸುವ ರೈಲಿನಲ್ಲಿ ಈ ದೃಶ್ಯ ಕಂಡುಬಂದಿದೆ. ಈ ರೈಲಿನಲ್ಲಿ ಎಲ್ಲೆ ನೋಡಿದರಲ್ಲಿ ಪ್ರಯಾಣಿಕರು, ಕುಳಿತ ಪ್ರಯಾಣಿಕರಿಗೂ ಉಸಿರುಗಟ್ಟಿಸುವಂತಿತ್ತು ಆ ದೃಶ್ಯ.

ಮತ್ತಷ್ಟು ಓದಿ: Vande Bharat Express: ಮೈಸೂರು ಚೆನ್ನೈ ಮಧ್ಯೆ ಇಂದಿನಿಂದ ಮತ್ತೊಂದು ವಂದೇ ಭಾರತ್ ಎಕ್ಸ್​ಪ್ರೆಸ್

ಬೇರೆ ಪ್ರಯಾಣಿಕರು ಹತ್ತಲು ಜಾಗ ಇರುವುದಿಲ್ಲ, ರೈಲಿನೊಳಗೆ ಇರುವವರಿಗೂ ನಿಂತುಕೊಳ್ಳಲು ಸಾಧ್ಯವಾಗದಂತೆ ಜನರು ಕಿಕ್ಕಿರಿದು ತುಂಬಿರುತ್ತಾರೆ, ಸಾಮಾನ್ಯ ರೈಲಿನಂತೆ ಈ ರೈಲಿನಲ್ಲಿಯೂ ಜನರು ಓಡಾಡುತ್ತಾರೆ. ದೇಶದ ನಾನಾ ಭಾಗಗಳಿಗೆ ಕೆಲಸ ಅರಸಿ ಹೋಗುವ ಉತ್ತರ ಭಾರತೀಯರಿಂದಲೇ ಈ ಸ್ಥಿತಿ ನಿರ್ಮಾಣವಾಗಿದೆ ಎಂದು ಅಧಿಕಾರಿಗಳು ಹೇಳುತ್ತಾರೆ.

ಸಾಮಾನ್ಯ ರೈಲಿಗಾಗಿ ಕಾಯುತ್ತಿರುವ  ಜನರು ಈ ರೈಲನ್ನು ಹತ್ತುತ್ತಾರೆ, ಇಲ್ಲಿಯವರೆಗೂ ಅಧಿಕಾರಿಗಳು ಎಷ್ಟೇ ಪ್ರಯತ್ನಪಟ್ಟರೂ ಅದನ್ನು ತಡೆಯಲು ಸಾಧ್ಯವಾಗಿಲ್ಲ.

ಇದು ವಂದೇ ಭಾರತ್ ರೈಲಿನಲ್ಲಿ ಸ್ಥಳಾವಕಾಶವೇ ಇರಲಿಲ್ಲ, ಒಬ್ಬರನ್ನೊಬ್ಬರು ತಳ್ಳುತ್ತಾ ನಿಂತಿದ್ದರು, ಇದು ವಂದೇ ಭಾರತ್ ಎಕ್ಸ್​ಪ್ರೆಸ್​ ಆಗಿದ್ದರೂ ಸಾಮಾನ್ಯ ಕೋಟಾ ರೈಲಿನಂತೆಯೇ ಅನಿಸುತ್ತಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತಾಜಾ ಸುದ್ದಿ
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್