AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಾಖಂಡ: 16 ವರ್ಷಗಳಲ್ಲಿ ಶೇ.314ರಷ್ಟು ಹೆಚ್ಚಳವಾದ ಹುಲಿಗಳ ಸಂಖ್ಯೆ

2006 ಮತ್ತು 2022 ರ ನಡುವೆ ಉತ್ತರಾಖಂಡದಲ್ಲಿ ಹುಲಿಗಳ ಸಂಖ್ಯೆ 314 ಪ್ರತಿಶತದಷ್ಟು ಹೆಚ್ಚಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಉತ್ತರಾಖಂಡದ ಮುಖ್ಯ ವನ್ಯಜೀವಿ ವಾರ್ಡನ್ ಸಮೀರ್ ಸಿನ್ಹಾ ಅವರು ಉತ್ತರಾಖಂಡದಲ್ಲಿ ಹುಲಿ ಸಂಖ್ಯೆಯ ಸಾಂದ್ರತೆಯು ವಿಶ್ವದಲ್ಲೇ ಅತಿ ಹೆಚ್ಚು ಎಂದು ಹೇಳಿದ್ದಾರೆ.

ಉತ್ತರಾಖಂಡ: 16 ವರ್ಷಗಳಲ್ಲಿ ಶೇ.314ರಷ್ಟು ಹೆಚ್ಚಳವಾದ ಹುಲಿಗಳ ಸಂಖ್ಯೆ
ಹುಲಿImage Credit source: Siasat.com
ನಯನಾ ರಾಜೀವ್
|

Updated on: Jan 07, 2024 | 9:07 AM

Share

2006 ಮತ್ತು 2022 ರ ನಡುವೆ ಉತ್ತರಾಖಂಡದಲ್ಲಿ ಹುಲಿಗಳ ಸಂಖ್ಯೆ 314 ಪ್ರತಿಶತದಷ್ಟು ಹೆಚ್ಚಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಉತ್ತರಾಖಂಡದ ಮುಖ್ಯ ವನ್ಯಜೀವಿ ವಾರ್ಡನ್ ಸಮೀರ್ ಸಿನ್ಹಾ ಅವರು ಉತ್ತರಾಖಂಡದಲ್ಲಿ ಹುಲಿ ಸಂಖ್ಯೆಯ ಸಾಂದ್ರತೆಯು ವಿಶ್ವದಲ್ಲೇ ಅತಿ ಹೆಚ್ಚು ಎಂದು ಹೇಳಿದ್ದಾರೆ.

2006 ರಲ್ಲಿ 178 ರಷ್ಟಿದ್ದ ಹುಲಿಗಳ ಸಂಖ್ಯೆ 2022 ರಲ್ಲಿ 560 ಕ್ಕೆ ಏರಿತು, ಇದು ಶೇ. 314ರಷ್ಟು  ಏರಿಕೆಯನ್ನು ದಾಖಲಿಸಿದೆ ಎಂದು ಸಿನ್ಹಾ ಹೇಳಿದರು.  ಇತ್ತೀಚಿನ ವರ್ಷಗಳಲ್ಲಿ ಅರಣ್ಯ ಇಲಾಖೆಯು ಅವುಗಳ ವಾಸಸ್ಥಳವನ್ನು ಸುಧಾರಿಸಲು ಕೈಗೊಂಡ ಕ್ರಮಗಳಿಂದಾಗಿ ರಾಜ್ಯದಲ್ಲಿ ವನ್ಯಜೀವಿಗಳ ಸಂತತಿ ಹೆಚ್ಚಳವಾಗಿದೆ ಎಂದು ಹೇಳಿದರು.

ಹುಲಿ ದಾಳಿಯಲ್ಲಿ ಸಾವನ್ನಪ್ಪಿದ ಮತ್ತು ಗಾಯಗೊಂಡವರ ಸಂಖ್ಯೆಯಲ್ಲಿ 2023 ರಲ್ಲಿ ಸ್ವಲ್ಪ ಹೆಚ್ಚಳವಾಗಿದೆ ಎಂದು ವಾರ್ಡನ್ ಹೇಳಿದ್ದಾರೆ. ಹುಲಿ ದಾಳಿಯಲ್ಲಿ 2021 ರಲ್ಲಿ ಇಬ್ಬರು, 2022 ರಲ್ಲಿ 16 ಮತ್ತು 2023 ರಲ್ಲಿ 17 ಜನರು ಸಾವನ್ನಪ್ಪಿದ್ದರೆ, 2021 ರಲ್ಲಿ ಎಂಟು ಜನರು, 2022 ರಲ್ಲಿ 10 ಮತ್ತು 2023 ರಲ್ಲಿ ಒಂಬತ್ತು ಜನರು ಹುಲಿಗಳಿಂದ ಗಾಯಗೊಂಡಿದ್ದಾರೆ ಎಂದು ಸಿನ್ಹಾ ಹೇಳಿದರು.

ಮತ್ತಷ್ಟು ಓದಿ: 10 ವರ್ಷಗಳಲ್ಲಿ ಶೇ.75ರಷ್ಟು ಹುಲಿಗಳ ಸಂಖ್ಯೆ ಏರಿಕೆ, ವನ್ಯಜೀವಿ ರಕ್ಷಣೆಗೆ ಪ್ರಧಾನಿ ಮೋದಿ ಕರೆ

ಹುಲಿಗಳಲ್ಲದೆ ಚಿರತೆಗಳು, ಆನೆಗಳು ಮತ್ತು ಹಾವುಗಳಂತಹ ಪ್ರಾಣಿಗಳ ಎನ್‌ಕೌಂಟರ್‌ನಲ್ಲಿ ಸತ್ತವರ ಒಟ್ಟು ಸಂಖ್ಯೆ 2021 ರಲ್ಲಿ 71, 2022 ರಲ್ಲಿ 82 ಮತ್ತು 2023 ರಲ್ಲಿ 66 ಎಂದು ಅವರು ಹೇಳಿದರು. ಮನುಷ್ಯ-ಪ್ರಾಣಿ ಸಂಘರ್ಷದಲ್ಲಿ ಗಾಯಗೊಂಡವರ ಸಂಖ್ಯೆ 2021 ರಲ್ಲಿ 361, 2022 ರಲ್ಲಿ 325 ಮತ್ತು 2023 ರಲ್ಲಿ 317 ಎಂದು ಅಧಿಕಾರಿ ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ