Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಾಖಂಡ: 16 ವರ್ಷಗಳಲ್ಲಿ ಶೇ.314ರಷ್ಟು ಹೆಚ್ಚಳವಾದ ಹುಲಿಗಳ ಸಂಖ್ಯೆ

2006 ಮತ್ತು 2022 ರ ನಡುವೆ ಉತ್ತರಾಖಂಡದಲ್ಲಿ ಹುಲಿಗಳ ಸಂಖ್ಯೆ 314 ಪ್ರತಿಶತದಷ್ಟು ಹೆಚ್ಚಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಉತ್ತರಾಖಂಡದ ಮುಖ್ಯ ವನ್ಯಜೀವಿ ವಾರ್ಡನ್ ಸಮೀರ್ ಸಿನ್ಹಾ ಅವರು ಉತ್ತರಾಖಂಡದಲ್ಲಿ ಹುಲಿ ಸಂಖ್ಯೆಯ ಸಾಂದ್ರತೆಯು ವಿಶ್ವದಲ್ಲೇ ಅತಿ ಹೆಚ್ಚು ಎಂದು ಹೇಳಿದ್ದಾರೆ.

ಉತ್ತರಾಖಂಡ: 16 ವರ್ಷಗಳಲ್ಲಿ ಶೇ.314ರಷ್ಟು ಹೆಚ್ಚಳವಾದ ಹುಲಿಗಳ ಸಂಖ್ಯೆ
ಹುಲಿImage Credit source: Siasat.com
Follow us
ನಯನಾ ರಾಜೀವ್
|

Updated on: Jan 07, 2024 | 9:07 AM

2006 ಮತ್ತು 2022 ರ ನಡುವೆ ಉತ್ತರಾಖಂಡದಲ್ಲಿ ಹುಲಿಗಳ ಸಂಖ್ಯೆ 314 ಪ್ರತಿಶತದಷ್ಟು ಹೆಚ್ಚಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಉತ್ತರಾಖಂಡದ ಮುಖ್ಯ ವನ್ಯಜೀವಿ ವಾರ್ಡನ್ ಸಮೀರ್ ಸಿನ್ಹಾ ಅವರು ಉತ್ತರಾಖಂಡದಲ್ಲಿ ಹುಲಿ ಸಂಖ್ಯೆಯ ಸಾಂದ್ರತೆಯು ವಿಶ್ವದಲ್ಲೇ ಅತಿ ಹೆಚ್ಚು ಎಂದು ಹೇಳಿದ್ದಾರೆ.

2006 ರಲ್ಲಿ 178 ರಷ್ಟಿದ್ದ ಹುಲಿಗಳ ಸಂಖ್ಯೆ 2022 ರಲ್ಲಿ 560 ಕ್ಕೆ ಏರಿತು, ಇದು ಶೇ. 314ರಷ್ಟು  ಏರಿಕೆಯನ್ನು ದಾಖಲಿಸಿದೆ ಎಂದು ಸಿನ್ಹಾ ಹೇಳಿದರು.  ಇತ್ತೀಚಿನ ವರ್ಷಗಳಲ್ಲಿ ಅರಣ್ಯ ಇಲಾಖೆಯು ಅವುಗಳ ವಾಸಸ್ಥಳವನ್ನು ಸುಧಾರಿಸಲು ಕೈಗೊಂಡ ಕ್ರಮಗಳಿಂದಾಗಿ ರಾಜ್ಯದಲ್ಲಿ ವನ್ಯಜೀವಿಗಳ ಸಂತತಿ ಹೆಚ್ಚಳವಾಗಿದೆ ಎಂದು ಹೇಳಿದರು.

ಹುಲಿ ದಾಳಿಯಲ್ಲಿ ಸಾವನ್ನಪ್ಪಿದ ಮತ್ತು ಗಾಯಗೊಂಡವರ ಸಂಖ್ಯೆಯಲ್ಲಿ 2023 ರಲ್ಲಿ ಸ್ವಲ್ಪ ಹೆಚ್ಚಳವಾಗಿದೆ ಎಂದು ವಾರ್ಡನ್ ಹೇಳಿದ್ದಾರೆ. ಹುಲಿ ದಾಳಿಯಲ್ಲಿ 2021 ರಲ್ಲಿ ಇಬ್ಬರು, 2022 ರಲ್ಲಿ 16 ಮತ್ತು 2023 ರಲ್ಲಿ 17 ಜನರು ಸಾವನ್ನಪ್ಪಿದ್ದರೆ, 2021 ರಲ್ಲಿ ಎಂಟು ಜನರು, 2022 ರಲ್ಲಿ 10 ಮತ್ತು 2023 ರಲ್ಲಿ ಒಂಬತ್ತು ಜನರು ಹುಲಿಗಳಿಂದ ಗಾಯಗೊಂಡಿದ್ದಾರೆ ಎಂದು ಸಿನ್ಹಾ ಹೇಳಿದರು.

ಮತ್ತಷ್ಟು ಓದಿ: 10 ವರ್ಷಗಳಲ್ಲಿ ಶೇ.75ರಷ್ಟು ಹುಲಿಗಳ ಸಂಖ್ಯೆ ಏರಿಕೆ, ವನ್ಯಜೀವಿ ರಕ್ಷಣೆಗೆ ಪ್ರಧಾನಿ ಮೋದಿ ಕರೆ

ಹುಲಿಗಳಲ್ಲದೆ ಚಿರತೆಗಳು, ಆನೆಗಳು ಮತ್ತು ಹಾವುಗಳಂತಹ ಪ್ರಾಣಿಗಳ ಎನ್‌ಕೌಂಟರ್‌ನಲ್ಲಿ ಸತ್ತವರ ಒಟ್ಟು ಸಂಖ್ಯೆ 2021 ರಲ್ಲಿ 71, 2022 ರಲ್ಲಿ 82 ಮತ್ತು 2023 ರಲ್ಲಿ 66 ಎಂದು ಅವರು ಹೇಳಿದರು. ಮನುಷ್ಯ-ಪ್ರಾಣಿ ಸಂಘರ್ಷದಲ್ಲಿ ಗಾಯಗೊಂಡವರ ಸಂಖ್ಯೆ 2021 ರಲ್ಲಿ 361, 2022 ರಲ್ಲಿ 325 ಮತ್ತು 2023 ರಲ್ಲಿ 317 ಎಂದು ಅಧಿಕಾರಿ ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
ಸ್ಪೀಕರ್ ಖಾದರ್ ನಿರ್ಣಯ ಪುನರ್ ಪರಿಶೀಲಿಸಿ ವಾಪಸ್ಸು ಪಡೆಯಬೇಕು: ಕಾಗೇರಿ
ಸ್ಪೀಕರ್ ಖಾದರ್ ನಿರ್ಣಯ ಪುನರ್ ಪರಿಶೀಲಿಸಿ ವಾಪಸ್ಸು ಪಡೆಯಬೇಕು: ಕಾಗೇರಿ
ಬಸನಗೌಡ ಯತ್ನಾಳ್ ಒಬ್ಬ ನಕಲಿ ಹಿಂದೂತ್ವವಾದಿ: ರೇಣುಕಾಚಾರ್ಯ
ಬಸನಗೌಡ ಯತ್ನಾಳ್ ಒಬ್ಬ ನಕಲಿ ಹಿಂದೂತ್ವವಾದಿ: ರೇಣುಕಾಚಾರ್ಯ
ಜವಾಬ್ದಾರಿಯುತ ಸ್ಥಾನದಲ್ಲಿರುವ ಶಿವಕುಮಾರ್ ವಿರುದ್ಧ ಆರೋಪ ಸರಿಯಲ್ಲ: ಶಾಸಕ
ಜವಾಬ್ದಾರಿಯುತ ಸ್ಥಾನದಲ್ಲಿರುವ ಶಿವಕುಮಾರ್ ವಿರುದ್ಧ ಆರೋಪ ಸರಿಯಲ್ಲ: ಶಾಸಕ
ವ್ಯಾಪಾರಿಗಳು ಹೆಸರು ನೋಂದಾಯಿಸಿಕೊಳ್ಳಲು ಏಪ್ರಿಲ್ 30 ಕಡೇದಿನ: ಶಿವಕುಮಾರ್
ವ್ಯಾಪಾರಿಗಳು ಹೆಸರು ನೋಂದಾಯಿಸಿಕೊಳ್ಳಲು ಏಪ್ರಿಲ್ 30 ಕಡೇದಿನ: ಶಿವಕುಮಾರ್
ಚೀಟಿಯಲ್ಲಿ ಏನು ಬರೆದಿತ್ತು ಅಂತ ಮುಂದಿನ ದಿನಗಳಲ್ಲಿ ಹೇಳ್ತೇನೆ: ಯತ್ನಾಳ್
ಚೀಟಿಯಲ್ಲಿ ಏನು ಬರೆದಿತ್ತು ಅಂತ ಮುಂದಿನ ದಿನಗಳಲ್ಲಿ ಹೇಳ್ತೇನೆ: ಯತ್ನಾಳ್
VIDEO: CSK ಮತ್ತೆ ಮೋಸದಾಟ? ಅನುಮಾನ ಹುಟ್ಟಿಸಿದ ವಿಡಿಯೋ
VIDEO: CSK ಮತ್ತೆ ಮೋಸದಾಟ? ಅನುಮಾನ ಹುಟ್ಟಿಸಿದ ವಿಡಿಯೋ