AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೀವನದ ಜತೆಗಿತ್ತು, ಈಗ ಅದಾನಿ ಜತೆಗಿದೆ; ಎಲ್ಐಸಿಯ ಘೋಷಣೆಯನ್ನು ಬದಲಿಸುವ ಸಮಯ ಬಂದಿದೆ: ಕಾಂಗ್ರೆಸ್

ಈ ವಿಷಯದ ಬಗ್ಗೆ ಪ್ರಧಾನ ಮಾರ್ಗದರ್ಶಕರು ಮೌನವಾಗಿದ್ದಾರೆ. ಅವರು ಏನೇನೂ ಮಾತನಾಡಲ್ಲ ಎಂದು ಎಂದು ಪವನ್ ಖೇರಾ ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಖೇರಾ ಯಾರ ಸೂಚನೆಯ ಮೇರೆಗೆ ಎಲ್‌ಐಸಿ ಅದಾನಿ ವ್ಯವಹಾರಗಳಲ್ಲಿ ತನ್ನ ಹೂಡಿಕೆಯನ್ನು ಹೆಚ್ಚಿಸಿತು ಎಂದು ಕೇಳಿದ್ದಾರೆ.

ಜೀವನದ ಜತೆಗಿತ್ತು, ಈಗ ಅದಾನಿ ಜತೆಗಿದೆ; ಎಲ್ಐಸಿಯ ಘೋಷಣೆಯನ್ನು ಬದಲಿಸುವ ಸಮಯ ಬಂದಿದೆ: ಕಾಂಗ್ರೆಸ್
ಪವನ್ ಖೇರಾ ಸುದ್ದಿಗೋಷ್ಠಿ
ರಶ್ಮಿ ಕಲ್ಲಕಟ್ಟ
|

Updated on:Feb 02, 2023 | 6:16 PM

Share

ಜಿಂದಗಿ ಕೆ ಸಾಥ್ ಭಿ, ಜಿಂದಗಿ ಕೆ ಬಾದ್ ಭಿ (ಜೀವನದ ಜತೆಗೂ ಜೀವನದ ನಂತರವೂ) ಎಂಬ ಎಲ್‌ಐಸಿಯ ಘೋಷಣೆಯನ್ನು ಜಿಂದಗಿ ಕೆ ಸಾಥ್ ಥಿ, ಅಬ್ ಅದಾನಿಜಿ ಕೆ ಸಾಥ್ ಹೈ (ಜೀವನದ ಜತೆ ಇತ್ತು, ಈಗ ಅದಾನಿ ಜತೆ ಇದೆ)ಎಂದು ಬದಲಾಯಿಸುವ ಸಮಯ ಬಂದಿದೆ ಎಂದು ಕಾಂಗ್ರೆಸ್ (Congress) ಹೇಳಿದೆ. ಇದು ಎಲ್‌ಐಸಿಯ(LIC) ಪರಿಸ್ಥಿತಿ. ಈ ವಿಷಯದ ಬಗ್ಗೆ ಪ್ರಧಾನ ಮಾರ್ಗದರ್ಶಕರು ಮೌನವಾಗಿದ್ದಾರೆ. ಅವರು ಏನೇನೂ ಮಾತನಾಡಲ್ಲ ಎಂದು ಎಂದು ಪವನ್ ಖೇರಾ ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಖೇರಾ ಯಾರ ಸೂಚನೆಯ ಮೇರೆಗೆ ಎಲ್‌ಐಸಿ ಅದಾನಿ (Adani) ವ್ಯವಹಾರಗಳಲ್ಲಿ ತನ್ನ ಹೂಡಿಕೆಯನ್ನು ಹೆಚ್ಚಿಸಿತು ಎಂದು ಕೇಳಿದ್ದಾರೆ.

ನಮ್ಮ ಬಾಲ್ಯದಲ್ಲಿ ‘ಭವ್ರೇ ನೆ ಖಿಲಾಯಾ ಫೂಲ್.. ಫೂಲ್ ಕೋ ಲೇಗಯ ರಾಜ್ ಕುವರ್’ ಎಂಬ ಹಾಡಿತ್ತು. ಈಗ ಫೂಲ್ ಕೋ ಲೇ ಗಯಾ ಹಿಂಡೆನ್‌ಬರ್ಗ್ ಆಗಿದೆ. ನರೇಂದ್ರ ಮೋದಿಯವರು ಮುಖ್ಯಮಂತ್ರಿಯಾಗಿದ್ದ ಕಾಲದ 20 ವರ್ಷಗಳ ಪ್ರಯತ್ನಕ್ಕೆ ಈಗ ತೆರೆ ಬಿದ್ದಿದೆ. ಇದು ಮೋದಿಜಿ ಮತ್ತು ಅದಾನಿಜಿ ನಡುವಿನ ವಿಷಯವಾಗಿದ್ದರೆ ನಾವೆಲ್ಲರೂ ಮೌನವಾಗಿರುತ್ತಿದ್ದೆವು ಎಂದು ಪವನ್ ಖೇರಾ ಹೇಳಿದರು. ಜಂಟಿ ಸಂಸದೀಯ ಸಮಿತಿ ಅಥವಾ ಸುಪ್ರೀಂ ಕೋರ್ಟ್‌ನಿಂದ ತನಿಖೆ ನಡೆಸಬೇಕು ಎಂಬ ಬೇಡಿಕೆಯನ್ನು ಕಾಂಗ್ರೆಸ್ ಎತ್ತುತ್ತಿದ್ದಂತೆ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಅದಾನಿ ವಿಚಾರದಲ್ಲಿ ಸರ್ಕಾರವು “ಸ್ಪಷ್ಟವಾಗಿ ಮೂಲೆಗುಂಪಾಗಿದೆ. ಗುರುವಾರ ಸಂಸತ್ತಿನಲ್ಲಿ ತನ್ನ ಬೇಡಿಕೆಗಳನ್ನು ಮಂಡಿಸಲು ಪ್ರತಿಪಕ್ಷಗಳಿಗೆ ಅವಕಾಶ ನೀಡದೆ ರಾಜ್ಯಸಭೆ ಮತ್ತು ಲೋಕಸಭೆಯನ್ನು ಮುಂದೂಡಲಾಗಿದೆ ಎಂದು ಹೇಳಿದರು.

ಅದಾನಿ ಸಮಸ್ಯೆಯು ಖಂಡಿತವಾಗಿಯೂ ಸೆಬಿ ಮತ್ತು ಆರ್‌ಬಿಐ ತನಿಖೆಯನ್ನು ಸಮರ್ಥಿಸುತ್ತದೆ. ಆಡಳಿತಾರೂಢ ಆಡಳಿತದೊಂದಿಗೆ ಮಿಸ್ಟರ್ ಎ ಅವರು ಹಂಚಿಕೊಂಡಿರುವ ವಿಶೇಷ ಸಂಬಂಧವನ್ನು ಗಮನಿಸಿದರೆ ಅದು ನಿಜವಾಗಿಯೂ ಸ್ವತಂತ್ರವಾಗಿದೆಯೇ ಎಂಬುದು ಪ್ರತ್ಯೇಕ ವಿಷಯವಾಗಿದೆ. ಇದನ್ನು ನರೇಂದ್ರದಾನಿ ಎಂದು ಕರೆಯಬಹುದು ಎಂದು ಜೈರಾಮ್ ರಮೇಶ್ ಟ್ವೀಟ್ ಮಾಡಿದ್ದಾರೆ.

“ಅದಾನಿ ಕುಟುಂಬದ ಸದಸ್ಯರು ಮಾರಿಷಸ್, ಯುಎಇ ಮತ್ತು ಕೆರಿಬಿಯನ್ ದ್ವೀಪಗಳಲ್ಲಿ ತಮ್ಮ ತೆರಿಗೆ ಸ್ವರ್ಗಗಳನ್ನು ಹೊಂದಿದ್ದಾರೆ. ಇದು ಹಿಂಡೆನ್‌ಬರ್ಗ್ ವರದಿಯಲ್ಲಿರುವುದು” ಎಂದು ಪವನ್ ಖೇರಾ ಹೇಳಿದ್ದಾರೆ.

ಇದನ್ನೂ ಓದಿ:Pralhad Joshi: ಸಂಸತ್ತಿನಲ್ಲಿ ರಚನಾತ್ಮಕ ಚರ್ಚೆಗೆ ಸರ್ಕಾರ ಸಿದ್ಧವಿದೆ, ಮೊದಲು ಮಹಿಳಾ ರಾಷ್ಟ್ರಪತಿ ಭಾಷಣದ ಚರ್ಚೆಗೆ ವಿಪಕ್ಷಗಳು ಸಹಕರಿಸಲಿ : ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಈ ವಿಷಯದೊಂದಿಗೆ ಚೀನಾದ ಸಂಬಂಧವನ್ನು ಪ್ರಸ್ತಾಪಿಸಿದ ಕಾಂಗ್ರೆಸ್, ಚೀನಾದ ಉದ್ಯಮಿ ಚಾಂಗ್ ಚುಂಗ್-ಲಿಂಗ್ ಬಗ್ಗೆ ಕೇಳಿದೆ. “ಅಗಸ್ಟಾ ವೆಸ್ಟ್‌ಲ್ಯಾಂಡ್ ಪ್ರಕರಣದಲ್ಲಿ ಈ ಹೆಸರು ಬಂದಿದೆ. ಮನಮೋಹನ್ ಸಿಂಗ್ ಅವರ ಸರ್ಕಾರ ಇದಕ್ಕೆ ಜೆಪಿಸಿಗೆ ಆದೇಶಿಸಿದೆ. ಅವರು ನಮ್ಮ ಹೆಸರನ್ನು ಎಳೆಯಲು ಬಯಸಿದ್ದರು ಆದರೆ ಅದರಲ್ಲಿ ಭಾಗಿಯಾಗಿರುವ ವ್ಯಕ್ತಿ ಅವರ ಸ್ನೇಹಿತನ ಪಾಲುದಾರ. ನಿಮಗೆ ಎಸ್‌ಜಿ, ಸುಷೇನ್ ಗುಪ್ತಾ ನೆನಪಿರಬಹುದು, ಆದರೆ ಸೋನಿಯಾ ಗಾಂಧಿ ಹೆಸರು ಎಳೆದು ತರಲಾಗುತ್ತದೆ. ಚಾಂಗ್ ಚುಂಗ್-ಲಿಂಗ್ ಮತ್ತು ಗೌತಮ್ ಭಾಯ್ ಪಾಲುದಾರರು. ಅವರು ಸಿಂಗಾಪುರದಲ್ಲಿ ಅದೇ ಕಚೇರಿಯನ್ನು ಹೊಂದಿದ್ದಾರೆ, ಅಲ್ಲಿ ಅವರು ಕಾರ್ಯನಿರ್ವಹಿಸುತ್ತಿದ್ದಾರೆ. ಈಗ ಈ ಸಂಬಂಧ ಬಗ್ಗೆ ಏನು ಹೇಳ್ತೀರಿ ಎಂದು ಪವನ್ ಖೇರಾ ಕೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:12 pm, Thu, 2 February 23

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ