AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uttarakhand CM: ಉತ್ತರಾಖಂಡ ರಾಜ್ಯಕ್ಕೆ ನೂತನ ಮುಖ್ಯಮಂತ್ರಿಯನ್ನು ಘೋಷಿಸಿದ ಬಿಜೆಪಿ; ತಿರತ್​ ಸಿಂಗ್ ರಾವತ್​ಗೆ ಸಿಎಂ ಪಟ್ಟ

Tirath Singh Rawat: ಉತ್ತರಾಖಂಡ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ತಿರತ್ ಸಿಂಗ್ ರಾವತ್​ ಆಯ್ಕೆ ಆಗಿದ್ದಾರೆ. ಡೆಹ್ರಾಡೂನ್‌ನಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ರಾವತ್ ಅವರನ್ನು ಆಯ್ಕೆ ಮಾಡಲಾಗಿದ್ದು ರಾಜ್ಯದ ಹೊಸ ಮುಖ್ಯಮಂತ್ರಿಯ ಹೆಸರನ್ನು ಅಧಿಕೃತವಾಗಿ ಘೋಷಿಸಲಾಗಿದೆ.

Uttarakhand CM: ಉತ್ತರಾಖಂಡ ರಾಜ್ಯಕ್ಕೆ ನೂತನ ಮುಖ್ಯಮಂತ್ರಿಯನ್ನು ಘೋಷಿಸಿದ ಬಿಜೆಪಿ; ತಿರತ್​ ಸಿಂಗ್ ರಾವತ್​ಗೆ ಸಿಎಂ ಪಟ್ಟ
ತೀರಥ್ ಸಿಂಗ್ ರಾವತ್
Skanda
| Edited By: |

Updated on:Mar 10, 2021 | 12:09 PM

Share

ಡೆಹ್ರಾಡೂನ್:  ಉತ್ತರಾಖಂಡ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ತಿರತ್ ಸಿಂಗ್ ರಾವತ್​ ಆಯ್ಕೆ ಆಗಿದ್ದಾರೆ. ಡೆಹ್ರಾಡೂನ್‌ನಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ರಾವತ್ ಅವರನ್ನು ಆಯ್ಕೆ ಮಾಡಲಾಗಿದ್ದು ರಾಜ್ಯದ ಹೊಸ ಮುಖ್ಯಮಂತ್ರಿಯ ಹೆಸರನ್ನು ಅಧಿಕೃತವಾಗಿ ಘೋಷಿಸಲಾಗಿದೆ. ಬಿಜೆಪಿ ಪ್ರಧಾನ ಕಚೇರಿಯಲ್ಲಿ ಬುಧವಾರ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆದಿದೆ.ಉತ್ತರಾಖಂಡ ಸಚಿವ ಧನ್ ಸಿಂಗ್ ರಾವತ್, ಕೇಂದ್ರ ಸಚಿವ ರಮೇಶ್ ಪೊಖ್ರಿಯಾಲ್ ನಿಶಾಂಕ್ ಅವರ ಹೆಸರು ಮುಖ್ಯಮಂತ್ರಿ ಸ್ಥಾನಕ್ಕೆ ಕೇಳಿ ಬಂದಿತ್ತು. ಆದರೆ ಬಿಜೆಪಿ 56ರ ಹರೆಯದ ಗಡ್​​ವಾಲ್​​ನ ಸಂಸದ ತಿರತ್ ಸಿಂಗ್ ಅವರನ್ನೇ ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆ ಮಾಡಿದೆ. ಇಂದು ಸಂಜೆ 4 ಗಂಟೆಗೆ ತಿರತ್ ಸಿಂಗ್ ರಾವತ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

9ಫೆಬ್ರವರಿ 2013ರಿಂದ 2015 ಡಿಸೆಂಬರ್ 31ರ ವರೆಗೆ ಉತ್ತರಾಖಂಡದ ಬಿಜೆಪಿ ಅಧ್ಯಕ್ಷರಾಗಿದ್ದರು ತಿರತ್ ಸಿಂಗ್ ರಾವತ್.2012 ರಿಂದ 2017ರ ವರೆಗೆ ರಾವತ್ ಅವರು ಉತ್ತರಾಖಂಡ ಶಾಸಕಾಂಗ ಸಭೆಯ ಸದಸ್ಯರಾಗಿದ್ದರು. ಇವರು ಉತ್ತರಪ್ರದೇಶದ ಭಾರತೀಯ ಜನತಾ ಯುವ ಮೋರ್ಚಾದ ಉಪಾಧ್ಯಕ್ಷರಾಗಿದ್ದರು. ಉತ್ತರಾಖಂಡ ರಚನೆಯಾದಾಗ ಮೊದಲ ಶಿಕ್ಷಣ ಸಚಿವರಾಗಿದ್ದವರು ತಿರತ್ ಸಿಂಗ್. 2007ರಲ್ಲಿ ಉತ್ತರಾಖಂಡದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದರು. ಇದಾದನಂತರ ರಾಜ್ಯ ಚುನಾವಣಾ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. 2012ರಲ್ಲಿ ಶಾಸಕರಾಗಿ ಆಯ್ಕೆಯಾದ ಇವರು 2013ರಲ್ಲಿ ಉತ್ತರಾಖಂಡ ಬಿಜೆಪಿ ಅಧ್ಯಕ್ಷರಾದರು.

ಉತ್ತರಾಖಂಡದ ಮುಖ್ಯಮಂತ್ರಿಯಾಗಿದ್ದ ತ್ರಿವೇಂದ್ರ ಸಿಂಗ್ ರಾವತ್ ಮಂಗಳವಾರ ಗವರ್ನರ್ ಬೇಬಿ ರಾಣಿ ಮೌರ್ಯ ಅವರನ್ನು ಭೇಟಿ ಮಾಡಿದ ನಂತರ ರಾಜೀನಾಮೆ ನೀಡಿದ್ದರು. ತಮ್ಮದೇ ಪಕ್ಷದ ಶಾಸಕರಿಂದ ತ್ರಿವೇಂದ್ರ ಸಿಂಗ್ ‘ಅಸಮರ್ಥ ಮುಖ್ಯಮಂತ್ರಿ’ (below average) ಎನಿಸಿಕೊಂಡಿದ್ದರು. ರಾವತ್ ನಾಯಕತ್ವ ಮುಂದುವರಿದರೆ ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರುವುದು ಕಷ್ಟ ಎಂದು ಬಹುತೇಕ ಶಾಸಕರು ಅಭಿಪ್ರಾಯಪಟ್ಟಿದ್ದಾರೆ ಎಂಬ ಮಾತುಗಳು ಪ್ರಬಲವಾಗಿ ಕೇಳಿಬರುತ್ತಿದೆ. ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಆಡಳಿತ ನಡೆಸುವಲ್ಲಿ ರಾವತ್ ವಿಫಲರಾಗಿದ್ದಾರೆ ಎಂದು ಶಾಸಕರು ಆರೋಪಿಸಿದ್ದರು.

ಪಕ್ಷದ ನಿರ್ಧಾರದಂತೆ ರಾಜೀನಾಮೆ ರಾಜ್ಯಕ್ಕೆ ನಾಲ್ಕು ವರ್ಷಗಳ ಕಾಲ ಸೇವೆ ಸಲ್ಲಿಸಲು ಪಕ್ಷವು ನನಗೆ ಅವಕಾಶ ನೀಡಿತ್ತು. ನನಗೆ ಇಂಥ ಅವಕಾಶ ಸಿಗಬಹುದು ಎಂದು ನಾನೆಂದೂ ಭಾವಿಸಿರಲಿಲ್ಲ. ಇದೀಗ ಪಕ್ಷವು ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸುವ ಅವಕಾಶವನ್ನು ಮತ್ತೊಬ್ಬರಿಗೆ ನೀಡಬೇಕು ಎಂದು ಚಿಂತನೆ ನಡೆಸಿದೆ ಎಂದು ರಾವತ್ ಡೆಹ್ರಾಡೂನ್​ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ಇದನ್ನೂ ಓದಿ:  ಶಾಸಕರಿಂದ ‘ಅಸಮರ್ಥ’ ಎನಿಸಿಕೊಂಡಿದ್ದ ಉತ್ತರಾಖಂಡ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾಜೀನಾಮೆ

Published On - 11:32 am, Wed, 10 March 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!