AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೂರ್ಯ, ಚಂದ್ರ ಗ್ರಹಣ ಎಫೆಕ್ಟ್: ಭಕ್ತರಿಗೆ ಎರಡು ದಿನ ತಿರುಪತಿ ತಿಮ್ಮಪ್ಪನ ದರ್ಶನ ಭಾಗ್ಯ ಇಲ್ಲ

ತಿರುಪತಿ ತಿರುಮಲ ದೇವಸ್ಥಾನ ಎರಡು ದಿನಗಳ ಕಾಲ ಬಂದ್​ ಆಗಿರಲಿದೆ. ಆದ್ದರಿಂದ ಭಕ್ತರು ಈ ಎರಡು ದಿನ ತಿರುಪತಿಗೆ ಹೋಗು ಪ್ಲಾನ್ ಮಾಡಿಕೊಳ್ಳಬೇಡಿ.

ಸೂರ್ಯ, ಚಂದ್ರ ಗ್ರಹಣ ಎಫೆಕ್ಟ್:  ಭಕ್ತರಿಗೆ ಎರಡು ದಿನ ತಿರುಪತಿ ತಿಮ್ಮಪ್ಪನ ದರ್ಶನ ಭಾಗ್ಯ ಇಲ್ಲ
Tirupathi
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Oct 12, 2022 | 3:59 PM

ತಿರುಪತಿ:  ಎರಡು ದಿನ  ಜಗತ್ತಿನ ಅತ್ಯಂತ ಶ್ರೀಮಂತ ದೇವಾಲಯವೆನಿಸಿದ ತಿರುಪತಿ ತಿರುಮಲ ದೇವಾಲಯದ (Tirumala Temple) ಬಾಗಿಲು ಮುಚ್ಚಲಿದೆ.  ಸೂರ್ಯ ಹಾಗೂ ಚಂದ್ರ ಗ್ರಹಣ ಪರಿಣಾಮ ಅಕ್ಟೋಬರ್ 25 ಮತ್ತು ನವೆಂಬರ್ 8ರಂದು ಭಕ್ತರಿಗೆ ತಿರುಪತಿ ತಿರುಮಲನ ದರ್ಶನ ಭಾಗ್ಯ ಇರುವುದಿಲ್ಲ.

ಅಕ್ಟೋಬರ್ 25 ಸೂರ್ಯ ಗ್ರಹಣ (solar eclipse) ಮತ್ತು ನವೆಂಬರ್ 8ರಂದು ಚಂದ್ರ ಗ್ರಹಣ ಇರುವುದರಿಂದ ತಿರುಮಲದಲ್ಲಿರುವ ವೆಂಕಟೇಶ್ವರ ದೇವಸ್ಥಾನವನ್ನು ಸುಮಾರು 12 ಗಂಟೆಗಳ ಕಾಲ ಮುಚ್ಚಲಾಗುತ್ತದೆ. ಈ ಬಗ್ಗೆ ಟಿಟಿಡಿ ಮಾಹಿತಿ ನೀಡಿದೆ.

Solar Eclipse 2022: ಅ. 25ರಂದು ಈ ವರ್ಷದ ಕೊನೆಯ ಸೂರ್ಯ ಗ್ರಹಣ; ಭಾರತದಲ್ಲೂ ಗೋಚರವಾಗುತ್ತಾ?

ಟಿಟಿಡಿ ಪ್ರಕಾರ, . ಅಕ್ಟೋಬರ್ 25 ಮತ್ತು ನವೆಂಬರ್ 8ರಂದು ತಿರುಮಲ ದೇವಸ್ಥಾನದಲ್ಲಿ ಹೇಳಿದ ದಿನಗಳಲ್ಲಿ ವಿಐಪಿ, ಶ್ರೀವಾಣಿ, 300 ವಿಶೇಷ ಪ್ರವೇಶ ದರ್ಶನವನ್ನು, ಮತ್ತು ಇತರ ಎಲ್ಲಾ ರೀತಿಯ ಸವಲತ್ತು ದರ್ಶನವನ್ನು ಟಿಟಿಡಿ ರದ್ದುಗೊಳಿಸಿದೆ. ಶುದ್ಧಿ ಮತ್ತು ಪುಣ್ಯಾಹವಾಚನದಂತಹ ಆಚರಣೆಗಳ ನಂತರ ಬೆಟ್ಟದ ದೇವಾಲಯದಲ್ಲಿ ಪೂಜೆ ಪುನರಾರಂಭವಾಗುತ್ತದೆ.

ಕೇವಲ ತಿರುಪತಿ ದೇವಾಲಯ ಮಾತ್ರವಲ್ಲದೆ ದೇಶಾದ್ಯಂತ ತಿರುಮಲ ತಿರುಪತಿ ದೇವಸ್ಥಾನಗಳ ಆಡಳಿತದಲ್ಲಿರುವ ಸುಮಾರು 60 ಇತರ ದೇವಾಲಯಗಳು ಅಕ್ಟೋಬರ್ 25ರಂದು ಸೂರ್ಯ ಗ್ರಹಣ ಮತ್ತು ನವೆಂಬರ್ 8ರಂದು ಬಂದ್​ ಮಾಡಲಾಗುತ್ತದೆ. ಅಲ್ಲದೇ ಸೂರ್ಯ ಮತ್ತು ಚಂದ್ರಗ್ರಹಣದ ಸಮಯದಲ್ಲಿ ನಿತ್ಯ ಅನ್ನದಾನ ಸಂಕೀರ್ಣದಲ್ಲಿ ಯಾವುದೇ ಆಹಾರ ನೀಡಲಾಗುವುದಿಲ್ಲ ಎಂದು ಟಿಟಿಡಿ ತಿಳಿಸಿದೆ.

ಸೂರ್ಯಗ್ರಹಣವು ಅಕ್ಟೋಬರ್ 25ರ ಸಂಜೆ 5.11ರಿಂದ 6.27 PMವರೆಗೆ ಇರುತ್ತದೆ. ನವೆಂಬರ್ 8ರಂದು ಚಂದ್ರಗ್ರಹಣವು ಮಧ್ಯಾಹ್ನ 2.39ಕ್ಕೆ ಪ್ರಾರಂಭವಾಗಿ ಅಂದು ಸಂಜೆ 6.19ಕ್ಕೆ ಕೊನೆಗೊಳ್ಳುತ್ತದೆ.

ಹಾಗಾಗಿ ಭಕ್ತರು ಅಕ್ಟೋಬರ್ 25 ಮತ್ತು ನವೆಂಬರ್ 8ರಂದು ತಿರುಪತಿಗೆ ಹೋಗುವ ಪ್ಲಾನ್ ಮಾಡಿಕೊಂಡಿದ್ದರೇ   ಮುಂದೂಡಬಹುದು.

Published On - 3:57 pm, Wed, 12 October 22

ಪ್ರಧಾನಿ ಮೋದಿ ಉಗ್ರರಿಗೆ ತಕ್ಕ ಪಾಠ ಕಲಿಸದೆ ಬಿಡೋದಿಲ್ಲ: ರಾಜೇಶ್ವರಿ
ಪ್ರಧಾನಿ ಮೋದಿ ಉಗ್ರರಿಗೆ ತಕ್ಕ ಪಾಠ ಕಲಿಸದೆ ಬಿಡೋದಿಲ್ಲ: ರಾಜೇಶ್ವರಿ
ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ
ಲಾಡ್ ಮತ್ತು ತಿಮ್ಮಾಪುರ ಮೈಲೇಜ್ ಗಿಟ್ಟಿಸುವ ಪ್ರಯತ್ನದಲ್ಲಿದ್ದಾರೆ: ಶಾಸಕ
ಲಾಡ್ ಮತ್ತು ತಿಮ್ಮಾಪುರ ಮೈಲೇಜ್ ಗಿಟ್ಟಿಸುವ ಪ್ರಯತ್ನದಲ್ಲಿದ್ದಾರೆ: ಶಾಸಕ
ರಾತ್ರಿ ಭರ್ಜರಿ ರಿಸೆಪ್ಷನ್, ಬೆಳಗ್ಗೆ ಮುಹೂರ್ತ ವೇಳೆ ತಾಳಿ ಕಟ್ಟಲ್ಲ ಎಂದ ವರ
ರಾತ್ರಿ ಭರ್ಜರಿ ರಿಸೆಪ್ಷನ್, ಬೆಳಗ್ಗೆ ಮುಹೂರ್ತ ವೇಳೆ ತಾಳಿ ಕಟ್ಟಲ್ಲ ಎಂದ ವರ
ಕಾಶಪ್ಪನವರ್ ಮತ್ತು ಯತ್ನಾಳ್ ಮಾತಿನಲ್ಲಿ ಭಾಷಾ ಮರ್ಯಾದೆ ಮೀರುತ್ತಿದ್ದಾರೆ
ಕಾಶಪ್ಪನವರ್ ಮತ್ತು ಯತ್ನಾಳ್ ಮಾತಿನಲ್ಲಿ ಭಾಷಾ ಮರ್ಯಾದೆ ಮೀರುತ್ತಿದ್ದಾರೆ