AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

TTD Online Tickets Booking: ತಿರುಪತಿ ತಿಮ್ಮಪ್ಪನ ಭಕ್ತರಿಗೆ ವಿಶೇಷ ಪ್ರವೇಶ ದರ್ಶನ ಟಿಕೆಟ್​ ಬಿಡುಗಡೆ ಮಾಡಿದ ಟಿಟಿಡಿ

ಟಿಟಿಡಿ ಟಿಕೆಟ್​​ಗಳು ಬಿಡುಗಡೆಯಾಗುವ ಬಗ್ಗೆ ಮಾಹಿತಿ ನೀಡಿದ್ದರೂ, ಎಷ್ಟು ಟಿಕೆಟ್​​ಗಳು ಬಿಡುಗಡೆಯಾಗುತ್ತವೆ ಎಂದು ನಿಖರ ಸಂಖ್ಯೆ ಹೇಳಿಲ್ಲ. ಹಾಗಾಗಿ ಆನ್​ಲೈನ್​​ ಬುಕ್ಕಿಂಗ್​ ಮಾಡುವ ಭಕ್ತರಿಗೆ ಸಹಜವಾಗಿಯೇ ಗೊಂದಲ ಉಂಟಾಗಿದೆ.

TTD Online Tickets Booking: ತಿರುಪತಿ ತಿಮ್ಮಪ್ಪನ ಭಕ್ತರಿಗೆ ವಿಶೇಷ ಪ್ರವೇಶ ದರ್ಶನ ಟಿಕೆಟ್​ ಬಿಡುಗಡೆ ಮಾಡಿದ ಟಿಟಿಡಿ
ತಿರುಮಲ ತಿರುಪತಿ ದೇವಸ್ಥಾನ
TV9 Web
| Edited By: |

Updated on: Oct 22, 2021 | 9:55 AM

Share

ತಿರುಪತಿ: ನವೆಂಬರ್​ ಮತ್ತು ಡಿಸೆಂಬರ್​ ತಿಂಗಳುಗಳ ವಿಶೇಷ ಪ್ರವೇಶ ದರ್ಶನ (SED) ಟಿಕೆಟ್​​ಗಳನ್ನು ಇಂದು ಬೆಳಗ್ಗೆ 9ಗಂಟೆಗೆ ತನ್ನ ಅಧಿಕೃತ ವೆಬ್​​ಸೈಟ್​​ನಲ್ಲಿ ಬಿಡುಗಡೆ ಮಾಡುವುದಾಗಿ ತಿರುಮಲ ತಿರುಪತಿ ದೇವಸ್ಥಾನಂ(ಟಿಟಿಡಿ) ತಿಳಿಸಿದೆ. ಇದು ಒಂದು ಟಿಕೆಟ್​​ಗೆ 300 ರೂಪಾಯಿ ಇರುತ್ತದೆ. ಹಾಗೇ, ಹಾಗೇ ನವೆಂಬರ್ ಕೋಟಾದ ಸರ್ವ ದರ್ಶನ ಟಿಕೆಟ್​​​ ಸ್ಲಾಟ್  ಭಾನುವಾರ ಬೆಳಗ್ಗೆ 9ಗಂಟೆಗೆ ತೆರೆಯಲಿದ್ದು, ಭಕ್ತರು ಆನ್​​ಲೈನ್​ ಮೂಲಕ ಬುಕಿಂಗ್​ ಮಾಡಬಹುದು. 

ಟಿಟಿಡಿ ಟಿಕೆಟ್​​ಗಳು ಬಿಡುಗಡೆಯಾಗುವ ಬಗ್ಗೆ ಮಾಹಿತಿ ನೀಡಿದ್ದರೂ, ಎಷ್ಟು ಟಿಕೆಟ್​​ಗಳು ಬಿಡುಗಡೆಯಾಗುತ್ತವೆ ಎಂದು ನಿಖರ ಸಂಖ್ಯೆ ಹೇಳಿಲ್ಲ. ಹಾಗಾಗಿ ಆನ್​ಲೈನ್​​ ಬುಕ್ಕಿಂಗ್​ ಮಾಡುವ ಭಕ್ತರಿಗೆ ಸಹಜವಾಗಿಯೇ ಗೊಂದಲ ಉಂಟಾಗಿದೆ. ದೇವರ ದರ್ಶನಕ್ಕೆ ಬರುವ ಭಕ್ತರು ಎರಡೂ ಡೋಸ್​ ಕೊವಿಡ್​ 19 ಲಸಿಕೆ ಪಡೆದಿರುವ ಪ್ರಮಾಣಪತ್ರ, ಕೊವಿಡ್​ 19 ನೆಗೆಟಿವ್​ ವರದಿ ತರುವುದು ಕಡ್ಡಾಯ ಎಂಬ ನಿಯಮವನ್ನು ಈಗಾಗಲೇ ಟಿಟಿಡಿ ಜಾರಿಗೊಳಿಸಿದೆ. ಈ ಮಧ್ಯೆ ದೇಗುಲಕ್ಕೆ ಭೇಟಿ ನೀಡಲು ಹೇರಿರುವ ಭಕ್ತರ ಸಂಖ್ಯಾ ಮಿತಿಯನ್ನು ಹೆಚ್ಚುಗೊಳಿಸಬೇಕು ಎಂಬ ಒತ್ತಡವೂ ಅದರ ಮೇಲೆ ಜಾಸ್ತಿಯಾಗುತ್ತಿದೆ. ಹಾಗಾಗಿ ಈ ಬಾರಿ ಕೋಟಾದಲ್ಲಿ ಜಾಸ್ತಿ ಟಿಕೆಟ್​ ಬಿಡುಗಡೆ ಮಾಡಬಹುದಾ ಎಂಬ ಕುತೂಹಲವೂ ಸಹಜವಾಗಿಯೇ ಎದ್ದಿದೆ. ಸದ್ಯ ಒಂದು ದಿನಕ್ಕೆ 30,000ಕ್ಕಿಂತಲೂ  ಕಡಿಮೆ ಭಕ್ತರು ತಿರುಮಲ ದೇವರ ದರ್ಶನಕ್ಕೆ ಆಗಮಿಸಬಹುದಾಗಿದೆ. ಕೊವಿಡ್​ 19 ಸಾಂಕ್ರಾಮಿಕಕ್ಕೂ ಪೂರ್ವ ಈ ದೇವಾಲಯದಲ್ಲಿ ಒಂದು ದಿನಕ್ಕೆ 79-80 ಸಾವಿರ ಯಾತ್ರಾರ್ಥಿಗಳಿಗೆ ಅವಕಾಶ ಇತ್ತು.

ಇದನ್ನೂ ಓದಿ: Raayan Raj Sarja: ಚಿರು ಪುತ್ರ ರಾಯನ್​ ರಾಜ್​ ಸರ್ಜಾ ಜನ್ಮದಿನ: ಮೇಘನಾ ರಾಜ್​ ಮನೆಯಲ್ಲಿ ಸಂಭ್ರಮವೋ ಸಂಭ್ರಮ

ಬಿಡದಿ‌: ಕೆರೆ ಕಟ್ಟೆಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ಜಲಸಮಾಧಿ

Follow Us
ಮಾರ್ಕೆಟ್​ನಲ್ಲಿ ಟೊಮ್ಯೊಟೋ ಬೆಲೆ ತೀವ್ರ ಕುಸಿತ! ರೈತರು ಕಂಗಾಲು
ಮಾರ್ಕೆಟ್​ನಲ್ಲಿ ಟೊಮ್ಯೊಟೋ ಬೆಲೆ ತೀವ್ರ ಕುಸಿತ! ರೈತರು ಕಂಗಾಲು
ಎಲ್​ಪಿಜಿ ಬೆಲೆ ಏರಿಕೆ, ಹೋಟೆಲ್​​ಗಳಲ್ಲಿ ತಿಂಡಿಗಳ ಬೆಲೆ ಏರಿಕೆ ಸಾಧ್ಯತೆ
ಎಲ್​ಪಿಜಿ ಬೆಲೆ ಏರಿಕೆ, ಹೋಟೆಲ್​​ಗಳಲ್ಲಿ ತಿಂಡಿಗಳ ಬೆಲೆ ಏರಿಕೆ ಸಾಧ್ಯತೆ
ಮಾರಿ ಹಬ್ಬದಲ್ಲಿ ನೂರಾರು ಕುರಿಗಳ ಬಲಿ, ರಕ್ತ ಹೀರಿದ ಅರ್ಚಕ: ವಿಡಿಯೋ ವೈರಲ್
ಮಾರಿ ಹಬ್ಬದಲ್ಲಿ ನೂರಾರು ಕುರಿಗಳ ಬಲಿ, ರಕ್ತ ಹೀರಿದ ಅರ್ಚಕ: ವಿಡಿಯೋ ವೈರಲ್
ಟಿವಿ9 ಎಕ್ಸ್​​ಪೋದಲ್ಲಿ ಹಯಗ್ರೀವ ಯಶಸ್ಸಿನ ಬಗ್ಗೆ ಧನ್ವೀರ್​-ಸಂಜನಾ ಮಾತು
ಟಿವಿ9 ಎಕ್ಸ್​​ಪೋದಲ್ಲಿ ಹಯಗ್ರೀವ ಯಶಸ್ಸಿನ ಬಗ್ಗೆ ಧನ್ವೀರ್​-ಸಂಜನಾ ಮಾತು
ಶ್ರೀಕೃಷ್ಣನಿಗೆ 16 ಸಾವಿರ ಪತ್ನಿಯರಿದ್ದಿದ್ದು ನಿಜವೇ? ಅಸಲಿಯತ್ತು ಇಲ್ಲಿದೆ
ಶ್ರೀಕೃಷ್ಣನಿಗೆ 16 ಸಾವಿರ ಪತ್ನಿಯರಿದ್ದಿದ್ದು ನಿಜವೇ? ಅಸಲಿಯತ್ತು ಇಲ್ಲಿದೆ
ಮಾರ್ಚ್ 7 ಶನಿವಾರ, ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮಾರ್ಚ್ 7 ಶನಿವಾರ, ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಾರ್ ಮುಂದೆ ಪ್ರತಿಭಟನೆ ವೇಳೆ ಕಲ್ಲು ತೂರಾಟ: ಪೊಲೀಸರಿಗೆ ಗಾಯ
ಬಾರ್ ಮುಂದೆ ಪ್ರತಿಭಟನೆ ವೇಳೆ ಕಲ್ಲು ತೂರಾಟ: ಪೊಲೀಸರಿಗೆ ಗಾಯ
ರಸ್ತೆಯಲ್ಲಿ ಮಲಗಿದ್ದ ಹಸುವನ್ನು ತಳ್ಳಿಕೊಂಡು ಹೋದ ಕಾರು
ರಸ್ತೆಯಲ್ಲಿ ಮಲಗಿದ್ದ ಹಸುವನ್ನು ತಳ್ಳಿಕೊಂಡು ಹೋದ ಕಾರು
GST ಹೊಡೆತ ಬಿದ್ದರೂ ಕರ್ನಾಟಕ 2ನೇ ಸ್ಥಾನ: ರಾಜ್ಯದ ಬೆಳವಣಿಗೆ ಉತ್ತಮ; ಸಿಎಂ
GST ಹೊಡೆತ ಬಿದ್ದರೂ ಕರ್ನಾಟಕ 2ನೇ ಸ್ಥಾನ: ರಾಜ್ಯದ ಬೆಳವಣಿಗೆ ಉತ್ತಮ; ಸಿಎಂ
ಮನೆಯ ಮುಂದಿದ್ದ ಮುದ್ದಾದ ನಾಯಿಮರಿಗಳನ್ನು ಎತ್ತಿ ಗೋಡೆಗೆ ಬಡಿದ ಯುವತಿ!
ಮನೆಯ ಮುಂದಿದ್ದ ಮುದ್ದಾದ ನಾಯಿಮರಿಗಳನ್ನು ಎತ್ತಿ ಗೋಡೆಗೆ ಬಡಿದ ಯುವತಿ!