AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಯುಷ್​ ಇಲಾಖೆ ತಡೆ ನೀಡಿದ್ದರೂ ಆನಂದಯ್ಯನವರ ಆಯುರ್ವೇದ ಔಷಧಿ ವಿತರಣೆಗೆ ಮುಂದಾದ ಟಿಟಿಡಿ..

ಆನಂದಯ್ಯನವರ ಶಿಷ್ಯಂದಿರು ತಿರುಪತಿಗೆ ಭೇಟಿ ನೀಡಲಿದ್ದಾರೆ. ಚೆವಿರೆಡ್ಡಿ ಭಾಸ್ಕರ್​ರೆಡ್ಡಿ ನೇತೃತ್ವದಲ್ಲಿ ಟಿಟಿಯ ಆಯುರ್ವೇದಿಕ್​ ಫಾರ್ಮಾಗೆ ಹೋಗಿ ಔಷಧೀಯ ಸಸ್ಯ, ಗಿಡಮೂಲಿಕೆಗಳನ್ನು ಪರಿಶೀಲನೆ ಮಾಡಲಿದ್ದಾರೆ.

ಆಯುಷ್​ ಇಲಾಖೆ ತಡೆ ನೀಡಿದ್ದರೂ ಆನಂದಯ್ಯನವರ ಆಯುರ್ವೇದ ಔಷಧಿ ವಿತರಣೆಗೆ ಮುಂದಾದ ಟಿಟಿಡಿ..
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on: May 26, 2021 | 6:09 PM

Share

ತಿರುಪತಿ: ಆಂಧ್ರಪ್ರದೇಶದ ಕೃಷ್ಣಾಪಟ್ಟಣಂನಲ್ಲಿ ಆನಂದಯ್ಯ ಎಂಬುವರು ಕೊವಿಡ್​ 19 ಸೋಂಕಿಗೆ ನೀಡುತ್ತಿದ್ದ ಆಯುರ್ವೇದ ಔಷಧಿಗೆ ತಾತ್ಕಾಲಿಕ ತಡೆನೀಡಲಾಗಿದೆ. ಈಗಾಗಲೇ ಆಯುಷ್​ ಇಲಾಖೆಯ ತಜ್ಞರ ತಂಡ ಔಷಧಿ ತಯಾರಿಕೆಯನ್ನು ಪರಿಶೀಲನೆ ನಡೆಸಿದ್ದು, ಈ ಔಷಧಿ ಕೊವಿಡ್​ 19 ಸೋಂಕನ್ನು ಕಡಿಮೆ ಮಾಡುತ್ತದೆ, ಪರಿಣಾಮಕಾರಿಯಾಗಿ ಹೋರಾಡುತ್ತದೆ ಎಂಬುದು ವೈಜ್ಞಾನಿಕವಾಗಿ ಸಾಬೀತು ಆಗುವವರೆಗೂ ಅದನ್ನು ಕೊವಿಡ್​ 19 ಔಷಧಿ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಇಲಾಖೆ ತಿಳಿಸಿದೆ.

ಹೀಗಿದ್ದಾಗ್ಯೂ ತಿರುಮಲ ತಿರುಪತಿ ದೇವಸ್ಥಾನಂ ಟ್ರಸ್ಟ್​ ಬೋರ್ಡ್, ಬೋನಿಗಿ​ ಆನಂದಯ್ಯ ಅವರ ಔಷಧಿಯನ್ನು ಉತ್ಪಾದಿಸಿ, ವಿತರಿಸುವುದಾಗಿ ಹೇಳಿದೆ. ಇದಕ್ಕೆ ಚಂದ್ರಗಿರಿ ಶಾಸಕ ಚೆವಿರೆಡ್ಡಿ ಭಾಸ್ಕರ್​ ರೆಡ್ಡಿಯವರೂ ಸಾಥ್​ ನೀಡಿದ್ದಾರೆ. ಬೋನಿಗಿ ಆನಂದಯ್ಯ ಅವರ ಆಯುರ್ವೇದ ಔಷಧಿಯಿಂದ ಯಾವುದೇ ಅಡ್ಡಪರಿಣಾಮಗಳಿಲ್ಲ. ಅದು ರೋಗ ನಿರೋಧಕ ಶಕ್ತಿ ಹೆಚ್ಚು ಮಾಡುತ್ತದೆ. ಹೀಗಾಗಿ ನಾವು ಆ ಔಷಧಿಯನ್ನು ತಯಾರಿಸಿ, ವಿತರಣೆ ಮಾಡುತ್ತೇವೆ ಎಂದು ಟಿಟಿಡಿ ಹೇಳಿಕೊಂಡಿದೆ.

ಹೀಗಾಗಿ ಆನಂದಯ್ಯನವರ ಶಿಷ್ಯಂದಿರು ತಿರುಪತಿಗೆ ಭೇಟಿ ನೀಡಲಿದ್ದಾರೆ. ಚೆವಿರೆಡ್ಡಿ ಭಾಸ್ಕರ್​ರೆಡ್ಡಿ ನೇತೃತ್ವದಲ್ಲಿ ಟಿಟಿಯ ಆಯುರ್ವೇದಿಕ್​ ಫಾರ್ಮಾಗೆ ಹೋಗಿ ಔಷಧೀಯ ಸಸ್ಯ, ಗಿಡಮೂಲಿಕೆಗಳನ್ನು ಪರಿಶೀಲನೆ ಮಾಡಲಿದ್ದಾರೆ. ಹಾಗೇ, ಟಿಟಿಡಿಯ ಆಯುರ್ವೇದಿಕ್​ ಕಾಲೇಜಿನ ಪ್ರಾಧ್ಯಾಪಕರನ್ನೂ ಭೇಟಿ ಮಾಡಿ ಚರ್ಚಿಸಲಿದ್ದಾರೆ. ಇನ್ನು ಸರ್ಕಾರದ ಅನುಮತಿ ದೊರೆತರೆ ಟಿಟಿಡಿ ಆಯುರ್ವೇದಿಕ್​ ಫಾರ್ಮ್​​ನಲ್ಲಿ ಔಷಧಿ ತಯಾರಿಕೆ ಶೀಘ್ರವೇ ಶುರುವಾಗಲಿದೆ.

ಇದನ್ನೂ ಓದಿ: ಕ್ರಿಕೆಟ್ ದುನಿಯಾದಲ್ಲಿ ಯಾರಿಂದಲೂ ಮುರಿಯಲಾಗದ 10 ವಿಶಿಷ್ಟ ದಾಖಲೆಗಳಿವು; ಈ ದಾಖಲೆಗಳ ಬಗ್ಗೆ ನಿಮಗೆಷ್ಟು ಗೊತ್ತು?

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ