AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಯುಷ್​ ಇಲಾಖೆ ತಡೆ ನೀಡಿದ್ದರೂ ಆನಂದಯ್ಯನವರ ಆಯುರ್ವೇದ ಔಷಧಿ ವಿತರಣೆಗೆ ಮುಂದಾದ ಟಿಟಿಡಿ..

ಆನಂದಯ್ಯನವರ ಶಿಷ್ಯಂದಿರು ತಿರುಪತಿಗೆ ಭೇಟಿ ನೀಡಲಿದ್ದಾರೆ. ಚೆವಿರೆಡ್ಡಿ ಭಾಸ್ಕರ್​ರೆಡ್ಡಿ ನೇತೃತ್ವದಲ್ಲಿ ಟಿಟಿಯ ಆಯುರ್ವೇದಿಕ್​ ಫಾರ್ಮಾಗೆ ಹೋಗಿ ಔಷಧೀಯ ಸಸ್ಯ, ಗಿಡಮೂಲಿಕೆಗಳನ್ನು ಪರಿಶೀಲನೆ ಮಾಡಲಿದ್ದಾರೆ.

ಆಯುಷ್​ ಇಲಾಖೆ ತಡೆ ನೀಡಿದ್ದರೂ ಆನಂದಯ್ಯನವರ ಆಯುರ್ವೇದ ಔಷಧಿ ವಿತರಣೆಗೆ ಮುಂದಾದ ಟಿಟಿಡಿ..
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on: May 26, 2021 | 6:09 PM

Share

ತಿರುಪತಿ: ಆಂಧ್ರಪ್ರದೇಶದ ಕೃಷ್ಣಾಪಟ್ಟಣಂನಲ್ಲಿ ಆನಂದಯ್ಯ ಎಂಬುವರು ಕೊವಿಡ್​ 19 ಸೋಂಕಿಗೆ ನೀಡುತ್ತಿದ್ದ ಆಯುರ್ವೇದ ಔಷಧಿಗೆ ತಾತ್ಕಾಲಿಕ ತಡೆನೀಡಲಾಗಿದೆ. ಈಗಾಗಲೇ ಆಯುಷ್​ ಇಲಾಖೆಯ ತಜ್ಞರ ತಂಡ ಔಷಧಿ ತಯಾರಿಕೆಯನ್ನು ಪರಿಶೀಲನೆ ನಡೆಸಿದ್ದು, ಈ ಔಷಧಿ ಕೊವಿಡ್​ 19 ಸೋಂಕನ್ನು ಕಡಿಮೆ ಮಾಡುತ್ತದೆ, ಪರಿಣಾಮಕಾರಿಯಾಗಿ ಹೋರಾಡುತ್ತದೆ ಎಂಬುದು ವೈಜ್ಞಾನಿಕವಾಗಿ ಸಾಬೀತು ಆಗುವವರೆಗೂ ಅದನ್ನು ಕೊವಿಡ್​ 19 ಔಷಧಿ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಇಲಾಖೆ ತಿಳಿಸಿದೆ.

ಹೀಗಿದ್ದಾಗ್ಯೂ ತಿರುಮಲ ತಿರುಪತಿ ದೇವಸ್ಥಾನಂ ಟ್ರಸ್ಟ್​ ಬೋರ್ಡ್, ಬೋನಿಗಿ​ ಆನಂದಯ್ಯ ಅವರ ಔಷಧಿಯನ್ನು ಉತ್ಪಾದಿಸಿ, ವಿತರಿಸುವುದಾಗಿ ಹೇಳಿದೆ. ಇದಕ್ಕೆ ಚಂದ್ರಗಿರಿ ಶಾಸಕ ಚೆವಿರೆಡ್ಡಿ ಭಾಸ್ಕರ್​ ರೆಡ್ಡಿಯವರೂ ಸಾಥ್​ ನೀಡಿದ್ದಾರೆ. ಬೋನಿಗಿ ಆನಂದಯ್ಯ ಅವರ ಆಯುರ್ವೇದ ಔಷಧಿಯಿಂದ ಯಾವುದೇ ಅಡ್ಡಪರಿಣಾಮಗಳಿಲ್ಲ. ಅದು ರೋಗ ನಿರೋಧಕ ಶಕ್ತಿ ಹೆಚ್ಚು ಮಾಡುತ್ತದೆ. ಹೀಗಾಗಿ ನಾವು ಆ ಔಷಧಿಯನ್ನು ತಯಾರಿಸಿ, ವಿತರಣೆ ಮಾಡುತ್ತೇವೆ ಎಂದು ಟಿಟಿಡಿ ಹೇಳಿಕೊಂಡಿದೆ.

ಹೀಗಾಗಿ ಆನಂದಯ್ಯನವರ ಶಿಷ್ಯಂದಿರು ತಿರುಪತಿಗೆ ಭೇಟಿ ನೀಡಲಿದ್ದಾರೆ. ಚೆವಿರೆಡ್ಡಿ ಭಾಸ್ಕರ್​ರೆಡ್ಡಿ ನೇತೃತ್ವದಲ್ಲಿ ಟಿಟಿಯ ಆಯುರ್ವೇದಿಕ್​ ಫಾರ್ಮಾಗೆ ಹೋಗಿ ಔಷಧೀಯ ಸಸ್ಯ, ಗಿಡಮೂಲಿಕೆಗಳನ್ನು ಪರಿಶೀಲನೆ ಮಾಡಲಿದ್ದಾರೆ. ಹಾಗೇ, ಟಿಟಿಡಿಯ ಆಯುರ್ವೇದಿಕ್​ ಕಾಲೇಜಿನ ಪ್ರಾಧ್ಯಾಪಕರನ್ನೂ ಭೇಟಿ ಮಾಡಿ ಚರ್ಚಿಸಲಿದ್ದಾರೆ. ಇನ್ನು ಸರ್ಕಾರದ ಅನುಮತಿ ದೊರೆತರೆ ಟಿಟಿಡಿ ಆಯುರ್ವೇದಿಕ್​ ಫಾರ್ಮ್​​ನಲ್ಲಿ ಔಷಧಿ ತಯಾರಿಕೆ ಶೀಘ್ರವೇ ಶುರುವಾಗಲಿದೆ.

ಇದನ್ನೂ ಓದಿ: ಕ್ರಿಕೆಟ್ ದುನಿಯಾದಲ್ಲಿ ಯಾರಿಂದಲೂ ಮುರಿಯಲಾಗದ 10 ವಿಶಿಷ್ಟ ದಾಖಲೆಗಳಿವು; ಈ ದಾಖಲೆಗಳ ಬಗ್ಗೆ ನಿಮಗೆಷ್ಟು ಗೊತ್ತು?

Follow Us
Lakshmi Hegde
Lakshmi Hegde
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ