AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಯುಷ್​ ಇಲಾಖೆ ತಡೆ ನೀಡಿದ್ದರೂ ಆನಂದಯ್ಯನವರ ಆಯುರ್ವೇದ ಔಷಧಿ ವಿತರಣೆಗೆ ಮುಂದಾದ ಟಿಟಿಡಿ..

ಆನಂದಯ್ಯನವರ ಶಿಷ್ಯಂದಿರು ತಿರುಪತಿಗೆ ಭೇಟಿ ನೀಡಲಿದ್ದಾರೆ. ಚೆವಿರೆಡ್ಡಿ ಭಾಸ್ಕರ್​ರೆಡ್ಡಿ ನೇತೃತ್ವದಲ್ಲಿ ಟಿಟಿಯ ಆಯುರ್ವೇದಿಕ್​ ಫಾರ್ಮಾಗೆ ಹೋಗಿ ಔಷಧೀಯ ಸಸ್ಯ, ಗಿಡಮೂಲಿಕೆಗಳನ್ನು ಪರಿಶೀಲನೆ ಮಾಡಲಿದ್ದಾರೆ.

ಆಯುಷ್​ ಇಲಾಖೆ ತಡೆ ನೀಡಿದ್ದರೂ ಆನಂದಯ್ಯನವರ ಆಯುರ್ವೇದ ಔಷಧಿ ವಿತರಣೆಗೆ ಮುಂದಾದ ಟಿಟಿಡಿ..
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on: May 26, 2021 | 6:09 PM

Share

ತಿರುಪತಿ: ಆಂಧ್ರಪ್ರದೇಶದ ಕೃಷ್ಣಾಪಟ್ಟಣಂನಲ್ಲಿ ಆನಂದಯ್ಯ ಎಂಬುವರು ಕೊವಿಡ್​ 19 ಸೋಂಕಿಗೆ ನೀಡುತ್ತಿದ್ದ ಆಯುರ್ವೇದ ಔಷಧಿಗೆ ತಾತ್ಕಾಲಿಕ ತಡೆನೀಡಲಾಗಿದೆ. ಈಗಾಗಲೇ ಆಯುಷ್​ ಇಲಾಖೆಯ ತಜ್ಞರ ತಂಡ ಔಷಧಿ ತಯಾರಿಕೆಯನ್ನು ಪರಿಶೀಲನೆ ನಡೆಸಿದ್ದು, ಈ ಔಷಧಿ ಕೊವಿಡ್​ 19 ಸೋಂಕನ್ನು ಕಡಿಮೆ ಮಾಡುತ್ತದೆ, ಪರಿಣಾಮಕಾರಿಯಾಗಿ ಹೋರಾಡುತ್ತದೆ ಎಂಬುದು ವೈಜ್ಞಾನಿಕವಾಗಿ ಸಾಬೀತು ಆಗುವವರೆಗೂ ಅದನ್ನು ಕೊವಿಡ್​ 19 ಔಷಧಿ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಇಲಾಖೆ ತಿಳಿಸಿದೆ.

ಹೀಗಿದ್ದಾಗ್ಯೂ ತಿರುಮಲ ತಿರುಪತಿ ದೇವಸ್ಥಾನಂ ಟ್ರಸ್ಟ್​ ಬೋರ್ಡ್, ಬೋನಿಗಿ​ ಆನಂದಯ್ಯ ಅವರ ಔಷಧಿಯನ್ನು ಉತ್ಪಾದಿಸಿ, ವಿತರಿಸುವುದಾಗಿ ಹೇಳಿದೆ. ಇದಕ್ಕೆ ಚಂದ್ರಗಿರಿ ಶಾಸಕ ಚೆವಿರೆಡ್ಡಿ ಭಾಸ್ಕರ್​ ರೆಡ್ಡಿಯವರೂ ಸಾಥ್​ ನೀಡಿದ್ದಾರೆ. ಬೋನಿಗಿ ಆನಂದಯ್ಯ ಅವರ ಆಯುರ್ವೇದ ಔಷಧಿಯಿಂದ ಯಾವುದೇ ಅಡ್ಡಪರಿಣಾಮಗಳಿಲ್ಲ. ಅದು ರೋಗ ನಿರೋಧಕ ಶಕ್ತಿ ಹೆಚ್ಚು ಮಾಡುತ್ತದೆ. ಹೀಗಾಗಿ ನಾವು ಆ ಔಷಧಿಯನ್ನು ತಯಾರಿಸಿ, ವಿತರಣೆ ಮಾಡುತ್ತೇವೆ ಎಂದು ಟಿಟಿಡಿ ಹೇಳಿಕೊಂಡಿದೆ.

ಹೀಗಾಗಿ ಆನಂದಯ್ಯನವರ ಶಿಷ್ಯಂದಿರು ತಿರುಪತಿಗೆ ಭೇಟಿ ನೀಡಲಿದ್ದಾರೆ. ಚೆವಿರೆಡ್ಡಿ ಭಾಸ್ಕರ್​ರೆಡ್ಡಿ ನೇತೃತ್ವದಲ್ಲಿ ಟಿಟಿಯ ಆಯುರ್ವೇದಿಕ್​ ಫಾರ್ಮಾಗೆ ಹೋಗಿ ಔಷಧೀಯ ಸಸ್ಯ, ಗಿಡಮೂಲಿಕೆಗಳನ್ನು ಪರಿಶೀಲನೆ ಮಾಡಲಿದ್ದಾರೆ. ಹಾಗೇ, ಟಿಟಿಡಿಯ ಆಯುರ್ವೇದಿಕ್​ ಕಾಲೇಜಿನ ಪ್ರಾಧ್ಯಾಪಕರನ್ನೂ ಭೇಟಿ ಮಾಡಿ ಚರ್ಚಿಸಲಿದ್ದಾರೆ. ಇನ್ನು ಸರ್ಕಾರದ ಅನುಮತಿ ದೊರೆತರೆ ಟಿಟಿಡಿ ಆಯುರ್ವೇದಿಕ್​ ಫಾರ್ಮ್​​ನಲ್ಲಿ ಔಷಧಿ ತಯಾರಿಕೆ ಶೀಘ್ರವೇ ಶುರುವಾಗಲಿದೆ.

ಇದನ್ನೂ ಓದಿ: ಕ್ರಿಕೆಟ್ ದುನಿಯಾದಲ್ಲಿ ಯಾರಿಂದಲೂ ಮುರಿಯಲಾಗದ 10 ವಿಶಿಷ್ಟ ದಾಖಲೆಗಳಿವು; ಈ ದಾಖಲೆಗಳ ಬಗ್ಗೆ ನಿಮಗೆಷ್ಟು ಗೊತ್ತು?

Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ