AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಯುಷ್​ ಇಲಾಖೆ ತಡೆ ನೀಡಿದ್ದರೂ ಆನಂದಯ್ಯನವರ ಆಯುರ್ವೇದ ಔಷಧಿ ವಿತರಣೆಗೆ ಮುಂದಾದ ಟಿಟಿಡಿ..

ಆನಂದಯ್ಯನವರ ಶಿಷ್ಯಂದಿರು ತಿರುಪತಿಗೆ ಭೇಟಿ ನೀಡಲಿದ್ದಾರೆ. ಚೆವಿರೆಡ್ಡಿ ಭಾಸ್ಕರ್​ರೆಡ್ಡಿ ನೇತೃತ್ವದಲ್ಲಿ ಟಿಟಿಯ ಆಯುರ್ವೇದಿಕ್​ ಫಾರ್ಮಾಗೆ ಹೋಗಿ ಔಷಧೀಯ ಸಸ್ಯ, ಗಿಡಮೂಲಿಕೆಗಳನ್ನು ಪರಿಶೀಲನೆ ಮಾಡಲಿದ್ದಾರೆ.

ಆಯುಷ್​ ಇಲಾಖೆ ತಡೆ ನೀಡಿದ್ದರೂ ಆನಂದಯ್ಯನವರ ಆಯುರ್ವೇದ ಔಷಧಿ ವಿತರಣೆಗೆ ಮುಂದಾದ ಟಿಟಿಡಿ..
ಪ್ರಾತಿನಿಧಿಕ ಚಿತ್ರ
Follow us
Lakshmi Hegde
|

Updated on: May 26, 2021 | 6:09 PM

ತಿರುಪತಿ: ಆಂಧ್ರಪ್ರದೇಶದ ಕೃಷ್ಣಾಪಟ್ಟಣಂನಲ್ಲಿ ಆನಂದಯ್ಯ ಎಂಬುವರು ಕೊವಿಡ್​ 19 ಸೋಂಕಿಗೆ ನೀಡುತ್ತಿದ್ದ ಆಯುರ್ವೇದ ಔಷಧಿಗೆ ತಾತ್ಕಾಲಿಕ ತಡೆನೀಡಲಾಗಿದೆ. ಈಗಾಗಲೇ ಆಯುಷ್​ ಇಲಾಖೆಯ ತಜ್ಞರ ತಂಡ ಔಷಧಿ ತಯಾರಿಕೆಯನ್ನು ಪರಿಶೀಲನೆ ನಡೆಸಿದ್ದು, ಈ ಔಷಧಿ ಕೊವಿಡ್​ 19 ಸೋಂಕನ್ನು ಕಡಿಮೆ ಮಾಡುತ್ತದೆ, ಪರಿಣಾಮಕಾರಿಯಾಗಿ ಹೋರಾಡುತ್ತದೆ ಎಂಬುದು ವೈಜ್ಞಾನಿಕವಾಗಿ ಸಾಬೀತು ಆಗುವವರೆಗೂ ಅದನ್ನು ಕೊವಿಡ್​ 19 ಔಷಧಿ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಇಲಾಖೆ ತಿಳಿಸಿದೆ.

ಹೀಗಿದ್ದಾಗ್ಯೂ ತಿರುಮಲ ತಿರುಪತಿ ದೇವಸ್ಥಾನಂ ಟ್ರಸ್ಟ್​ ಬೋರ್ಡ್, ಬೋನಿಗಿ​ ಆನಂದಯ್ಯ ಅವರ ಔಷಧಿಯನ್ನು ಉತ್ಪಾದಿಸಿ, ವಿತರಿಸುವುದಾಗಿ ಹೇಳಿದೆ. ಇದಕ್ಕೆ ಚಂದ್ರಗಿರಿ ಶಾಸಕ ಚೆವಿರೆಡ್ಡಿ ಭಾಸ್ಕರ್​ ರೆಡ್ಡಿಯವರೂ ಸಾಥ್​ ನೀಡಿದ್ದಾರೆ. ಬೋನಿಗಿ ಆನಂದಯ್ಯ ಅವರ ಆಯುರ್ವೇದ ಔಷಧಿಯಿಂದ ಯಾವುದೇ ಅಡ್ಡಪರಿಣಾಮಗಳಿಲ್ಲ. ಅದು ರೋಗ ನಿರೋಧಕ ಶಕ್ತಿ ಹೆಚ್ಚು ಮಾಡುತ್ತದೆ. ಹೀಗಾಗಿ ನಾವು ಆ ಔಷಧಿಯನ್ನು ತಯಾರಿಸಿ, ವಿತರಣೆ ಮಾಡುತ್ತೇವೆ ಎಂದು ಟಿಟಿಡಿ ಹೇಳಿಕೊಂಡಿದೆ.

ಹೀಗಾಗಿ ಆನಂದಯ್ಯನವರ ಶಿಷ್ಯಂದಿರು ತಿರುಪತಿಗೆ ಭೇಟಿ ನೀಡಲಿದ್ದಾರೆ. ಚೆವಿರೆಡ್ಡಿ ಭಾಸ್ಕರ್​ರೆಡ್ಡಿ ನೇತೃತ್ವದಲ್ಲಿ ಟಿಟಿಯ ಆಯುರ್ವೇದಿಕ್​ ಫಾರ್ಮಾಗೆ ಹೋಗಿ ಔಷಧೀಯ ಸಸ್ಯ, ಗಿಡಮೂಲಿಕೆಗಳನ್ನು ಪರಿಶೀಲನೆ ಮಾಡಲಿದ್ದಾರೆ. ಹಾಗೇ, ಟಿಟಿಡಿಯ ಆಯುರ್ವೇದಿಕ್​ ಕಾಲೇಜಿನ ಪ್ರಾಧ್ಯಾಪಕರನ್ನೂ ಭೇಟಿ ಮಾಡಿ ಚರ್ಚಿಸಲಿದ್ದಾರೆ. ಇನ್ನು ಸರ್ಕಾರದ ಅನುಮತಿ ದೊರೆತರೆ ಟಿಟಿಡಿ ಆಯುರ್ವೇದಿಕ್​ ಫಾರ್ಮ್​​ನಲ್ಲಿ ಔಷಧಿ ತಯಾರಿಕೆ ಶೀಘ್ರವೇ ಶುರುವಾಗಲಿದೆ.

ಇದನ್ನೂ ಓದಿ: ಕ್ರಿಕೆಟ್ ದುನಿಯಾದಲ್ಲಿ ಯಾರಿಂದಲೂ ಮುರಿಯಲಾಗದ 10 ವಿಶಿಷ್ಟ ದಾಖಲೆಗಳಿವು; ಈ ದಾಖಲೆಗಳ ಬಗ್ಗೆ ನಿಮಗೆಷ್ಟು ಗೊತ್ತು?

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನೂಕುನುಗ್ಗಲು; ಕಾಲು ಮುರಿದುಕೊಂಡ ಯುವಕ
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನೂಕುನುಗ್ಗಲು; ಕಾಲು ಮುರಿದುಕೊಂಡ ಯುವಕ
ನಿನ್ನೆ ಗಲಾಟೆಗಳಿಗೆ ಅವಕಾಶ ನೀಡದ ಬೆಂಗಳೂರು ಜನಕ್ಕೆ ಧನ್ಯವಾದ: ದಯಾನಂದ
ನಿನ್ನೆ ಗಲಾಟೆಗಳಿಗೆ ಅವಕಾಶ ನೀಡದ ಬೆಂಗಳೂರು ಜನಕ್ಕೆ ಧನ್ಯವಾದ: ದಯಾನಂದ
ಕೊಹ್ಲಿ ಆ್ಯಂಡ್​ ಟೀಂಗೆ ಕನ್ನಡ ಧ್ವಜ ನೀಡಿ ಸ್ವಾಗತಿಸಿದ ಡಿಕೆ ಶಿವಕುಮಾರ್
ಕೊಹ್ಲಿ ಆ್ಯಂಡ್​ ಟೀಂಗೆ ಕನ್ನಡ ಧ್ವಜ ನೀಡಿ ಸ್ವಾಗತಿಸಿದ ಡಿಕೆ ಶಿವಕುಮಾರ್
IPL​​ ಕಪ್​ ಹೊತ್ತು ಬೆಂಗಳೂರಿಗೆ ಬಂದ ಆರ್​ಸಿಬಿ ಆಟಗಾರರು, ಲೈವ್​ ಇಲ್ಲಿದೆ
IPL​​ ಕಪ್​ ಹೊತ್ತು ಬೆಂಗಳೂರಿಗೆ ಬಂದ ಆರ್​ಸಿಬಿ ಆಟಗಾರರು, ಲೈವ್​ ಇಲ್ಲಿದೆ
ವಿಧಾನ ಸೌಧದಲ್ಲಿ ಸತ್ಕಾರದ ನಂತರ ತೆರೆದ ವಾಹನದಲ್ಲಿ ಮೆರವಣಿಗೆ ಇಲ್ಲ
ವಿಧಾನ ಸೌಧದಲ್ಲಿ ಸತ್ಕಾರದ ನಂತರ ತೆರೆದ ವಾಹನದಲ್ಲಿ ಮೆರವಣಿಗೆ ಇಲ್ಲ
ಸಾಯಂಕಾಲ 6 ಗಂಟೆಯಿಂದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಟಗಾರರ ವಿಕ್ಟರಿ ಪರೇಡ್
ಸಾಯಂಕಾಲ 6 ಗಂಟೆಯಿಂದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಟಗಾರರ ವಿಕ್ಟರಿ ಪರೇಡ್
ಮೈಸೂರಿನ ಎಲ್ಲ ಇಂದಿರಾ ಕ್ಯಾಂಟೀನ್​ಗಳಲ್ಲಿ ಉಚಿತ ಹೋಳಿಗೆ ಊಟ
ಮೈಸೂರಿನ ಎಲ್ಲ ಇಂದಿರಾ ಕ್ಯಾಂಟೀನ್​ಗಳಲ್ಲಿ ಉಚಿತ ಹೋಳಿಗೆ ಊಟ
ಸಮಾರಂಭದ ಬಗ್ಗೆ ಹೆಚ್ಚಿನ ವಿವರಗಳನ್ನು ನೀಡದ ಡಿಸಿಎಂ ಡಿಕೆ ಶಿವಕುಮಾರ್
ಸಮಾರಂಭದ ಬಗ್ಗೆ ಹೆಚ್ಚಿನ ವಿವರಗಳನ್ನು ನೀಡದ ಡಿಸಿಎಂ ಡಿಕೆ ಶಿವಕುಮಾರ್
ಆರ್​ಸಿಬಿ ಗೆದ್ದ ಬಳಿಕ ಮಕ್ಕಳಂತೆ ಕುಣಿದು ಕುಪ್ಪಳಿಸಿದ ಪ್ರಶಾಂತ್ ನೀಲ್
ಆರ್​ಸಿಬಿ ಗೆದ್ದ ಬಳಿಕ ಮಕ್ಕಳಂತೆ ಕುಣಿದು ಕುಪ್ಪಳಿಸಿದ ಪ್ರಶಾಂತ್ ನೀಲ್
VIDEO: ಇದು ಈ ಬಾರಿಯ ಐಪಿಎಲ್​ನ 10 ಲಕ್ಷ ರೂ. ಮೌಲ್ಯದ ಕ್ಯಾಚ್
VIDEO: ಇದು ಈ ಬಾರಿಯ ಐಪಿಎಲ್​ನ 10 ಲಕ್ಷ ರೂ. ಮೌಲ್ಯದ ಕ್ಯಾಚ್