AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tirupati Temple: ಹೊಸ ವರ್ಷದಂದು ಹೊಸ ದಾಖಲೆ ಬರೆದ ತಿರುಪತಿ ದೇವಸ್ಥಾನ; ಒಂದೇ ದಿನ 7.6 ಕೋಟಿ ರೂ. ಕಾಣಿಕೆ ಸಂಗ್ರಹ

ಡಿಸೆಂಬರ್ 31ರ ಮಧ್ಯರಾತ್ರಿಯಿಂದ ಸಾವಿರಾರು ಭಕ್ತರು 7 ಬೆಟ್ಟಗಳ ಭಗವಂತ ತಿಮ್ಮಪ್ಪನ ಆಶೀರ್ವಾದಕ್ಕಾಗಿ ದೇವಾಲಯಕ್ಕೆ ಆಗಮಿಸಿದ್ದರು. ಈ ವೇಳೆ ಕಿಲೋಮೀಟರ್‌ಗಳವರೆಗೆ ಜನರ ಸಾಲುಗಳಿತ್ತು.

Tirupati Temple: ಹೊಸ ವರ್ಷದಂದು ಹೊಸ ದಾಖಲೆ ಬರೆದ ತಿರುಪತಿ ದೇವಸ್ಥಾನ; ಒಂದೇ ದಿನ 7.6 ಕೋಟಿ ರೂ. ಕಾಣಿಕೆ ಸಂಗ್ರಹ
ತಿರುಪತಿ ದೇವಸ್ಥಾನ
TV9 Web
| Edited By: |

Updated on: Jan 05, 2023 | 10:20 AM

Share

ತಿರುಪತಿ: ಆಂಧ್ರಪ್ರದೇಶದ ತಿರುಮಲ ತಿರುಪತಿ ವೆಂಕಟೇಶ್ವರ ದೇವಸ್ಥಾನವು (Tirumala Tirupati Venkateshwara Temple) ಹೊಸ ವರ್ಷದ ದಿನದಂದು (New Year Celebration) ಹೊಸ ದಾಖಲೆ ಬರೆದಿದೆ. ಜನವರಿ 1ರಂದು ತಿರುಪತಿಯ ದೇವಸ್ಥಾನಕ್ಕೆ ದಾಖಲೆಯ 7.6 ಕೋಟಿ ರೂ. ದೇಣಿಗೆ ಸಿಕ್ಕಿದೆ. ಅತಿ ಹೆಚ್ಚು ಕಾಣಿಕೆ ಪಡೆಯುವ ದೇವಾಲಯವೆಂದು ಪ್ರಸಿದ್ಧಿ ಪಡೆದಿರುವ ತಿರುಪತಿಗೆ ಒಂದೇ ದಿನ ಇಷ್ಟು ಬಾರಿ ಮೊತ್ತದ ದೇಣಿಗೆ ಹರಿದುಬಂದಿದೆ. ಇದು ದೇವಸ್ಥಾನಕ್ಕೆ ಒಂದೇ ದಿನದಲ್ಲಿ ಬಂದ ಅತಿ ಹೆಚ್ಚು ಮೊತ್ತದ ಹುಂಡಿ ಕಾಣಿಕೆಯಾಗಿದೆ.

ಸೋಮವಾರ ವೈಕುಂಠ ಏಕಾದಶಿಯ ಗೌರವಾರ್ಥವಾಗಿ, ವಿಶ್ವದ ಶ್ರೀಮಂತ ಹಿಂದೂ ದೇವಾಲಯವಾದ ತಿರುಪತಿಗೆ ಉದಾರ ಕೊಡುಗೆಯನ್ನು ನೀಡಲಾಯಿತು. ಒಟ್ಟು ಮೊತ್ತವು 6.3 ಕೋಟಿ ರೂ.ಗಳಾಗಿದ್ದು, ಇದು ಭಾರತೀಯ ಇತಿಹಾಸದಲ್ಲಿ ಅತಿದೊಡ್ಡ ಏಕದಿನದ ಕಾಣಿಕೆಯಾಗಿದೆ.

ಇದನ್ನೂ ಓದಿ: ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ರಾಷ್ಟ್ರಪತಿ ದ್ರೌಪದಿ ಮುರ್ಮು

ಡಿಸೆಂಬರ್ 31ರ ಮಧ್ಯರಾತ್ರಿಯಿಂದ ಸಾವಿರಾರು ಭಕ್ತರು 7 ಬೆಟ್ಟಗಳ ಭಗವಂತ ತಿಮ್ಮಪ್ಪನ ಆಶೀರ್ವಾದಕ್ಕಾಗಿ ದೇವಾಲಯಕ್ಕೆ ಆಗಮಿಸಿದ್ದರು. ಈ ವೇಳೆ ಕಿಲೋಮೀಟರ್‌ಗಳವರೆಗೆ ಜನರ ಸಾಲುಗಳಿತ್ತು. ಕಳೆದ ವರ್ಷದ ಏಪ್ರಿಲ್‌ನಲ್ಲಿ ದೇವಸ್ಥಾನದಲ್ಲಿ ಕೋವಿಡ್ -19 ಮಿತಿಗಳನ್ನು ಸಡಿಲಗೊಳಿಸಿದಾಗಿನಿಂದ ದೇವಾಲಯದ ಟ್ರಸ್ಟ್ ಬೋರ್ಡ್ ಪ್ರತಿ ತಿಂಗಳು ಭಾರೀ ಪ್ರಮಾಣದ ಹುಂಡಿ ಸಂಗ್ರಹವನ್ನು ಪಡೆಯುತ್ತಿದೆ.

ಇದನ್ನೂ ಓದಿ: TTD Online Ticket: ತಿರುಪತಿಯಲ್ಲಿ ನಡೆಯುವ ಅಂಗ ಪ್ರದಕ್ಷಿಣಂಗೆ ಇಂದಿನಿಂದ ಟಿಕೆಟ್ ವಿತರಣೆ ಆರಂಭ

ಈ ತಿರುಪತಿ ತಿರುಮಲ ದೇವಾಲಯದ ಉಸ್ತುವಾರಿ ವಹಿಸಿರುವ ತಿರುಮಲ ತಿರುಪತಿ ದೇವಸ್ಥಾನಮ್ಸ್ (ಟಿಟಿಡಿ) ಪ್ರಕಾರ, ದೇಗುಲಕ್ಕೆ ದೇಣಿಗೆ ನೀಡಿದ ಹುಂಡಿಯ ಮೊತ್ತವು 2012 ಮತ್ತು 2022ರ ನಡುವೆ ಸುಮಾರು ದ್ವಿಗುಣಗೊಂಡಿದೆ. ತಿರುಮಲ ದೇವಸ್ಥಾನದ ಹುಂಡಿಯಲ್ಲಿ ಪ್ರತಿ ದಿನ ಸರಾಸರಿ 6 ಕೋಟಿ ದೇಣಿಗೆ ಬರುತ್ತಿದೆ. ಇತರ ಪ್ರಮುಖ ಹಿಂದೂ ದೇವಾಲಯಗಳಲ್ಲಿ ಪ್ರತಿ ತಿಂಗಳಿಗೆ 4 ಕೋಟಿ ರೂ. ದೇಣಿಗೆ ಬರುತ್ತಿದೆ. ಕಳೆದ ವರ್ಷದ ಏಪ್ರಿಲ್‌ನಲ್ಲಿ ಕೋವಿಡ್ -19 ಹರಡುವ ಮೊದಲು ತಿರುಮಲ ದೇಗುಲದಲ್ಲಿ ಮಾಸಿಕ ಹುಂಡಿ ಕಾಣಿಕೆ 90ರಿಂದ 115 ಕೋಟಿ ರೂ. ಇತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್