AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tirupati Temple: ಹೊಸ ವರ್ಷದಂದು ಹೊಸ ದಾಖಲೆ ಬರೆದ ತಿರುಪತಿ ದೇವಸ್ಥಾನ; ಒಂದೇ ದಿನ 7.6 ಕೋಟಿ ರೂ. ಕಾಣಿಕೆ ಸಂಗ್ರಹ

ಡಿಸೆಂಬರ್ 31ರ ಮಧ್ಯರಾತ್ರಿಯಿಂದ ಸಾವಿರಾರು ಭಕ್ತರು 7 ಬೆಟ್ಟಗಳ ಭಗವಂತ ತಿಮ್ಮಪ್ಪನ ಆಶೀರ್ವಾದಕ್ಕಾಗಿ ದೇವಾಲಯಕ್ಕೆ ಆಗಮಿಸಿದ್ದರು. ಈ ವೇಳೆ ಕಿಲೋಮೀಟರ್‌ಗಳವರೆಗೆ ಜನರ ಸಾಲುಗಳಿತ್ತು.

Tirupati Temple: ಹೊಸ ವರ್ಷದಂದು ಹೊಸ ದಾಖಲೆ ಬರೆದ ತಿರುಪತಿ ದೇವಸ್ಥಾನ; ಒಂದೇ ದಿನ 7.6 ಕೋಟಿ ರೂ. ಕಾಣಿಕೆ ಸಂಗ್ರಹ
ತಿರುಪತಿ ದೇವಸ್ಥಾನ
TV9 Web
| Edited By: |

Updated on: Jan 05, 2023 | 10:20 AM

Share

ತಿರುಪತಿ: ಆಂಧ್ರಪ್ರದೇಶದ ತಿರುಮಲ ತಿರುಪತಿ ವೆಂಕಟೇಶ್ವರ ದೇವಸ್ಥಾನವು (Tirumala Tirupati Venkateshwara Temple) ಹೊಸ ವರ್ಷದ ದಿನದಂದು (New Year Celebration) ಹೊಸ ದಾಖಲೆ ಬರೆದಿದೆ. ಜನವರಿ 1ರಂದು ತಿರುಪತಿಯ ದೇವಸ್ಥಾನಕ್ಕೆ ದಾಖಲೆಯ 7.6 ಕೋಟಿ ರೂ. ದೇಣಿಗೆ ಸಿಕ್ಕಿದೆ. ಅತಿ ಹೆಚ್ಚು ಕಾಣಿಕೆ ಪಡೆಯುವ ದೇವಾಲಯವೆಂದು ಪ್ರಸಿದ್ಧಿ ಪಡೆದಿರುವ ತಿರುಪತಿಗೆ ಒಂದೇ ದಿನ ಇಷ್ಟು ಬಾರಿ ಮೊತ್ತದ ದೇಣಿಗೆ ಹರಿದುಬಂದಿದೆ. ಇದು ದೇವಸ್ಥಾನಕ್ಕೆ ಒಂದೇ ದಿನದಲ್ಲಿ ಬಂದ ಅತಿ ಹೆಚ್ಚು ಮೊತ್ತದ ಹುಂಡಿ ಕಾಣಿಕೆಯಾಗಿದೆ.

ಸೋಮವಾರ ವೈಕುಂಠ ಏಕಾದಶಿಯ ಗೌರವಾರ್ಥವಾಗಿ, ವಿಶ್ವದ ಶ್ರೀಮಂತ ಹಿಂದೂ ದೇವಾಲಯವಾದ ತಿರುಪತಿಗೆ ಉದಾರ ಕೊಡುಗೆಯನ್ನು ನೀಡಲಾಯಿತು. ಒಟ್ಟು ಮೊತ್ತವು 6.3 ಕೋಟಿ ರೂ.ಗಳಾಗಿದ್ದು, ಇದು ಭಾರತೀಯ ಇತಿಹಾಸದಲ್ಲಿ ಅತಿದೊಡ್ಡ ಏಕದಿನದ ಕಾಣಿಕೆಯಾಗಿದೆ.

ಇದನ್ನೂ ಓದಿ: ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ರಾಷ್ಟ್ರಪತಿ ದ್ರೌಪದಿ ಮುರ್ಮು

ಡಿಸೆಂಬರ್ 31ರ ಮಧ್ಯರಾತ್ರಿಯಿಂದ ಸಾವಿರಾರು ಭಕ್ತರು 7 ಬೆಟ್ಟಗಳ ಭಗವಂತ ತಿಮ್ಮಪ್ಪನ ಆಶೀರ್ವಾದಕ್ಕಾಗಿ ದೇವಾಲಯಕ್ಕೆ ಆಗಮಿಸಿದ್ದರು. ಈ ವೇಳೆ ಕಿಲೋಮೀಟರ್‌ಗಳವರೆಗೆ ಜನರ ಸಾಲುಗಳಿತ್ತು. ಕಳೆದ ವರ್ಷದ ಏಪ್ರಿಲ್‌ನಲ್ಲಿ ದೇವಸ್ಥಾನದಲ್ಲಿ ಕೋವಿಡ್ -19 ಮಿತಿಗಳನ್ನು ಸಡಿಲಗೊಳಿಸಿದಾಗಿನಿಂದ ದೇವಾಲಯದ ಟ್ರಸ್ಟ್ ಬೋರ್ಡ್ ಪ್ರತಿ ತಿಂಗಳು ಭಾರೀ ಪ್ರಮಾಣದ ಹುಂಡಿ ಸಂಗ್ರಹವನ್ನು ಪಡೆಯುತ್ತಿದೆ.

ಇದನ್ನೂ ಓದಿ: TTD Online Ticket: ತಿರುಪತಿಯಲ್ಲಿ ನಡೆಯುವ ಅಂಗ ಪ್ರದಕ್ಷಿಣಂಗೆ ಇಂದಿನಿಂದ ಟಿಕೆಟ್ ವಿತರಣೆ ಆರಂಭ

ಈ ತಿರುಪತಿ ತಿರುಮಲ ದೇವಾಲಯದ ಉಸ್ತುವಾರಿ ವಹಿಸಿರುವ ತಿರುಮಲ ತಿರುಪತಿ ದೇವಸ್ಥಾನಮ್ಸ್ (ಟಿಟಿಡಿ) ಪ್ರಕಾರ, ದೇಗುಲಕ್ಕೆ ದೇಣಿಗೆ ನೀಡಿದ ಹುಂಡಿಯ ಮೊತ್ತವು 2012 ಮತ್ತು 2022ರ ನಡುವೆ ಸುಮಾರು ದ್ವಿಗುಣಗೊಂಡಿದೆ. ತಿರುಮಲ ದೇವಸ್ಥಾನದ ಹುಂಡಿಯಲ್ಲಿ ಪ್ರತಿ ದಿನ ಸರಾಸರಿ 6 ಕೋಟಿ ದೇಣಿಗೆ ಬರುತ್ತಿದೆ. ಇತರ ಪ್ರಮುಖ ಹಿಂದೂ ದೇವಾಲಯಗಳಲ್ಲಿ ಪ್ರತಿ ತಿಂಗಳಿಗೆ 4 ಕೋಟಿ ರೂ. ದೇಣಿಗೆ ಬರುತ್ತಿದೆ. ಕಳೆದ ವರ್ಷದ ಏಪ್ರಿಲ್‌ನಲ್ಲಿ ಕೋವಿಡ್ -19 ಹರಡುವ ಮೊದಲು ತಿರುಮಲ ದೇಗುಲದಲ್ಲಿ ಮಾಸಿಕ ಹುಂಡಿ ಕಾಣಿಕೆ 90ರಿಂದ 115 ಕೋಟಿ ರೂ. ಇತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ