AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tirupati Budget: ತಿರುಪತಿ ತಿಮ್ಮಪ್ಪನಿಗೆ ಬರೋಬ್ಬರಿ 5,142 ಕೋಟಿ ರೂ. ಬಜೆಟ್‌, ಹುಂಡಿಯಿಂದ ಬಂದ ಆದಾಯವೆಷ್ಟು?

ವಿಶ್ವದ ಅತಿ ಶ್ರೀಮಂತ ದೇವಸ್ಥಾನಗಳಲ್ಲಿ ಒಂದಾದ ತಿರುಪತಿಯ ಶ್ರೀ ವೆಂಕಟೇಶ್ವರ ದೇವಸ್ಥಾನದ ವರ್ಷದ ಬಜೆಟ್‌ ಮಂಡನೆಯಾಗಿದ್ದು, ಬರೋಬ್ಬರಿ 5,142 ಕೋಟಿ ರೂ.ಗಳ ಅಂದಾಜು ವೆಚ್ಚದೊಂದಿಗೆ 2024-25ರ ವಾರ್ಷಿಕ ಬಜೆಟ್‌ ಅನ್ನು ಅನುಮೋದಿಸಲಾಗಿದೆ. ದೇವಸ್ಥಾನವನ್ನು ನಿರ್ವಹಿಸುವ ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಬಜೆಟ್‌ ಅನ್ನು ಮಂಡಿಸಿದ್ದು, 1933ರಲ್ಲಿ ದೇವಾಲಯದ ಟ್ರಸ್ಟ್‌ ಆರಂಭವಾದ ಬಳಿಕ ಇದೇ ಅತಿ ಹೆಚ್ಚಿನ ಬಜೆಟ್‌ ಅಂದಾಜು ಆಗಿದೆ.

Tirupati Budget: ತಿರುಪತಿ ತಿಮ್ಮಪ್ಪನಿಗೆ ಬರೋಬ್ಬರಿ 5,142 ಕೋಟಿ ರೂ. ಬಜೆಟ್‌, ಹುಂಡಿಯಿಂದ ಬಂದ ಆದಾಯವೆಷ್ಟು?
ತಿರುಪತಿ
ನಯನಾ ರಾಜೀವ್
| Edited By: |

Updated on:Jan 30, 2024 | 12:34 PM

Share

ವಿಶ್ವದ ಅತಿ ಶ್ರೀಮಂತ ದೇವಸ್ಥಾನಗಳಲ್ಲಿ ಒಂದಾದ ತಿರುಪತಿಯ ಶ್ರೀ ವೆಂಕಟೇಶ್ವರ ದೇವಸ್ಥಾನದ ವರ್ಷದ ಬಜೆಟ್‌ ಮಂಡನೆಯಾಗಿದ್ದು, ಬರೋಬ್ಬರಿ 5,142 ಕೋಟಿ ರೂ.ಗಳ ಅಂದಾಜು ವೆಚ್ಚದೊಂದಿಗೆ 2024-25ರ ವಾರ್ಷಿಕ ಬಜೆಟ್‌ ಅನ್ನು ಅನುಮೋದಿಸಲಾಗಿದೆ. ದೇವಸ್ಥಾನವನ್ನು ನಿರ್ವಹಿಸುವ ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಬಜೆಟ್‌ ಅನ್ನು ಮಂಡಿಸಿದ್ದು, 1933ರಲ್ಲಿ ದೇವಾಲಯದ ಟ್ರಸ್ಟ್‌ ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಆರಂಭವಾದ ಬಳಿಕ ಇದೇ ಅತಿ ಹೆಚ್ಚಿನ ಬಜೆಟ್‌ ಅಂದಾಜು ಆಗಿದೆ ಎಂದು ಟಿಟಿಡಿ ಮಂಡಳಿ ವಿವರಿಸಿದೆ.

ಕೊರೊನಾ ಸಾಂಕ್ರಾಮಿಕದ ಬಳಿಕ ತಿರುಪತಿ ದೇವಸ್ಥಾನದ ಹುಂಡಿಯ ಆದಾಯವು ಅಚ್ಚರಿಯ ರೀತಿಯಲ್ಲಿ ಹೆಚ್ಚಾಗಿದೆ. ಅಧ್ಯಕ್ಷ ಭೂಮನ ಕರುಣಾಕರ ರೆಡ್ಡಿ ಅವರು ಟಿಟಿಡಿ ಮಂಡಳಿಯ ನಿರ್ಣಯಗಳನ್ನು ವಿವರಿಸಿದರು. ಈ ವರ್ಷದಿಂದ ಹೊಸ ಪ್ರಯೋಗ ಆರಂಭಿಸಲಾಗಿದೆ.ಟಿಟಿಡಿ ನೌಕರರ ವಸತಿ ಪ್ರದೇಶಗಳಲ್ಲಿ ಜಲ್ಲಿಕಲ್ಲು ರಸ್ತೆ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ. ಲಡ್ಡೂ ತಟ್ಟೆ ಕಾರ್ಮಿಕರಿಗೆ ಹೆಚ್ಚುವರಿಯಾಗಿ 15 ಸಾವಿರ ವೇತನ ಹೆಚ್ಚಳದ ಜತೆಗೆ ವೇದ ಶಾಲೆಗಳ 51 ಶಿಕ್ಷಕರ ವೇತನವನ್ನು 34,000ದಿಂದ 54,000ಕ್ಕೆ ಹೆಚ್ಚಿಸಲು ನಿರ್ಧರಿಸಲಾಗಿದೆ.

ಮತ್ತಷ್ಟು ಓದಿ: ರಾಮ ಮಂದಿರ ಉದ್ಘಾಟನೆ ವೇಳೆ ಭಕ್ತರಿಗೆ ತಿರುಪತಿ ಲಡ್ಡು ವಿತರಣೆ, ಅಯೋಧ್ಯೆಯಲ್ಲಿ ವೆಂಕಟೇಶ್ವರ ದೇಗುಲ ನಿರ್ಮಾಣಕ್ಕೆ ಮನವಿ

ಟಿಟಿಡಿ ಅಧೀನದಲ್ಲಿ ನಡೆಯುತ್ತಿರುವ 60 ದೇವಸ್ಥಾನಗಳಲ್ಲಿ ಹೊಸ ಹುದ್ದೆಗಳ ಮಂಜೂರಾತಿಗೆ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗುತ್ತಿದೆ ಎಂದರು. ಸ್ವಿಮ್ಸ್ ಆಸ್ಪತ್ರೆಯನ್ನು 300 ಹಾಸಿಗೆಗಳಿಂದ 1200 ಹಾಸಿಗೆಗಳಿಗೆ ವಿಸ್ತರಿಸಲು 148 ಕೋಟಿ ರೂಪಾಯಿಗಳ ಟೆಂಡರ್ ಅನ್ನು ಟಿಟಿಡಿ ಮಂಡಳಿಯು ಅನುಮೋದಿಸಿದೆ.

ಅನ್ನಮಯ್ಯ ಭವನದ ಆಧುನೀಕರಣಕ್ಕೆ ಟಿಟಿಡಿ ಮಂಡಳಿ 47 ಸಾವಿರ ಕೋಟಿ ರೂ. ಸಪ್ತಗಿರಿ ಸತ್ರಗಳಲ್ಲಿ ಅಭಿವೃದ್ಧಿ ಕಾಮಗಾರಿಗೆ 1.5 ಕೋಟಿ.. ಎಸ್‌ಎಂಸಿ ಜತೆಗೆ ಹಲವು ಕಾಟೇಜ್‌ಗಳ ಆಧುನೀಕರಣಕ್ಕೆ 10 ಕೋಟಿ. ಟಿಟಿಡಿಯಲ್ಲಿ ಒರಾಕಲ್ ಫ್ಯೂಷನ್ ಕ್ಲೌಡ್ ಸಾಫ್ಟ್‌ವೇರ್ ಬಳಕೆಯನ್ನು ಸಹ ಅನುಮೋದಿಸಲಾಗಿದೆ. 1,611 ಕೋಟಿ ರೂಪಾಯಿ ಭಕ್ತರ ಕಾಣಿಕೆ ರೂಪದಲ್ಲಿ ಸಂಗ್ರಹವಾಗಿದೆ. ಕಳೆದ ವರ್ಷವೂ ವಿಶ್ವವಿಖ್ಯಾತ ದೇವಾಲಯಕ್ಕೆ ಇದೇ ರೀತಿಯ ಕೊಡುಗೆಗಳು ಬಂದಿದ್ದವು.

ದೇವಾಲಯದ ಸಂಸ್ಥೆಯು ವೇತನಕ್ಕಾಗಿ 1,733 ಕೋಟಿ ರೂ.ಗಳನ್ನು ನಿಗದಿಪಡಿಸಿದೆ, ಇದು 2023-24ಕ್ಕೆ 1,664 ಕೋಟಿ ರೂ.ಗಿಂತ ಹೆಚ್ಚಾಗಿದೆ. ಇದಾದ ಬಳಿಕ ವಸ್ತು ಖರೀದಿಗೆ 751 ಕೋಟಿ ರೂ.ಗಳನ್ನು ನಿಗದಿ ಮಾಡಲಾಗಿದ್ದು, ಇತರ ಹೂಡಿಕೆಗಳಿಗೂ ಅದೇ ಮೊತ್ತವನ್ನು ನಿಗದಿಪಡಿಸಲಾಗಿದೆ.

ಇಂಜಿನಿಯರಿಂಗ್ ಕ್ಯಾಪಿಟಲ್ ಕಾಮಗಾರಿಗಳಿಗೆ ಕಳೆದ ವರ್ಷಕ್ಕಿಂತ 25 ಕೋಟಿ ರೂ., ಇಂಜಿನಿಯರಿಂಗ್ ನಿರ್ವಹಣಾ ಕಾಮಗಾರಿಗಳ ವೆಚ್ಚ 190 ಕೋಟಿ ರೂ.ಗಳಾಗಿದ್ದು, ಕಳೆದ ವರ್ಷ 150 ಕೋಟಿ ರೂ.ಗಳಿಗೆ ಹೋಲಿಸಿದರೆ 350 ಕೋಟಿ ರೂ. 2024-25 ನೇ ಸಾಲಿನಲ್ಲಿ ಆಂಧ್ರ ಪ್ರದೇಶ ಸರ್ಕಾರಕ್ಕೆ TTD ಯ ಕೊಡುಗೆಯನ್ನು 50 ಕೋಟಿ ಎಂದು ಅಂದಾಜಿಸಲಾಗಿದೆ, ಇದು 2023-24 ಕ್ಕೆ ಸಮಾನವಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:27 am, Tue, 30 January 24

ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು