AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಮಲ-ತಿರುಪತಿ ಕಾಲುದಾರಿಯಲ್ಲಿ ಮತ್ತೊಂದು ಚಿರತೆ ಸೆರೆ

ತಿರುಮಲ ತಿರುಪತಿ(Tirupati)  ಕಾಲುದಾರಿಯಲ್ಲಿ ಮತ್ತೊಂದು ಚಿರತೆ(Leopard)ಯನ್ನು ಸೆರೆಹಿಡಿಯಲಾಗಿದೆ, ನರಸಿಂಹಸ್ವಾಮಿ ದೇವಸ್ಥಾನದ ಬಳಿ 5ನೇ ಚಿರತೆ ಸೆರೆ ಹಿಡಿಯಲಾಗಿದೆ. 4 ದಿನದಿಂದ ಟ್ರ್ಯಾಪ್ ಕ್ಯಾಮರಾ ಮೂಲಕ ಚಿರತೆ ಚಲನವಲನ ಪತ್ತೆ ಮಾಡಲಾಗುತ್ತಿತ್ತು, ಸಿಬ್ಬಂದಿ ನರಸಿಂಹಸ್ವಾಮಿ ದೇವಸ್ಥಾನದ ಬಳಿ ಬೋನ್ ಇಟ್ಟಿದ್ದರು, ಅರಣ್ಯ ಸಿಬ್ಬಂದಿ ಗಂಡು ಚಿರತೆಯನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಪ್ರದೇಶದಲ್ಲಿ ಚಿರತೆ ಸಂಕುಲವನ್ನು ನಿಯಂತ್ರಿಸುವ ಪ್ರಯತ್ನದ ಭಾಗವಾಗಿ ಅಲಿಪಿರಿ ಪಾದಚಾರಿ ಮಾರ್ಗದ ಉದ್ದಕ್ಕೂ ಬೋನ್‌ಗಳನ್ನು ಬಳಸಲಾಗಿತ್ತು.

ತಿರುಮಲ-ತಿರುಪತಿ ಕಾಲುದಾರಿಯಲ್ಲಿ ಮತ್ತೊಂದು ಚಿರತೆ ಸೆರೆ
ಚಿರತೆ-ಸಾಂದರ್ಭಿಕ ಚಿತ್ರImage Credit source: Drishti IAS
ನಯನಾ ರಾಜೀವ್
|

Updated on: Sep 07, 2023 | 8:30 AM

Share

ತಿರುಮಲ ತಿರುಪತಿ(Tirupati)  ಕಾಲುದಾರಿಯಲ್ಲಿ ಮತ್ತೊಂದು ಚಿರತೆ(Leopard)ಯನ್ನು ಸೆರೆಹಿಡಿಯಲಾಗಿದೆ, ನರಸಿಂಹಸ್ವಾಮಿ ದೇವಸ್ಥಾನದ ಬಳಿ 5ನೇ ಚಿರತೆ ಸೆರೆ ಹಿಡಿಯಲಾಗಿದೆ. 4 ದಿನದಿಂದ ಟ್ರ್ಯಾಪ್ ಕ್ಯಾಮರಾ ಮೂಲಕ ಚಿರತೆ ಚಲನವಲನ ಪತ್ತೆ ಮಾಡಲಾಗುತ್ತಿತ್ತು, ಸಿಬ್ಬಂದಿ ನರಸಿಂಹಸ್ವಾಮಿ ದೇವಸ್ಥಾನದ ಬಳಿ ಬೋನ್ ಇಟ್ಟಿದ್ದರು, ಅರಣ್ಯ ಸಿಬ್ಬಂದಿ ಗಂಡು ಚಿರತೆಯನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಪ್ರದೇಶದಲ್ಲಿ ಚಿರತೆ ಸಂಕುಲವನ್ನು ನಿಯಂತ್ರಿಸುವ ಪ್ರಯತ್ನದ ಭಾಗವಾಗಿ ಅಲಿಪಿರಿ ಪಾದಚಾರಿ ಮಾರ್ಗದ ಉದ್ದಕ್ಕೂ ಬೋನ್‌ಗಳನ್ನು ಬಳಸಲಾಗಿತ್ತು.

ನಾಲ್ಕು ದಿನಗಳ ಹಿಂದೆಯಷ್ಟೇ ಟ್ರ್ಯಾಪ್ ಕ್ಯಾಮೆರಾದಲ್ಲಿ ಚಿರತೆಯ ಇರುವಿಕೆಯನ್ನು ಪತ್ತೆಹಚ್ಚಲಾಗಿತ್ತು. ದಕ್ಕೆ ಸ್ಪಂದಿಸಿದ ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಅಧಿಕಾರಿಗಳು ಮತ್ತು ಅರಣ್ಯ ಸಿಬ್ಬಂದಿಗಳು ಕೂಡಲೇ ಸುತ್ತಮುತ್ತ ಬೋನನ್ನು ಅಳವಡಿಸಿ ರಾತ್ರಿ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಅಲಿಪಿರಿ-ತಿರುಮಲ ಕಾಲುದಾರಿಯಲ್ಲಿ ಕಳೆದ ಐದು ದಿನಗಳ ಹಿಂದಷ್ಟೇ ಮತ್ತೊಂದು ಚಿರತೆ ಪ್ರತ್ಯಕ್ಷವಾಗಿತ್ತು. ಬಾಲಾಜಿಯ ದರ್ಶನಕ್ಕಾಗಿ ತಿರುಪತಿಯಲ್ಲಿದ್ದ ಯಾತ್ರಾರ್ಥಿಗಳಲ್ಲಿ ಆತಂಕ ಮೂಡಿಸಿತ್ತು.

ಮತ್ತಷ್ಟು ಓದಿ: ತಿರುಪತಿ: ಬಾಲಕನ ಮೇಲೆ ಚಿರತೆ ದಾಳಿ ನಡೆಸಿದ ಒಂದು ತಿಂಗಳ ಬಳಿಕ ಅಲಿಪಿರಿ-ತಿರುಮಲ ಕಾಲು ಹಾದಿಯಲ್ಲಿ ಪ್ರತ್ಯಕ್ಷವಾದ ಕರಡಿ

ಪಾದಚಾರಿ ಮಾರ್ಗದ ಸಮೀಪ ನಾಲ್ಕು ಚಿರತೆಗಳನ್ನು ಸೆರೆ ಹಿಡಿದ ಅರಣ್ಯಾಧಿಕಾರಿಗಳು ನೆಮ್ಮದಿಯ ನಿಟ್ಟುಸಿರು ಬಿಟ್ಟ ಕೆಲವೇ ದಿನಗಳಲ್ಲಿ ಕಾಡು ಬೆಕ್ಕು ಪ್ರತ್ಯಕ್ಷವಾಗಿತ್ತು.

ಆಗಸ್ಟ್ 11 ರಂದು 6 ವರ್ಷದ ಬಾಲಕಿ ಲಕ್ಷಿತಾಳನ್ನು ಚಿರತೆ ಹತ್ಯೆ ಮಾಡಿತ್ತು ಮತ್ತು ಜೂನ್‌ನಲ್ಲಿ ಚಿರತೆ ಮರಿಯಿಂದ 3 ವರ್ಷದ ಇನ್ನೊಂದು ಬಾಲಕ ಗಾಯಗೊಂಡಿದ್ದ.

ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಕಾರ್ಯನಿರ್ವಹಣಾಧಿಕಾರಿ ಎ.ವಿ.ಧರ್ಮಾ ರೆಡ್ಡಿ ಅವರು ಭಕ್ತರ ಆತಂಕವನ್ನು ದೂರ ಮಾಡಿದ್ದು, ಅರಣ್ಯ ಇಲಾಖೆ ಮತ್ತು ಟಿಟಿಡಿ ಸಿಬ್ಬಂದಿ ಕಟ್ಟೆಚ್ಚರ ವಹಿಸಿದ್ದಾರೆ. ಯಾತ್ರಾರ್ಥಿಗಳ ರಕ್ಷಣೆಗಾಗಿ ಮರದ ಕೋಲುಗಳನ್ನು ಸಹ ನೀಡಲಾಗುವುದು ಎಂದು ಹೇಳಿದ್ದರು.

ನಾವು 350 ಕ್ಕೂ ಹೆಚ್ಚು ಟ್ರ್ಯಾಪ್ ಕ್ಯಾಮೆರಾಗಳೊಂದಿಗೆ ಕಾಡು ಪ್ರಾಣಿಗಳ ಚಲನವಲನವನ್ನು ಮೇಲ್ವಿಚಾರಣೆ ಮಾಡುತ್ತಿದ್ದೇವೆ. ಆದ್ದರಿಂದ ಗಾಬರಿಯಾಗುವ ಅಗತ್ಯವಿಲ್ಲ ಎಂದು ಅವರು ಹೇಳಿದ್ದರು.

ಟ್ರ್ಯಾಪ್ ಕ್ಯಾಮೆರಾ ಸ್ಪಾಟಿಂಗ್‌ಗಳು ಪಾದಚಾರಿ ಮಾರ್ಗಗಳ ಬಳಿ ಕಾಡು ಪ್ರಾಣಿಗಳ ಸಂಖ್ಯೆಯನ್ನು ಎಣಿಕೆ ಮಾಡಲು ಸಹಾಯ ಮಾಡುತ್ತದೆ. ಅರಣ್ಯ ಅಧಿಕಾರಿಗಳು ಇತ್ತೀಚೆಗೆ ಸಿಕ್ಕಿಬಿದ್ದ ಎರಡು ಚಿರತೆಗಳ ಪ್ರಯೋಗಾಲಯದ ವರದಿಗಳನ್ನು ನಿರೀಕ್ಷಿಸುತ್ತಿದ್ದಾರೆ, ಅದರಲ್ಲಿ ಒಂದು ಲಕ್ಷಿತಾಳನ್ನು ಕೊಂದಿದೆಯೇ ಎಂದು ನಿರ್ಣಯಿಸಲು ವರದಿ ಬಂದ ನಂತರ ಅವುಗಳನ್ನು ಮೃಗಾಲಯದಲ್ಲಿ ಉಳಿಸಿಕೊಳ್ಳಬೇಕೆ ಅಥವಾ ಕಾಡಿಗೆ ಬಿಡಬೇಕೆ ಎಂಬುದನ್ನು ಅರಣ್ಯ ಇಲಾಖೆ ತೀರ್ಮಾನಿಸಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ