ತಿರುಪತಿಯ ಪ್ರಸಾದದಲ್ಲಿ ಹುಳುಗಳು ಪತ್ತೆ, ಭಕ್ತರ ಆರೋಪ

ತಿರುಪತಿ ಲಡ್ಡುಗಳಲ್ಲಿ ಪ್ರಾಣಿಗಳ ಕೊಬ್ಬು ಪತ್ತೆಯಾಗಿದೆ ಎನ್ನುವ ಆರೋಪದ ಹಿಂದೆಯೇ ಮತ್ತೊಂದು ಆರೋಪ ಕೇಳಿಬಂದಿದೆ. ತಿರುಪತಿಯ ಪ್ರಸಾದದಲ್ಲಿ ಹುಳುಗಳು ಸಿಕ್ಕಿವೆ ಎಂದು ಭಕ್ತರು ಆರೋಪಿಸಿದ್ದಾರೆ. ದೇವಾಲಯವನ್ನು ನೋಡಿಕೊಳ್ಳುವ ಟ್ರಸ್ಟ್ ತಿರುಮಲ ತಿರುಪತಿ ದೇವಸ್ಥಾನಮ್ (ಟಿಟಿಡಿ) ಈ ಆರೋಪವನ್ನು ತಳ್ಳಿಹಾಕಿದೆ. ಇದು ಸ್ವೀಕಾರಾರ್ಹವಲ್ಲ ಮತ್ತು ಟಿಟಿಡಿ ಅಧಿಕಾರಿಗಳ ನಿರ್ಲಕ್ಷ್ಯ ಎದ್ದು ತೋರುತ್ತಿದೆ ಎಂದು ಭಕ್ತರೊಬ್ಬರು ಹೇಳಿದ್ದಾರೆ. ಇದಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕೆಂದು ಆಗ್ರಹಿಸುತ್ತೇವೆಂದು ಹೇಳಿದ್ದಾರೆ.

ತಿರುಪತಿಯ ಪ್ರಸಾದದಲ್ಲಿ ಹುಳುಗಳು ಪತ್ತೆ, ಭಕ್ತರ ಆರೋಪ
ಪ್ರಸಾದImage Credit source: India Today
Follow us
|

Updated on: Oct 06, 2024 | 9:48 AM

ತಿರುಪತಿ ಲಡ್ಡುಗಳಲ್ಲಿ ಪ್ರಾಣಿಗಳ ಕೊಬ್ಬು ಪತ್ತೆಯಾಗಿದೆ ಎನ್ನುವ ಆರೋಪದ ಹಿಂದೆಯೇ ಮತ್ತೊಂದು ಆರೋಪ ಕೇಳಿಬಂದಿದೆ. ತಿರುಪತಿಯ ಪ್ರಸಾದದಲ್ಲಿ ಹುಳುಗಳು ಸಿಕ್ಕಿವೆ ಎಂದು ಭಕ್ತರು ಆರೋಪಿಸಿದ್ದಾರೆ. ದೇವಾಲಯವನ್ನು ನೋಡಿಕೊಳ್ಳುವ ಟ್ರಸ್ಟ್ ತಿರುಮಲ ತಿರುಪತಿ ದೇವಸ್ಥಾನಮ್ (ಟಿಟಿಡಿ) ಈ ಆರೋಪವನ್ನು ತಳ್ಳಿಹಾಕಿದೆ. ಇದು ಸ್ವೀಕಾರಾರ್ಹವಲ್ಲ ಮತ್ತು ಟಿಟಿಡಿ ಅಧಿಕಾರಿಗಳ ನಿರ್ಲಕ್ಷ್ಯ ಎದ್ದು ತೋರುತ್ತಿದೆ ಎಂದು ಭಕ್ತರೊಬ್ಬರು ಹೇಳಿದ್ದಾರೆ. ಇದಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕೆಂದು ಆಗ್ರಹಿಸುತ್ತೇವೆಂದು ಹೇಳಿದ್ದಾರೆ.

ಭಕ್ತರೊಬ್ಬರು ಮಾತನಾಡಿ, ನಾನು ವಾರಂಗಲ್​ನಿಂದ ತಿಮ್ಮಪ್ಪನ ದರ್ಶನಕ್ಕೆಂದು ತೆರಳಿದ್ದೆ, ಮೊಸರನ್ನ ಊಟ ಮಾಡುವ ಸಮಯದಲ್ಲಿ ಊಟದಲ್ಲಿ ಹುಳು ಸಿಕ್ಕಿತ್ತು. ಈ ವಿಚಾರವನ್ನು ಸಿಬ್ಬಂದಿಗೆ ತಿಳಿಸಿದೆ ಆದರೆ ಅವರ ಪ್ರತಿಕ್ರಿಯೆ ಆಘಾತಕಾರಿಯಾಗಿತ್ತು,ಇದು ಕೆಲವೊಮ್ಮೆ ಸಂಭವಿಸುತ್ತದೆ. ಸರ್ಕಾರ ಬದಲಾದರೂ ಈ ಸಮಸ್ಯೆಗಳು ಹಾಗೆಯೇ ಉಳಿದಿವೆ ಎಂದು ಉತ್ತರ ಕೊಟ್ಟಿದ್ದರು.

ವಿಷಯ ತಿಳಿದ ನಂತರ ದೇವಾಲಯದ ಸಿಬ್ಬಂದಿ ತಮ್ಮನ್ನು ನಿಂದಿಸಲು ಮತ್ತು ಬೆದರಿಸಲು ಪ್ರಯತ್ನಿಸಿದರು ಎಂದು ಭಕ್ತ ಆರೋಪಿಸಿದ್ದಾರೆ. ಸರ್ಕಾರವು ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು. ನಾವು ಊಟ ಮಾಡುವಾಗ ಮಧ್ಯಾಹ್ನ 1.30 ರ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ಚಂದು ಸೇರಿಸಲಾಗಿದೆ.

ತಿರುಪತಿ ಲಡ್ಡು ವಿವಾದದ ಬಗ್ಗೆ ಹೊಸದಾಗಿ ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಸಿಬಿಐ, ರಾಜ್ಯ ಪೊಲೀಸ್ ಮತ್ತು ಎಫ್‌ಎಸ್‌ಎಸ್‌ಎಐ ಅಧಿಕಾರಿಗಳನ್ನು ಒಳಗೊಂಡಿರುವ ಹೊಸ ಐದು-ಸದಸ್ಯರ ಸ್ವತಂತ್ರ ಎಸ್‌ಐಟಿಯನ್ನು ರಚಿಸಲು ಸೂಚಿಸಿದೆ. ನ್ಯಾಯಮೂರ್ತಿ ಬಿಆರ್ ಗವಾಯಿ ಮತ್ತು ನ್ಯಾಯಮೂರ್ತಿ ಕೆವಿ ವಿಶ್ವನಾಥನ್ ಅವರ ಪೀಠವು ಈ ಪ್ರಕರಣದ ವಿಚಾರಣೆ ನಡೆಸುತ್ತಿದ್ದಾರೆ.

ಮತ್ತಷ್ಟು ಓದಿ: ತಿರುಪತಿ ಲಡ್ಡು ವಿವಾದ: ಹೊಸ ತನಿಖೆಗೆ ಸುಪ್ರೀಂಕೋರ್ಟ್​ ಆದೇಶ, 5 ಸದಸ್ಯರ ಸ್ವತಂತ್ರ ಎಸ್​ಐಟಿ ರಚನೆ

ಆಂಧ್ರಪ್ರದೇಶದ ತಿರುಮಲದಲ್ಲಿರುವ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಲಡ್ಡುಗಳನ್ನು ತಯಾರಿಸುವಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂಬ ಆರೋಪದ ಕುರಿತು ನ್ಯಾಯಾಲಯದ ಮೇಲ್ವಿಚಾರಣೆಯ ತನಿಖೆಯನ್ನು ಕೋರಿ ಸಲ್ಲಿಸಲಾದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿತು.

ಕೇಂದ್ರದ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಸುಪ್ರೀಂ ಕೋರ್ಟ್‌ಗೆ ಹೇಳಿಕೆ ನೀಡಿದ್ದು, ಎಸ್‌ಐಟಿಯ ಮೇಲೆ ಕೇಂದ್ರದ ಹಿರಿಯ ಅಧಿಕಾರಿ ನಿಗಾ ವಹಿಸಬೇಕು, ಇದರಿಂದ ಜನರಲ್ಲಿ ಆತ್ಮವಿಶ್ವಾಸ ಹೆಚ್ಚುತ್ತದೆ ಎಂದು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ