AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಂದ್ರಬಾಬು ನಾಯ್ಡು ಸುಳ್ಳು ಹೇಳಿಕೆಯಿಂದ ತಿರುಪತಿ ಪಾವಿತ್ರ್ಯತೆಗೆ ಹಾನಿಯಾಗಿದೆ; ಜಗನ್ ರೆಡ್ಡಿ ಆರೋಪ

ತಿರುಪತಿ ಲಡ್ಡು ವಿವಾದಕ್ಕೆ ಸಂಬಂಧಿಸಿದಂತೆ ಸುಳ್ಳು ಸುದ್ದಿ ಹಬ್ಬಿಸುತ್ತಿರುವ ಸಿಎಂ ಚಂದ್ರಬಾಬು ನಾಯ್ಡು ಅವರಿಗೆ ನಾಚಿಕೆಯಾಗಬೇಕು, ಈ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುವ ಮೂಲಕ ತಿರುಪತಿ ದೇವಸ್ಥಾನದ ಪಾವಿತ್ರ್ಯತೆಗೆ ಹಾನಿ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಹೇಳಿದ್ದಾರೆ.

ಚಂದ್ರಬಾಬು ನಾಯ್ಡು ಸುಳ್ಳು ಹೇಳಿಕೆಯಿಂದ ತಿರುಪತಿ ಪಾವಿತ್ರ್ಯತೆಗೆ ಹಾನಿಯಾಗಿದೆ; ಜಗನ್ ರೆಡ್ಡಿ ಆರೋಪ
ಜಗನ್ ಮೋಹನ್ ರೆಡ್ಡಿ
ಸುಷ್ಮಾ ಚಕ್ರೆ
|

Updated on: Oct 04, 2024 | 5:32 PM

Share

ತಿರುಮಲ: ತಿರುಪತಿ ಲಡ್ಡು ಪ್ರಸಾದ ವಿವಾದಕ್ಕೆ ಸಂಬಂಧಿಸಿದಂತೆ ಸಿಎಂ ಚಂದ್ರಬಾಬು ನಾಯ್ಡು ಅವರನ್ನು ಟೀಕಿಸಿರುವ ವೈಎಸ್‌ಆರ್‌ಸಿಪಿ ಮುಖ್ಯಸ್ಥ ಹಾಗೂ ಮಾಜಿ ಸಿಎಂ ವೈಎಸ್‌ ಜಗನ್‌ ಮೋಹನ್‌ ರೆಡ್ಡಿ, ಚಂದ್ರಬಾಬು ನಾಯ್ಡು ಸುಳ್ಳು ಪ್ರಚಾರ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ರಾಜಕೀಯ ಲಾಭಕ್ಕಾಗಿ ಧಾರ್ಮಿಕ ವಿಷಯಗಳನ್ನು ಬಳಸುವುದನ್ನು ತಪ್ಪಿಸುವ ಅಗತ್ಯವನ್ನು ಒತ್ತಿಹೇಳುವ ಅಭಿಪ್ರಾಯವನ್ನು ಸುಪ್ರೀಂ ಕೋರ್ಟ್ ಬೆಂಬಲಿಸಿದೆ ಎಂದು ಅವರು ಹೇಳಿದ್ದಾರೆ.

ಹೊಸ ವಿವಾದವನ್ನು ಹುಟ್ಟುಹಾಕಿರುವ ವೈಎಸ್‌ಆರ್‌ಸಿಪಿ ಮುಖ್ಯಸ್ಥ ವೈಎಸ್ ಜಗನ್ ಮೋಹನ್ ರೆಡ್ಡಿ ಇಂದು ತಿರುಪತಿ ಲಡ್ಡು ಪ್ರಸಾದದ ವಿಚಾರದಲ್ಲಿ ಸಿಎಂ ಚಂದ್ರಬಾಬು ನಾಯ್ಡು ಸುಳ್ಳು ಸುಳ್ಳುಗಳನ್ನು ಹರಡುತ್ತಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ. ಅಂತಹ ಹೇಳಿಕೆಗಳು ಹಿಂದೂಗಳ ಭಾವನೆಗಳಿಗೆ ಧಕ್ಕೆ ತರುತ್ತವೆ ಎಂದು ಸುಪ್ರೀಂ ಕೋರ್ಟ್ ಸಹ ಒಪ್ಪಿಕೊಂಡಿದೆ ಎಂದಿದ್ದಾರೆ.

ಇದನ್ನೂ ಓದಿ: ತಿರುಪತಿ ಲಡ್ಡು ವಿವಾದ; ಸುಪ್ರೀಂ ಕೋರ್ಟ್ ವಿಚಾರಣೆ ನಾಳೆಗೆ ಮುಂದೂಡಿಕೆ

ತಿರುಪತಿ ಲಡ್ಡು ಮೇಲಿನ ಸುಪ್ರೀಂ ತೀರ್ಪಿನ ನಂತರ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸ್ವಲ್ಪವಾದರೂ ಪಶ್ಚಾತ್ತಾಪ ಪಡಬೇಕು. ಸಿಎಂ ಚಂದ್ರಬಾಬು ನಾಯ್ಡು ಮಾಡಿದ ಕಾಮೆಂಟ್‌ಗಳನ್ನು ಸುಪ್ರೀಂ ಕೋರ್ಟ್ ಎತ್ತಿ ತೋರಿಸುತ್ತದೆ. ಅವರು ಹಿಂದೂಗಳ ಭಾವನೆಗಳಿಗೆ ನೋವುಂಟು ಮಾಡಿದ್ದಾರೆ. ಕೋರ್ಟ್ ಧಾರ್ಮಿಕ ವಿಷಯಗಳನ್ನು ರಾಜಕೀಯ ನಾಟಕಕ್ಕೆ ಬಳಸದಂತೆ ಎಚ್ಚರಿಕೆ ನೀಡಿದೆ. ಚಂದ್ರಬಾಬು ನಾಯ್ಡು ಅವರ ಸುಳ್ಳು ಹೇಳಿಕೆಗಳಿಂದಾಗಿ ಟಿಟಿಡಿಯ ಪಾವಿತ್ರ್ಯಕ್ಕೆ ಧಕ್ಕೆಯಾಗಿದ್ದು, ಸಿಎಂ ಚಂದ್ರಬಾಬು ನಾಯ್ಡು ಅವರು ಟಿಟಿಡಿ ಮೇಲೆ ಆರೋಪ ಮಾಡಿದ್ದಕ್ಕಾಗಿ ಎಸ್‌ಐಟಿಯನ್ನು ಸಹ ಸ್ಥಗಿತಗೊಳಿಸಿದೆ ಎಂದಿದ್ದಾರೆ.

ಇದನ್ನೂ ಓದಿ: ತಿರುಪತಿ ಲಡ್ಡು ವಿವಾದ: ಹೊಸ ತನಿಖೆಗೆ ಸುಪ್ರೀಂಕೋರ್ಟ್​ ಆದೇಶ, 5 ಸದಸ್ಯರ ಸ್ವತಂತ್ರ ಎಸ್​ಐಟಿ ರಚನೆ

ಹಿಂದಿನ ವೈಎಸ್ ಜಗನ್ ಮೋಹನ್ ರೆಡ್ಡಿ ನೇತೃತ್ವದ ರಾಜ್ಯದಲ್ಲಿ ತಿರುಪತಿ ಲಡ್ಡುಗಳನ್ನು ತಯಾರಿಸಲು ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಈ ತಿಂಗಳ ಆರಂಭದಲ್ಲಿ ಹೇಳಿಕೆ ನೀಡಿದ್ದರು. ಇದು ಭಾರೀ ರಾಜಕೀಯ ಗದ್ದಲಕ್ಕೆ ಕಾರಣವಾಗಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ