AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ಬಗ್ಗೆ ರವಿಶಂಕರ್ ಗುರೂಜಿ, ಸದ್ಗುರು ಹೇಳಿದ್ದಿಷ್ಟು

ತಿರುಪತಿ ತಿಮ್ಮಪ್ಪನ ಲಡ್ಡು ಪ್ರಸಾದ ವಿವಾದ ತೀವ್ರಗೊಂಡಿದೆ. ಆಂಧ್ರ ದೇಗುಲಗಳಲ್ಲಿ ಪ್ರಸಾದ ಗುಣಮಟ್ಟ ಪರಿಶೀಲನೆ ನಡೆಯುತ್ತಿದೆ. ಈ ಬಗ್ಗೆ ರವಿಶಂಕರ್ ಗುರೂಜಿ ಮಾಡಿ, ಇದನ್ನು ಯಾರು ಮಾಡಿದ್ದಾರೋ ಅವರನ್ನು ಬಂಧಿಸಿ ಜೈಲಿಗೆ ಹಾಕಬೇಕು. ಆಹಾರದಲ್ಲಿ ಕಲಬೆರಕೆ ಮಾಡುವವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದಿದ್ದಾರೆ. ಅದೇ ರೀತಿಯಾಗಿ ಸದ್ಗುರು ಪ್ರತಿಕ್ರಿಯಿಸಿದ್ದು, ದೇವಾಲಯಗಳು ಭಕ್ತರಿಂದ ನಡೆಯಬೇಕೇ ಹೊರತು ಸರ್ಕಾರದ ಆಡಳಿತದಿಂದಲ್ಲ ಎಂದಿದ್ದಾರೆ. 

ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ಬಗ್ಗೆ ರವಿಶಂಕರ್ ಗುರೂಜಿ, ಸದ್ಗುರು ಹೇಳಿದ್ದಿಷ್ಟು
ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ಬಗ್ಗೆ ರವಿಶಂಕರ್ ಗುರೂಜಿ, ಸದ್ಗುರು ಹೇಳಿದ್ದಿಷ್ಟು
ಗಂಗಾಧರ​ ಬ. ಸಾಬೋಜಿ
|

Updated on: Sep 22, 2024 | 4:56 PM

Share

ದೆಹಲಿ, ಸೆಪ್ಟೆಂಬರ್ 22: ತಿರುಪತಿ ತಿಮ್ಮಪ್ಪನ ಲಡ್ಡು (Tirupati Laddu) ಭಕ್ತರ ಪಾಲಿಗೆ ಅಮೃತ. ಕಣ್ಣಿಗೊತ್ತಿಕೊಂಡು ತಿನ್ನುವ ಪ್ರಸಾದಕ್ಕೀಗ ವಿವಾದ ಸುತ್ತಿಕೊಂಡಿದೆ. ಆಂಧ್ರ ಸರ್ಕಾರ ಈ ಬಗ್ಗೆ ತನಿಖೆ ಕೂಡ ನಡೆಸುತ್ತಿದ್ದು, ಭಕ್ತರು ಆತಂಕಗೊಂಡಿದ್ದಾರೆ. ಈ ವಿವಾದದ ಬಗ್ಗೆ ಆರೋಪ ಪ್ರತ್ಯಾರೋಪಗಳು ನಡೆಯುತ್ತಿವೆ. ಹಲವು ಮಠಾಧೀಶರು ಕೂಡ ಖಂಡಿಸಿದ್ದಾರೆ. ಸದ್ಯ ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕ ರವಿಶಂಕರ್ ಗುರೂಜಿ ಹೇಳಿಕೆ ನೀಡಿದ್ದು, ಇದು ಕ್ಷಮಿಸಲು ಸಾಧ್ಯವಿಲ್ಲ ಮತ್ತು ಇದು ದುರಾಶೆಯ ಪರಮಾವಧಿ ಎಂದು ಕಿಡಿಕಾರಿದ್ದಾರೆ.

ಈ ಬಗ್ಗೆ ವಿಡಿಯೋ ಹಂಚಿಕೊಂಡಿರುವ ಅವರು, ಇದನ್ನು ಯಾರು ಮಾಡಿದ್ದಾರೋ ಅವರನ್ನು ಬಂಧಿಸಿ ಜೈಲಿಗೆ ಹಾಕಬೇಕು. ಆಹಾರದಲ್ಲಿ ಕಲಬೆರಕೆ ಮಾಡುವವರಿಗೆ ಕಠಿಣ ಶಿಕ್ಷೆಯಾಗಬೇಕು. ನಾವು ಆಧ್ಯಾತ್ಮಿಕ ನಾಯಕರ ಸಮಿತಿಯನ್ನು ಹೊಂದಿರಬೇಕು. ಪ್ರಮುಖ ನಿರ್ಧಾರಗಳು, ಮೇಲ್ವಿಚಾರಣೆ ಮತ್ತು ಎಲ್ಲವನ್ನೂ ಎಸ್​​ಜಿಪಿಸಿ (SGPC) ಯಂತಹ ಧಾರ್ಮಿಕ ಮಂಡಳಿಗಳು ಮಾಡಬೇಕು ಎಂದು ಹೇಳಿದ್ದಾರೆ.

ದೇವಾಲಯಗಳು ಭಕ್ತರಿಂದ ನಡೆಯಬೇಕೇ ಹೊರತು ಸರ್ಕಾರದ ಆಡಳಿತದಿಂದಲ್ಲ: ಸದ್ಗುರು 

ಇಶಾ ಫೌಂಡೇಶನ್‌ನ ಸಂಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್​ ಕೂಡ ಈ ಬಗ್ಗೆ ಟ್ವೀಟ್ ಮಾಡಿದ್ದು, ತಿರುಪತಿ ತಿಮ್ಮಪ್ಪನ ಪ್ರಸಾದ ಲಡ್ಡು ತಯಾರಿಸಲು ಬಳಸುವ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬಿನ ಅಂಶ ಪತ್ತೆಯಾಗಿರುವುದು ಭಕ್ತರಿಗೆ ಅಸಹ್ಯಕರವಾಗಿದೆ. ಹಾಗಾಗಿ ದೇವಾಲಯಗಳು ಭಕ್ತರಿಂದ ನಡೆಯಬೇಕೇ ಹೊರತು ಸರ್ಕಾರದ ಆಡಳಿತದಿಂದಲ್ಲ ಎಂದು ವಾಗ್ದಾಳಿ ಮಾಡಿದ್ದಾರೆ.

ಸದ್ಗುರು ಜಗ್ಗಿ ವಾಸುದೇವ್ ಟ್ವೀಟ್​

ಎಲ್ಲಿ ಭಕ್ತಿ ಇಲ್ಲವೋ ಅಲ್ಲಿ ಪಾವಿತ್ರ್ಯತೆ ಇರುವುದಿಲ್ಲ. ಹಿಂದೂ ದೇವಾಲಯಗಳನ್ನು ಧರ್ಮನಿಷ್ಠ ಹಿಂದೂಗಳು ನಡೆಸುತ್ತಾರೆ, ಸರ್ಕಾರದ ಆಡಳಿತದಿಂದ ಅಲ್ಲ ಎಂದು ಸದ್ಗುರು ಜಗ್ಗಿ ವಾಸುದೇವ್ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ