AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಪತಿ ಲಡ್ಡು ವಿವಾದ; ಆಂಧ್ರಪ್ರದೇಶ ಸರ್ಕಾರದಿಂದ ಎಸ್‌ಐಟಿ ರಚನೆ

ತಿರುಮಲ ತಿರುಪತಿ ಲಡ್ಡು ವಿವಾದ ಭುಗಿಲೆದ್ದಿದೆ. ತಿರುಪತಿ ವೆಂಕಟೇಶ್ವರ ಸ್ವಾಮಿಯ ಪ್ರಸಾದದ ರೂಪದಲ್ಲಿ ನೀಡಲಾಗುವ ಲಡ್ಡು ತಯಾರಿಸಲು ಬಳಸುವ ತುಪ್ಪದಲ್ಲಿ ಕಲಬೆರಕೆ ಉಂಟಾಗಿದೆ ಎಂಬುದನ್ನು ಲ್ಯಾಬ್ ವರದಿಯೇ ದೃಢಪಡಿಸಿದೆ. ಈ ಕುರಿತು ತನಿಖೆ ನಡೆಸಲು ಆಂಧ್ರಪ್ರದೇಶ ಸರ್ಕಾರ ಎಸ್‌ಐಟಿ ರಚಿಸಿದೆ.

ತಿರುಪತಿ ಲಡ್ಡು ವಿವಾದ; ಆಂಧ್ರಪ್ರದೇಶ ಸರ್ಕಾರದಿಂದ ಎಸ್‌ಐಟಿ ರಚನೆ
ಸಿಎಂ ಚಂದ್ರಬಾಬು ನಾಯ್ಡು- ಡಿಸಿಎಂ ಪವನ್ ಕಲ್ಯಾಣ್
Follow us
ಸುಷ್ಮಾ ಚಕ್ರೆ
|

Updated on: Sep 24, 2024 | 9:10 PM

ಹೈದರಾಬಾದ್: ತಿರುಪತಿ ದೇವಸ್ಥಾನದಲ್ಲಿ ನೀಡಲಾಗುವ ಪ್ರಸಾದವಾದ ಲಡ್ಡು ತಯಾರಿಕೆಗೆ ಕಳಪೆ ಗುಣಮಟ್ಟದ ತುಪ್ಪ ಬಳಸಲಾಗಿದೆ. ಆ ತುಪ್ಪದಲ್ಲಿ ಪ್ರಾಣಿಯ ಕೊಬ್ಬು, ಮೀನಿನ ಎಣ್ಣೆ ಮತ್ತಿತರ ಎಣ್ಣೆಗಳ ಅಂಶ ಇದ್ದುದು ಲ್ಯಾಬ್ ವರದಿಯಲ್ಲಿ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಆಂಧ್ರಪ್ರದೇಶ ಸರ್ಕಾರ ಎಸ್​ಐಟಿ ರಚನೆ ಮಾಡಿದೆ.

ಸೆಪ್ಟೆಂಬರ್ 22ರಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು ತುಪ್ಪದಲ್ಲಿನ ಕಲಬೆರಕೆ ಬಗ್ಗೆ ತನಿಖೆ ನಡೆಸಲು ಎಸ್‌ಐಟಿ ರಚಿಸುವುದಾಗಿ ಘೋಷಿಸಿದ್ದರು. ಅದರಂತೆ ಇಂದು ಎಸ್​ಐಟಿ ರಚನೆ ಮಾಡಲಾಗಿದೆ.

ಇದನ್ನೂ ಓದಿ: ಜನರ ನಂಬಿಕೆಯನ್ನು ರಾಜಕೀಯಕ್ಕೆ ಬಳಸುತ್ತಿದ್ದಾರೆ; ತಿರುಪತಿ ಲಡ್ಡು ಆರೋಪ ನಿರಾಕರಿಸಿದ ಜಗನ್ ಮೋಹನ್ ರೆಡ್ಡಿ

ತಿರುಪತಿ ಲಡ್ಡು ಪ್ರಸಾದದಲ್ಲಿ ಕಲಬೆರಕೆ ತುಪ್ಪದ ಬಗ್ಗೆ ತನಿಖೆ ನಡೆಸಲು ಆಂಧ್ರ ಪ್ರದೇಶ ಸರ್ಕಾರ ಗುಂಟೂರು ರೇಂಜ್ ಇನ್ಸ್‌ಪೆಕ್ಟರ್ ಜನರಲ್ ಸರ್ವಶ್ರೇಷ್ಠ ತ್ರಿಪಾಠಿ ಅವರನ್ನು ವಿಶೇಷ ತನಿಖಾ ತಂಡದ (ಎಸ್‌ಐಟಿ) ಮುಖ್ಯಸ್ಥರನ್ನಾಗಿ ನೇಮಿಸಿದೆ. ವಿಶಾಖ ವ್ಯಾಪ್ತಿಯ ಡಿಐಜಿ ಗೋಪಿನಾಥ್, ಕಡಪ ಎಸ್ಪಿ ಹರ್ಷವರ್ಧನ್ ಅವರಲ್ಲದೆ, ಡಿಎಸ್‌ಪಿಗಳು ಮತ್ತು ಇನ್‌ಸ್ಪೆಕ್ಟರ್‌ಗಳು ಸೇರಿದಂತೆ ಇತರ ಸಿಬ್ಬಂದಿಯನ್ನು ಎಸ್‌ಐಟಿ ಒಳಗೊಂಡಿರುತ್ತದೆ.

ತಿರುಪತಿ ಪ್ರಸಾದವನ್ನು ತಯಾರಿಸಲು ಪ್ರಾಣಿಗಳ ಕೊಬ್ಬನ್ನು ಹೊಂದಿರುವ ಕಲಬೆರಕೆ ತುಪ್ಪವನ್ನು ಖರೀದಿಸುವುದು ಮತ್ತು ಹಿಂದಿನ ಆಡಳಿತದಿಂದ ಅಧಿಕಾರದ ದುರುಪಯೋಗ ಸೇರಿದಂತೆ ಹಲವು ಸಮಸ್ಯೆಗಳ ಬಗ್ಗೆ ಎಸ್‌ಐಟಿ ತನಿಖೆ ನಡೆಸಲಿದೆ.

ಇದನ್ನೂ ಓದಿ: ತಿರುಪತಿ ಲಡ್ಡಿನಲ್ಲಿ ತಂಬಾಕು ಸಿಕ್ಕಿತ್ತು, ಭಕ್ತೆಯ ಹೇಳಿಕೆ ಕೇಳಿ ಬೆಚ್ಚಿಬಿದ್ದ ಜನ

ಇದರ ನಡುವೆ, ತಿರುಪತಿ ಲಡ್ಡು ಪ್ರಸಾದದಲ್ಲಿ ತಂಬಾಕು ಕಂಡುಬಂದಿದೆ ಎಂಬ ವದಂತಿಯನ್ನು ಟಿಟಿಡಿ ನಿರಾಕರಿಸಿದೆ. ಶ್ರೀವಾರಿ ಲಡ್ಡು ಪ್ರಸಾದದಲ್ಲಿ ತಂಬಾಕು ಪೌಚ್ ಪತ್ತೆಯಾಗಿದೆ ಎಂದು ಕೆಲವು ಭಕ್ತರು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಮಾಡಿರುವುದು ಸರಿಯಲ್ಲ ಎಂದು ಟಿಟಿಡಿ ಹೇಳಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬದ್ಧವೈರಿ ಪಾಕ್ ವಿರುದ್ಧ ಭಾರತ ವಾಲಿಬಾಲ್ ತಂಡಕ್ಕೆ ಸುಲಭ ಜಯ
ಬದ್ಧವೈರಿ ಪಾಕ್ ವಿರುದ್ಧ ಭಾರತ ವಾಲಿಬಾಲ್ ತಂಡಕ್ಕೆ ಸುಲಭ ಜಯ
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಒಪ್ಪಿಕೊಳ್ಳೋದು ನಮ್ಮ ಧರ್ಮ: ಸಾ.ರಾ. ಗೋವಿಂದು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಒಪ್ಪಿಕೊಳ್ಳೋದು ನಮ್ಮ ಧರ್ಮ: ಸಾ.ರಾ. ಗೋವಿಂದು
ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಹವಣಿಕೆಯಲ್ಲಿದೆ: ಅಶೋಕ
ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಹವಣಿಕೆಯಲ್ಲಿದೆ: ಅಶೋಕ
ಲಿಸ್ಟ್​ನಲ್ಲಿ ಹೆಸರಿಲ್ಲ, ಒಳಗೆ ಬಿಡಲ್ಲ ಅಂತ ಪೊಲೀಸ್ ಹೇಳಿದ್ದಕ್ಕೆ ಸಿಟ್ಟು
ಲಿಸ್ಟ್​ನಲ್ಲಿ ಹೆಸರಿಲ್ಲ, ಒಳಗೆ ಬಿಡಲ್ಲ ಅಂತ ಪೊಲೀಸ್ ಹೇಳಿದ್ದಕ್ಕೆ ಸಿಟ್ಟು
ಕೇರಳ ಮಾದರಿ ಹತ್ಯೆ ಕರ್ನಾಟಕದ ಕರಾವಳಿ ಪ್ರಾಂತ್ಯದಲ್ಲಿ ನಡೆಯುತ್ತಿವೆ: ಸಿಂಹ
ಕೇರಳ ಮಾದರಿ ಹತ್ಯೆ ಕರ್ನಾಟಕದ ಕರಾವಳಿ ಪ್ರಾಂತ್ಯದಲ್ಲಿ ನಡೆಯುತ್ತಿವೆ: ಸಿಂಹ
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್