ರಾಜಕೀಯದಿಂದ ದೇವರನ್ನು ದೂರವಿಡಿ: ಸುಪ್ರೀಂಕೋರ್ಟ್​

ರಾಜಕೀಯದಿಂದ ದೇವರನ್ನು ದೂರವಿಡುವಂತೆ ಸುಪ್ರೀಂಕೋರ್ಟ್​ ಹೇಳಿದೆ. ತಿರುಮಲದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪ್ರಸಾದವಾಗಿ ನೀಡಲಾಗುವ ಲಡ್ಡುಗಳನ್ನು ತಯಾರಿಸಲು ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂಬ ಆರೋಪದ ಕುರಿತು ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ನಡೆಸಿತು.

ರಾಜಕೀಯದಿಂದ ದೇವರನ್ನು ದೂರವಿಡಿ: ಸುಪ್ರೀಂಕೋರ್ಟ್​
ಸುಪ್ರೀಂಕೋರ್ಟ್​
Image Credit source: Hindustan Times

Updated on: Sep 30, 2024 | 2:15 PM

ರಾಜಕೀಯದಿಂದ ದೇವರನ್ನು ದೂರವಿಡುವಂತೆ ಸುಪ್ರೀಂಕೋರ್ಟ್​ ಹೇಳಿದೆ. ತಿರುಮಲದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪ್ರಸಾದವಾಗಿ ನೀಡಲಾಗುವ ಲಡ್ಡುಗಳನ್ನು ತಯಾರಿಸಲು ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂಬ ಆರೋಪದ ಕುರಿತು ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ನಡೆಸಿತು.

ಕಲಬೆರಕೆ ತುಪ್ಪವನ್ನು ಪ್ರಸಾದಕ್ಕೆ ಬಳಸುತ್ತಾರೆಯೇ ಎಂದು ಸುಪ್ರೀಂ ಕೋರ್ಟ್ ಕೇಳಿದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಸರ್ಕಾರ ಉತ್ತರ ನೀಡಿದೆ. ಧಾರ್ಮಿಕ ಭಾವನೆಗಳಿಗೆ ಗೌರವ ನೀಡಬೇಕು, ತಕ್ಷಣ ಪತ್ರಿಕಾಗೋಷ್ಠಿ ನಡೆಸುವ  ಅಗತ್ಯ ಏನಿತ್ತು ಎಂದು ಸುಪ್ರೀಂ ಕೋರ್ಟ್ ಪ್ರಶ್ನಿಸಿತು.

ತಿರುಮಲ ತಿರುಪತಿ ದೇವಸ್ಥಾನದ (ಟಿಟಿಡಿ) ಪ್ರಸಾದ ಲಡ್ಡು ಕಲಬೆರಕೆ ಪ್ರಕರಣದ ತನಿಖೆ ಆರಂಭಿಸಲು ವಿಶೇಷ ತನಿಖಾ ತಂಡ (ಎಸ್‌ಐಟಿ) ಶನಿವಾರ ತಿರುಪತಿಗೆ ಭೇಟಿ ನೀಡಿತ್ತು. ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ತಿರುಪತಿಯ ಶ್ರೀ ವೆಂಕಟೇಶ್ವರ ದೇವಸ್ಥಾನದಲ್ಲಿ ನೀಡಲಾಗುತ್ತಿದ್ದ ಪ್ರಸಾದವಾದ ತಿರುಪತಿ ಲಡ್ಡುಗಳ ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬು ಸೇರಿದಂತೆ ಗುಣಮಟ್ಟವಿಲ್ಲದ ಪದಾರ್ಥಗಳನ್ನು ಬಳಸಲಾಗಿದೆ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹೇಳಿಕೆ ನೀಡಿದ ನಂತರ ತಿರುಪತಿ ಪ್ರಸಾದದ ಬಗ್ಗೆ ಗಲಾಟೆ ಪ್ರಾರಂಭವಾಯಿತು.

ಮತ್ತಷ್ಟು ಓದಿ: ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು ಬಳಕೆ, ಆಂಧ್ರ ಸರ್ಕಾರದಿಂದ ಎಸ್​ಐಟಿ ರಚನೆ

ಇದಕ್ಕೂ ಮುನ್ನ, ವೈಎಸ್‌ಆರ್‌ಸಿಪಿ ನಾಯಕ ಜಗನ್ ಮೋಹನ್ ರೆಡ್ಡಿ ಮಾತನಾಡಿ, ತಿರುಪತಿ ಲಡ್ಡು ಪ್ರಸಾದದ ಬಗ್ಗೆ ಸಿಎಂ ನಾಯ್ಡು ನೀಡಿರುವ ಹೇಳಿಕೆ ಶುದ್ಧ ಸುಳ್ಳು ಎಂದು ಹೇಳಿದ್ದಾರೆ. ತುಪ್ಪ ಖರೀದಿ ಇ-ಟೆಂಡರ್ ದಶಕಗಳಿಂದ ನಡೆಯುತ್ತಿರುವ ಸಾಮಾನ್ಯ ಪ್ರಕ್ರಿಯೆಯಾಗಿದೆ ಎಂದು ಹೇಳಿದರು.

ರಾಜ್ಯದಲ್ಲಿ ರಾಕ್ಷಸ ಆಳ್ವಿಕೆ ಮುಂದುವರಿದಿದೆ, ಮುಂಬರುವ ತಿರುಮಲ ದೇಗುಲಕ್ಕೆ ನನ್ನ ಭೇಟಿಗೆ ಅಡ್ಡಿಪಡಿಸಲು ಸರಕಾರ ಯತ್ನಿಸುತ್ತಿದೆ. ದೇವಾಲಯ ದರ್ಶನಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ ವೈಎಸ್‌ಆರ್‌ಸಿಪಿ ಮುಖಂಡರಿಗೆ ಪೊಲೀಸರು ನೋಟಿಸ್‌ ನೀಡಿದ್ದಾರೆ

ಆಂಧ್ರ ಸಿಎಂ ನಾಯ್ಡು ಅವರು ರಾಜಕೀಯ ಗಮನವನ್ನು ಬೇರೆಡೆ ಸೆಳೆಯಲು ಲಡ್ಡು ವಿಚಾರವನ್ನು ಪ್ರಸ್ತಾಪಿಸಿದ್ದಾರೆ ಎಂದು ಆರೋಪಿಸಿದರು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us