AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tirupati Temple: ತಿರುಪತಿ ತಿಮ್ಮಪ್ಪನಿಗೆ 9.2 ಕೋಟಿ ರೂ. ಆಸ್ತಿ ದಾನವಾಗಿ ನೀಡಿದ ವೃದ್ಧೆ

ದೇಣಿಗೆಯಾಗಿ ನೀಡಲಾಗಿರುವ 9.2 ಕೋಟಿ ರೂ. ಹಣವನ್ನು ತಿರುಪತಿ ತಿರುಮಲ ದೇವಸ್ಥಾನದ ಆಡಳಿತ ಮಂಡಳಿಯು ನಿರ್ಮಿಸುತ್ತಿರುವ ಮಕ್ಕಳ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಬಳಸಿಕೊಳ್ಳುವಂತೆ ಪಾರ್ವತಮ್ಮನವರ ಸಹೋದರಿ ರೇವತಿ ವಿಶ್ವನಾಥಂ ಟಿಟಿಡಿಗೆ ಮನವಿ ಮಾಡಿದ್ದಾರೆ.

Tirupati Temple: ತಿರುಪತಿ ತಿಮ್ಮಪ್ಪನಿಗೆ 9.2 ಕೋಟಿ ರೂ. ಆಸ್ತಿ ದಾನವಾಗಿ ನೀಡಿದ ವೃದ್ಧೆ
ತಿರುಪತಿ ದೇವಸ್ಥಾನಕ್ಕೆ 9.5 ಕೋಟಿ ರೂ ದೇಣಿಗೆ ನೀಡಿದ ಮಹಿಳೆ
TV9 Web
| Edited By: |

Updated on:Feb 17, 2022 | 8:35 PM

Share

ಚೆನ್ನೈ: ಭಾರತದ ಶ್ರೀಮಂತ ದೇವರೆಂದೇ ಖ್ಯಾತನಾಗಿರುವ ವೆಂಕಟೇಶ್ವರ ಸ್ವಾಮಿಗೆ (Lord Venkateshwara) ಪ್ರತಿ ವರ್ಷವೂ ಕೋಟ್ಯಂತರ ರೂ. ದೇಣಿಗೆ ಹರಿದುಬರುತ್ತದೆ. ಇದೀಗ ಚೆನ್ನೈನ ವೃದ್ಧೆಯೊಬ್ಬರು ತಿರುಪತಿ (Tirupati) ತಿಮ್ಮಪ್ಪನಿಗೆ 3.2 ಕೋಟಿ ರೂ. ನಗದು, 6 ಕೋಟಿ ರೂ. ಮೌಲ್ಯದ ಆಸ್ತಿ ಹಾಗೂ ತಮ್ಮ ಮನೆಯನ್ನು ದಾನ ಮಾಡಿದ್ದಾರೆ. ಮದುವೆಯಾಗದ ಹಿನ್ನೆಲೆಯಲ್ಲಿ ಡಾ. ಪಾರ್ವತಮ್ಮ ಅವರಿಗೆ ಯಾವುದೇ ಕುಟುಂಬಸ್ಥರಿಲ್ಲ. ಹೀಗಾಗಿ, ಅವರು ತಮ್ಮ ಆಸ್ತಿಯನ್ನು ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ದಾನ ಮಾಡಲು ಬಯಸಿದ್ದರು. ಅವರು ಇತ್ತೀಚೆಗೆ ಕೊನೆಯುಸಿರೆಳೆದಿದ್ದರಿಂದ ಅವರ ಸಹೋದರಿ ಪಾರ್ವತಮ್ಮನವರ ಆಸ್ತಿಯನ್ನು ಟಿಟಿಡಿಗೆ ನೀಡಿದ್ದಾರೆ.

ಪಾರ್ವತಮ್ಮ ಎಂಬ 76 ವರ್ಷದ ವೃದ್ಧೆ ತಿರುಮಲ ವೆಂಕಟೇಶ್ವರ ಸ್ವಾಮಿಯ ಭಕ್ತರಾಗಿದ್ದು, ಕೆಲವು ದಿನಗಳ ಹಿಂದೆ ಮರಣ ಹೊಂದಿದ್ದರು. ಅವರು ತಮ್ಮ ಆಸ್ತಿಯನ್ನು ಮಾರಣಾಂತಿಕ ಕಾಯಿಲೆಗಳಿಂದ ಬಳಲುತ್ತಿರುವ ಬಡವರಿಗೆ ಚಿಕಿತ್ಸೆ ನೀಡುವ ಗುರಿ ಹೊಂದಿರುವ ಎಸ್‌ವಿ ಪ್ರಾಣದಾನ ಟ್ರಸ್ಟ್‌ನ ಸಹಾಯದಿಂದ ಟ್ರಸ್ಟ್‌ನಿಂದ ಪೀಡಿಯಾಟ್ರಿಕ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಹಣವನ್ನು ದೇಣಿಗೆಯಾಗಿ ನೀಡಿದ್ದಾರೆ. ಆಕೆಯ ಸಾವಿನ ಬಳಿಕ ಆಕೆಯ ಸಹೋದರಿ ಡಾ. ರೇವತಿ ವಿಶ್ವನಾಥಂ ಅವರು ಪಾರ್ವತಮ್ಮನವರ ಆಸ್ತಿಯನ್ನು ಟಿಟಿಡಿ ಟ್ರಸ್ಟ್‌ಗೆ ಒಪ್ಪಿಸಿದ್ದಾರೆ.

ರೇವತಿ ವಿಶ್ವನಾಥಂ, ಅವರ ಪತಿ ಪಿ.ಎ ವಿಶ್ವನಾಥನ್ ಮತ್ತು ತಮ್ಮ ಸಹೋದರಿಯ ಉಯಿಲಿನ ನಿರ್ವಾಹಕ ವಿ. ಕೃಷ್ಣನ್ ಅವರು ಇಂದು ತಿರುಮಲ ದೇವಸ್ಥಾನದಲ್ಲಿ ಟಿಟಿಡಿ ಅಧ್ಯಕ್ಷ ವೈವಿ ಸುಬ್ಬಾ ರೆಡ್ಡಿ ಅವರಿಗೆ ಆಸ್ತಿಯ ದಾಖಲೆಗಳನ್ನು ಹಸ್ತಾಂತರಿಸಿದರು. ಇತ್ತೀಚೆಗೆ ನಿಧನರಾದ ಚೆನ್ನೈನ 76 ವರ್ಷದ ಭಕ್ತೆ ಪಾರ್ವತಮ್ಮ ತಿರುಪತಿಯ ವೆಂಕಟೇಶ್ವರನ ದೇಗುಲಕ್ಕೆ ಒಟ್ಟು 9.2 ಕೋಟಿ ರೂ. ದೇಣಿಗೆ ನೀಡಿದ್ದಾರೆ.

ದೇಣಿಗೆಯಾಗಿ ನೀಡಲಾಗಿರುವ 9.2 ಕೋಟಿ ರೂ. ಹಣವನ್ನು ತಿರುಪತಿ ತಿರುಮಲ ದೇವಸ್ಥಾನದ ಆಡಳಿತ ಮಂಡಳಿಯು ನಿರ್ಮಿಸುತ್ತಿರುವ ಮಕ್ಕಳ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಬಳಸಿಕೊಳ್ಳುವಂತೆ ಪಾರ್ವತಮ್ಮನವರ ಸಹೋದರಿ ರೇವತಿ ವಿಶ್ವನಾಥಂ ಟಿಟಿಡಿಗೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: TTD Online Ticket Booking: ತಿರುಪತಿ ದೇವಸ್ಥಾನದ ವಿಶೇಷ ದರ್ಶನಕ್ಕೆ ಇಂದಿನಿಂದ ಆನ್ಲೈನ್​ ಟಿಕೇಟ್​ ಬುಕಿಂಗ್​ ಆರಂಭ

Drinking Water: ಕುಡಿಯುವ ನೀರಿಗಾಗಿ ತಿಂಗಳಿಗೆ 1.5 ಲಕ್ಷ ಖರ್ಚು ಮಾಡ್ತಾರೆ ಈ ವ್ಯಕ್ತಿ; ಯಾಕೆ ಅಂತೀರಾ?

Published On - 8:33 pm, Thu, 17 February 22

ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ
ಟಿಕೆಟ್ ದರ ಹೆಚ್ಚಿಸಲು ಪ್ರಭಾಸ್, ಚಿರಂಜೀವಿ ಸಿನಿಮಾಗಳಿಗೆ ಸಿಕ್ತು ಅವಕಾಶ
ಟಿಕೆಟ್ ದರ ಹೆಚ್ಚಿಸಲು ಪ್ರಭಾಸ್, ಚಿರಂಜೀವಿ ಸಿನಿಮಾಗಳಿಗೆ ಸಿಕ್ತು ಅವಕಾಶ