AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ತಚಂದನ ಕಳ್ಳಸಾಗಣೆದಾರರ ಅಟ್ಟಹಾಸ: ಕಾರು ಹತ್ತಿಸಿ ಕಾನ್‌ಸ್ಟೆಬಲ್ ಹತ್ಯೆ

Red Sandal Smugglers Crime: ಕಾನ್‌ಸ್ಟೆಬಲ್ ಗಣೇಶ್ ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಸತ್ಯಸಾಯಿ ಜಿಲ್ಲೆ ಧರ್ಮಾವರಂ ನಿವಾಸಿ ಗಣೇಶ್ ತಿರುಪತಿ ರೆಡ್ ಸ್ಯಾಂಡಲ್ ಟಾಸ್ಕ್ ಫೋರ್ಸ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು.

ರಕ್ತಚಂದನ ಕಳ್ಳಸಾಗಣೆದಾರರ ಅಟ್ಟಹಾಸ: ಕಾರು ಹತ್ತಿಸಿ ಕಾನ್‌ಸ್ಟೆಬಲ್ ಹತ್ಯೆ
ರಕ್ತಚಂದನ ಕಳ್ಳಸಾಗಣೆದಾರರ ಅಟ್ಟಹಾಸ
Follow us
ಸಾಧು ಶ್ರೀನಾಥ್​
|

Updated on: Feb 06, 2024 | 10:02 AM

ಅನ್ನಮಯ್ಯ ಜಿಲ್ಲೆಯಲ್ಲಿ ರಕ್ತಚಂದನ ಕಳ್ಳಸಾಗಣೆದಾರರ (Smugglers ) ಆಟಾಟೋಪ ಮಿತಿಮೀರಿದೆ. ಕಳ್ಳಕಾಕರ ಅಟ್ಟಹಾಸಕ್ಕೆ ಟಾಸ್ಕ್ ಫೋರ್ಸ್ ಕಾನ್‌ಸ್ಟೆಬಲ್ ಬಲಿಯಾಗಿದ್ದಾರೆ. ಕೂಂಬಿಂಗ್ ನಡೆಸುತ್ತಿದ್ದ ರೆಡ್ ಸ್ಯಾಂಡಲ್ ಟಾಸ್ಕ್ ಫೋರ್ಸ್ ಸಿಬ್ಬಂದಿಯ (Tirupati Red Sandal Taskforce Police constable) ಮೇಲೆ ಕಳ್ಳಸಾಗಣೆದಾರರ ಕಾರು (Car) ದಾಳಿ ನಡೆಸಿದ್ದು, ಕಾನ್‌ಸ್ಟೆಬಲ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಕೆ.ವಿ. ಪಲ್ಲಿ ಮಂಡಲದ ಗುಂಡ್ರೆವಾರಿಪಲ್ಲಿ ಕ್ರಾಸ್‌ನಲ್ಲಿ ರಸ್ತೆಯಲ್ಲಿ ವೇಗವಾಗಿ ಬಂದ ಕಳ್ಳಸಾಗಣೆದಾರರ ಕಾರು ಟಾಸ್ಕ್ ಫೋರ್ಸ್ ಪೊಲೀಸರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ನಡೆದಿದೆ. ಸಾಣಿಪಾಯಿ ಅರಣ್ಯ ಪ್ರದೇಶದಲ್ಲಿ ಶ್ರೀಗಂಧದ ಕಳ್ಳಸಾಗಣೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ತಿರುಪತಿಯಿಂದ ಬಂದಿದ್ದ ಟ್ರಾನ್ಸ್ ಫೋರ್ಸ್ ತಂಡ ಶ್ರೀಗಂಧ ಕಳ್ಳರನ್ನು ಹಿಡಿಯಲು ಯತ್ನಿಸಿತು. ಟಾಸ್ಕ್ ಫೋರ್ಸ್ ಪೊಲೀಸರು ಕೂಂಬಿಂಗ್ ನಡೆಸುತ್ತಿರುವುದನ್ನು ಅರಿತ ಕಳ್ಳಸಾಗಾಣಿಕೆದಾರರು ತಪ್ಪಿಸಿಕೊಳ್ಳಲು ಪ್ರಯತ್ನಿಸಿದರು. ಆ ವೇಳೆ ಕಾರಿನಲ್ಲಿ ಪರಾರಿಯಾಗುವಾಗ ಪೊಲೀಸರ ಮೇಲೆ ಕಾರು ಹತ್ತಿಸಿದ್ದಾರೆ.

ಮತ್ತಷ್ಟು ಓದಿ: ಕಾಂಗ್ರೆಸ್ ಸಂಸದರ ‘ಪ್ರತ್ಯೇಕ ರಾಷ್ಟ್ರ’ ಹೇಳಿಕೆ; ಸೋನಿಯಾ ಗಾಂಧಿ ಕ್ಷಮೆಯಾಚಿಸಲಿ: ಪ್ರಲ್ಹಾದ್‌ ಜೋಶಿ

ವೇಗವಾಗಿ ಬಂದ ಸ್ಮಗ್ಲರ್ ಕಾರಿಗೆ ಡಿಕ್ಕಿ ಹೊಡೆದು ಕಾನ್ ಸ್ಟೇಬಲ್ ಗಣೇಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಉಳಿದ ಪೊಲೀಸರು ಕಳ್ಳಸಾಗಣೆದಾರರ ಕಾರನ್ನು ಹಿಂಬಾಲಿಸಿ ಕಳ್ಳಕಾಕರನ್ನು ಹಿಡಿದಿದ್ದಾರೆ. ಆದರೆ ಮೂವರು ಸ್ಮಗ್ಲರ್‌ಗಳು ಕಾರಿನಿಂದ ಇಳಿದು ಓಡಿಹೋದರು. ಸ್ಮಗ್ಲರ್‌ಗಳ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಕಾರಿನಲ್ಲಿದ್ದ 7 ರಕ್ತಚಂದನದ ದಿಮ್ಮಿಗಳನ್ನು ವಶಪಡಿಸಿಕೊಂಡಿದ್ದಾರೆ. ಕಾರಿನಲ್ಲಿದ್ದ ಮತ್ತಿಬ್ಬರು ಕಳ್ಳಸಾಗಣೆದಾರರನ್ನು ಟಾಸ್ಕ್ ಫೋರ್ಸ್ ಪೊಲೀಸರು ಬಂಧಿಸಿದ್ದಾರೆ.

ಘಟನೆಯಲ್ಲಿ ಗಣೇಶ್ ಎಂಬ 30 ವರ್ಷದ ಕಾನ್‌ಸ್ಟೆಬಲ್ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಕಾನ್‌ಸ್ಟೆಬಲ್ ಗಣೇಶ್ ಅವರ ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಸತ್ಯಸಾಯಿ ಜಿಲ್ಲೆ ಧರ್ಮಾವರಂ ನಿವಾಸಿ ಗಣೇಶ್ ತಿರುಪತಿ ರೆಡ್ ಸ್ಯಾಂಡಲ್ ಟಾಸ್ಕ್ ಫೋರ್ಸ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಸ್ಥಳಕ್ಕಾಗಮಿಸಿದ ಪೊಲೀಸರು ಪರಾರಿಯಾದ ಕಳ್ಳಸಾಗಾಣಿಕೆದಾರರಿಗಾಗಿ ಬಲೆ ಬೀಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
‘ನನ್ನ ಗಂಡನ ಪರ ನಿಲ್ಲುತ್ತೇನೆ’; ಮನು ಪತ್ನಿ ಅಚಲ ನಿರ್ಧಾರ
‘ನನ್ನ ಗಂಡನ ಪರ ನಿಲ್ಲುತ್ತೇನೆ’; ಮನು ಪತ್ನಿ ಅಚಲ ನಿರ್ಧಾರ
ತಾಳಿ ಕಟ್ಟುವಷ್ಟರಲ್ಲಿ ಲವರ್ ಕಾಲ್: ಮದುವೆ ರದ್ದು ಬಗ್ಗೆ ಸಂಬಂಧಿಕರೇನಂದ್ರು?
ತಾಳಿ ಕಟ್ಟುವಷ್ಟರಲ್ಲಿ ಲವರ್ ಕಾಲ್: ಮದುವೆ ರದ್ದು ಬಗ್ಗೆ ಸಂಬಂಧಿಕರೇನಂದ್ರು?
‘ಮೌನ ಹಾಗೂ ನಗು’; ಉತ್ತರಿಸಲು ಹೊಸ ತಂತ್ರ ಕಂಡುಕೊಂಡ ಪವಿತ್ರಾ ಗೌಡ
‘ಮೌನ ಹಾಗೂ ನಗು’; ಉತ್ತರಿಸಲು ಹೊಸ ತಂತ್ರ ಕಂಡುಕೊಂಡ ಪವಿತ್ರಾ ಗೌಡ
ತಾಳಿ‌ ಕಟ್ಟುವ ಸಮಯದಲ್ಲಿ ಹಸೆಮಣೆಯಿಂದ ಹೊರ ನಡೆದ ವಧು
ತಾಳಿ‌ ಕಟ್ಟುವ ಸಮಯದಲ್ಲಿ ಹಸೆಮಣೆಯಿಂದ ಹೊರ ನಡೆದ ವಧು
ಶೋಲೆಯ ರಾಮಗಢ ಇನ್ನಿಲ್ಲ, ಶುರುವಾಯ್ತು ಹೆಸರು ಬದಲಾವಣೆ
ಶೋಲೆಯ ರಾಮಗಢ ಇನ್ನಿಲ್ಲ, ಶುರುವಾಯ್ತು ಹೆಸರು ಬದಲಾವಣೆ