AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ತಚಂದನ ಕಳ್ಳಸಾಗಣೆದಾರರ ಅಟ್ಟಹಾಸ: ಕಾರು ಹತ್ತಿಸಿ ಕಾನ್‌ಸ್ಟೆಬಲ್ ಹತ್ಯೆ

Red Sandal Smugglers Crime: ಕಾನ್‌ಸ್ಟೆಬಲ್ ಗಣೇಶ್ ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಸತ್ಯಸಾಯಿ ಜಿಲ್ಲೆ ಧರ್ಮಾವರಂ ನಿವಾಸಿ ಗಣೇಶ್ ತಿರುಪತಿ ರೆಡ್ ಸ್ಯಾಂಡಲ್ ಟಾಸ್ಕ್ ಫೋರ್ಸ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು.

ರಕ್ತಚಂದನ ಕಳ್ಳಸಾಗಣೆದಾರರ ಅಟ್ಟಹಾಸ: ಕಾರು ಹತ್ತಿಸಿ ಕಾನ್‌ಸ್ಟೆಬಲ್ ಹತ್ಯೆ
ರಕ್ತಚಂದನ ಕಳ್ಳಸಾಗಣೆದಾರರ ಅಟ್ಟಹಾಸ
ಸಾಧು ಶ್ರೀನಾಥ್​
|

Updated on: Feb 06, 2024 | 10:02 AM

Share

ಅನ್ನಮಯ್ಯ ಜಿಲ್ಲೆಯಲ್ಲಿ ರಕ್ತಚಂದನ ಕಳ್ಳಸಾಗಣೆದಾರರ (Smugglers ) ಆಟಾಟೋಪ ಮಿತಿಮೀರಿದೆ. ಕಳ್ಳಕಾಕರ ಅಟ್ಟಹಾಸಕ್ಕೆ ಟಾಸ್ಕ್ ಫೋರ್ಸ್ ಕಾನ್‌ಸ್ಟೆಬಲ್ ಬಲಿಯಾಗಿದ್ದಾರೆ. ಕೂಂಬಿಂಗ್ ನಡೆಸುತ್ತಿದ್ದ ರೆಡ್ ಸ್ಯಾಂಡಲ್ ಟಾಸ್ಕ್ ಫೋರ್ಸ್ ಸಿಬ್ಬಂದಿಯ (Tirupati Red Sandal Taskforce Police constable) ಮೇಲೆ ಕಳ್ಳಸಾಗಣೆದಾರರ ಕಾರು (Car) ದಾಳಿ ನಡೆಸಿದ್ದು, ಕಾನ್‌ಸ್ಟೆಬಲ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಕೆ.ವಿ. ಪಲ್ಲಿ ಮಂಡಲದ ಗುಂಡ್ರೆವಾರಿಪಲ್ಲಿ ಕ್ರಾಸ್‌ನಲ್ಲಿ ರಸ್ತೆಯಲ್ಲಿ ವೇಗವಾಗಿ ಬಂದ ಕಳ್ಳಸಾಗಣೆದಾರರ ಕಾರು ಟಾಸ್ಕ್ ಫೋರ್ಸ್ ಪೊಲೀಸರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ನಡೆದಿದೆ. ಸಾಣಿಪಾಯಿ ಅರಣ್ಯ ಪ್ರದೇಶದಲ್ಲಿ ಶ್ರೀಗಂಧದ ಕಳ್ಳಸಾಗಣೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ತಿರುಪತಿಯಿಂದ ಬಂದಿದ್ದ ಟ್ರಾನ್ಸ್ ಫೋರ್ಸ್ ತಂಡ ಶ್ರೀಗಂಧ ಕಳ್ಳರನ್ನು ಹಿಡಿಯಲು ಯತ್ನಿಸಿತು. ಟಾಸ್ಕ್ ಫೋರ್ಸ್ ಪೊಲೀಸರು ಕೂಂಬಿಂಗ್ ನಡೆಸುತ್ತಿರುವುದನ್ನು ಅರಿತ ಕಳ್ಳಸಾಗಾಣಿಕೆದಾರರು ತಪ್ಪಿಸಿಕೊಳ್ಳಲು ಪ್ರಯತ್ನಿಸಿದರು. ಆ ವೇಳೆ ಕಾರಿನಲ್ಲಿ ಪರಾರಿಯಾಗುವಾಗ ಪೊಲೀಸರ ಮೇಲೆ ಕಾರು ಹತ್ತಿಸಿದ್ದಾರೆ.

ಮತ್ತಷ್ಟು ಓದಿ: ಕಾಂಗ್ರೆಸ್ ಸಂಸದರ ‘ಪ್ರತ್ಯೇಕ ರಾಷ್ಟ್ರ’ ಹೇಳಿಕೆ; ಸೋನಿಯಾ ಗಾಂಧಿ ಕ್ಷಮೆಯಾಚಿಸಲಿ: ಪ್ರಲ್ಹಾದ್‌ ಜೋಶಿ

ವೇಗವಾಗಿ ಬಂದ ಸ್ಮಗ್ಲರ್ ಕಾರಿಗೆ ಡಿಕ್ಕಿ ಹೊಡೆದು ಕಾನ್ ಸ್ಟೇಬಲ್ ಗಣೇಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಉಳಿದ ಪೊಲೀಸರು ಕಳ್ಳಸಾಗಣೆದಾರರ ಕಾರನ್ನು ಹಿಂಬಾಲಿಸಿ ಕಳ್ಳಕಾಕರನ್ನು ಹಿಡಿದಿದ್ದಾರೆ. ಆದರೆ ಮೂವರು ಸ್ಮಗ್ಲರ್‌ಗಳು ಕಾರಿನಿಂದ ಇಳಿದು ಓಡಿಹೋದರು. ಸ್ಮಗ್ಲರ್‌ಗಳ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಕಾರಿನಲ್ಲಿದ್ದ 7 ರಕ್ತಚಂದನದ ದಿಮ್ಮಿಗಳನ್ನು ವಶಪಡಿಸಿಕೊಂಡಿದ್ದಾರೆ. ಕಾರಿನಲ್ಲಿದ್ದ ಮತ್ತಿಬ್ಬರು ಕಳ್ಳಸಾಗಣೆದಾರರನ್ನು ಟಾಸ್ಕ್ ಫೋರ್ಸ್ ಪೊಲೀಸರು ಬಂಧಿಸಿದ್ದಾರೆ.

ಘಟನೆಯಲ್ಲಿ ಗಣೇಶ್ ಎಂಬ 30 ವರ್ಷದ ಕಾನ್‌ಸ್ಟೆಬಲ್ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಕಾನ್‌ಸ್ಟೆಬಲ್ ಗಣೇಶ್ ಅವರ ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಸತ್ಯಸಾಯಿ ಜಿಲ್ಲೆ ಧರ್ಮಾವರಂ ನಿವಾಸಿ ಗಣೇಶ್ ತಿರುಪತಿ ರೆಡ್ ಸ್ಯಾಂಡಲ್ ಟಾಸ್ಕ್ ಫೋರ್ಸ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಸ್ಥಳಕ್ಕಾಗಮಿಸಿದ ಪೊಲೀಸರು ಪರಾರಿಯಾದ ಕಳ್ಳಸಾಗಾಣಿಕೆದಾರರಿಗಾಗಿ ಬಲೆ ಬೀಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?