AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tirupati stampede: ತಿರುಪತಿ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಘೋಷಿಸಿದ ಆಂಧ್ರ ಸರ್ಕಾರ

ಆಂಧ್ರ ಪ್ರದೇಶದ ಪ್ರಸಿದ್ಧ ತಿರುಪತಿ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಬುಧವಾರ ರಾತ್ರಿ ಸಂಭವಿಸಿದ ಕಾಲ್ತುಳಿತದಲ್ಲಿ 6 ಮಂದಿ ಭಕ್ತರು ಮೃತಪಟ್ಟಿದ್ದಾರೆ. ಈ ಮೃತರ ಕುಟುಂಬಗಳಿಗೆ 25 ಲಕ್ಷ ರೂ. ಪರಿಹಾರ ನೀಡುವುದಾಗಿ ಆಂಧ್ರಪ್ರದೇಶ ಸರ್ಕಾರ ಘೋಷಿಸಿದೆ. ತಿರುಮಲ ಶ್ರೀವಾರಿ ವೈಕುಂಠ ದ್ವಾರ ದರ್ಶನಕ್ಕೆ ಟೋಕನ್‌ ವಿಚಾರದಲ್ಲಿ ತಿರುಪತಿಯಲ್ಲಿರುವ ವಿಷ್ಣು ನಿವಾಸದ ಬಳಿ ಕಾಲ್ತುಳಿತ ಸಂಭವಿಸಿ ಹಲವಾರು ಭಕ್ತರು ಮೃತಪಟ್ಟಿರುವುದು ಆಘಾತಕ್ಕೀಡು ಮಾಡಿದೆ.

Tirupati stampede: ತಿರುಪತಿ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಘೋಷಿಸಿದ ಆಂಧ್ರ ಸರ್ಕಾರ
ಕಾಲ್ತುಳಿತImage Credit source: Mint
ನಯನಾ ರಾಜೀವ್
|

Updated on: Jan 09, 2025 | 1:31 PM

Share

ತಿರುಪತಿಯಲ್ಲಿ ಟೋಕನ್ ವಿತರಣೆ ಕೇಂದ್ರದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟಿರುವ ಭಕ್ತರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಆಂಧ್ರಪ್ರದೇಶ ಸರ್ಕಾರ ಹೇಳಿದೆ. ತಿರುಪತಿ ನಗರದ ಬೈರಾಗಿಪಟ್ಟೇಡದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಆರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.48 ಜನರು ಅಸ್ವಸ್ಥರಾಗಿದ್ದಾರೆ.

ಗಾಯಾಳುಗಳನ್ನು ರುಯಾ ಮತ್ತು ಸ್ವಿಮ್ಸ್‌ಗೆ ರವಾನಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಮತ್ತೊಂದೆಡೆ ಕಾಲ್ತುಳಿತ ಘಟನೆಯ ವಿರುದ್ಧ ಪ್ರಕರಣ ದಾಖಲಾಗಿದೆ. ನಾರಾಯಣವನಂ ತಹಸೀಲ್ದಾರ್ ಅವರ ದೂರಿನಂತೆ ಪೂರ್ವ ಪಿಎಸ್‌ನಲ್ಲಿ ಬಿಎನ್‌ಎಸ್ ಕಲಂ 194 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ತಿರುಮಲದಲ್ಲಿ ಕಾಲ್ತುಳಿತದ ಘಟನೆಯಿಂದ ಎಚ್ಚೆತ್ತಿರುವ ಟಿಟಿಡಿ ಶುಕ್ರವಾರ ವೈಕುಂಠ ಏಕಾದಶಿಗೆ ಬೃಹತ್ ವ್ಯವಸ್ಥೆ ಮಾಡಲಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಟಿಟಿಡಿ ಕ್ರಮ ಕೈಗೊಳ್ಳಲಿದೆ. ತಿರುಮಲದಲ್ಲಿ ದೀಪಾಲಂಕಾರ ಹಾಗೂ ವಿದ್ಯುತ್‌ ವ್ಯವಸ್ಥೆಯನ್ನೂ ಬದಲಾಯಿಸಲಾಗಿದೆ. ದೇಶದಲ್ಲಿ ಎಚ್‌ಎಂಪಿವಿ ಸೋಂಕು ಹರಡುತ್ತಿದ್ದು, ಭಕ್ತರು ಮಾಸ್ಕ್ ಧರಿಸಿ ಶ್ರೀವರ ದರ್ಶನಕ್ಕೆ ತೆರಳುವಂತೆ ಟಿಟಿಡಿ ಸೂಚಿಸಿದೆ. ಟೋಕನ್ ಹೊಂದಿರುವವರಿಗೆ ಮಾತ್ರ ಭೇಟಿ ನೀಡಲು ಅವಕಾಶವಿದೆ.

ತಿರುಮಲ ಶ್ರೀವಾರಿ ವೈಕುಂಠ ದ್ವಾರ ದರ್ಶನಕ್ಕೆ ಟೋಕನ್‌ ವಿಚಾರದಲ್ಲಿ ತಿರುಪತಿಯಲ್ಲಿರುವ ವಿಷ್ಣು ನಿವಾಸದ ಬಳಿ ಕಾಲ್ತುಳಿತ ಸಂಭವಿಸಿ ಹಲವಾರು ಭಕ್ತರು ಮೃತಪಟ್ಟಿರುವುದು ಆಘಾತಕ್ಕೀಡು ಮಾಡಿದೆ. ಭಕ್ತರು ಟೋಕನ್ ಸಂಗ್ರಹಿಸಲು ಹೆಚ್ಚಿನ ಸಂಖ್ಯೆಯಲ್ಲಿ ಸೇರುತ್ತಿದ್ದ ಸಮಯದಲ್ಲಿ ನಡೆದ ಈ ದುರಂತ ಘಟನೆ ನನ್ನನ್ನು ತುಂಬಾ ನೋಯಿಸಿತು. ಕೆಲವು ಜನರ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿಯ ಹಿನ್ನೆಲೆಯಲ್ಲಿ, ಉನ್ನತ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ.

ವೈಕುಂಠ ಏಕಾದಶಿ ಪ್ರಯುಕ್ತ ತಿರುಪತಿಯ ವಿಷ್ಣು ನಿವಾಸಂನಲ್ಲಿ ಶುಕ್ರವಾರದಿಂದ 10 ದಿನಗಳ ಕಾಲ ವೈಕುಂಠ ದ್ವಾರ ಸರ್ವ ದರ್ಶನಕ್ಕಾಗಿ ಟೋಕನ್ ವಿತರಣೆಯ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿದೆ. ವೈಕುಂಠ ಏಕಾದಶಿ ಸಮಯದಲ್ಲಿ ತಿರುಪತಿಯಲ್ಲಿ ಕಾಲ್ತುಳಿತಕ್ಕೆ ಆರು ಮಂದಿ ಮೃತಪಟ್ಟ ದುರ್ಘಟನೆಗೆ ಸಂಬಂಧಿಸಿದಂತೆ ಇಂದು ಸಿಎಂ ಚಂದ್ರಬಾಬು ನಾಯ್ಡು ಪರಿಶೀಲನಾ ಸಭೆ ಕರೆದಿದ್ದಾರೆ ಎಂದು ಟಿಡಿಪಿ ವಕ್ತಾರರು ತಿಳಿಸಿದ್ದಾರೆ.

ಗುರುವಾರದಿಂದ ತಿರುಪತಿಯ 9 ಕೇಂದ್ರಗಳಲ್ಲಿ 94 ಕೌಂಟರ್‌ಗಳ ಮೂಲಕ ವೈಕುಂಠ ದರ್ಶನ ಟೋಕನ್‌ಗಳನ್ನು ವಿತರಿಸಲು ಟಿಟಿಡಿ ವ್ಯವಸ್ಥೆ ಮಾಡಿದೆ. ನಿನ್ನೆ ಸಂಜೆ ಟೋಕನ್‌ಗಾಗಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ಜನವರಿ 10, 11 ಮತ್ತು 12 ರಂದು ಮೊದಲ ಮೂರು ದಿನಗಳ ವೈಕುಂಠ ದ್ವಾರ ದರ್ಶನಕ್ಕಾಗಿ ಇಂದು ಬೆಳಗ್ಗೆ 1.20 ಲಕ್ಷ ಟೋಕನ್‌ಗಳನ್ನು ನೀಡಲು ಟಿಟಿಡಿ ನಿರ್ಧರಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?