AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

TTD Assets: ತಿರುಪತಿ ತಿಮ್ಮಪ್ಪನ ಒಟ್ಟು ಆಸ್ತಿ ಎಷ್ಟು? ಅದರ ಮೌಲ್ಯವೆಷ್ಟು, ಇರುವ ಬಂಗಾರವೆಷ್ಟು? ಇಲ್ಲಿದೆ ಮಾಹಿತಿ

ವಿಶ್ವದ ಅತ್ಯಂತ ಶ್ರೀಮಂತ ದೇವಾಲಯಗಳಲ್ಲಿ ತಿರುಪತಿ ತಿಮ್ಮಪ್ಪನ ದೇವಾಲಯವು ಕೂಡ ಒಂದು. ತಿರುಪತಿ ತಿಮ್ಮಪ್ಪನ ಆಸ್ತಿ 2.26 ಲಕ್ಷ ಕೋಟಿ ರೂ. ಇದೆ ಎಂದು ಹೇಳಲಾಗಿದೆ.

TTD Assets: ತಿರುಪತಿ ತಿಮ್ಮಪ್ಪನ ಒಟ್ಟು ಆಸ್ತಿ ಎಷ್ಟು? ಅದರ ಮೌಲ್ಯವೆಷ್ಟು, ಇರುವ ಬಂಗಾರವೆಷ್ಟು? ಇಲ್ಲಿದೆ ಮಾಹಿತಿ
Tirupati Temple
TV9 Web
| Updated By: ನಯನಾ ರಾಜೀವ್|

Updated on: Nov 06, 2022 | 11:52 AM

Share

ವಿಶ್ವದ ಅತ್ಯಂತ ಶ್ರೀಮಂತ ದೇವಾಲಯಗಳಲ್ಲಿ ತಿರುಪತಿ ತಿಮ್ಮಪ್ಪನ ದೇವಾಲಯವು ಕೂಡ ಒಂದು. ತಿರುಪತಿ ತಿಮ್ಮಪ್ಪನ ಆಸ್ತಿ 2.26 ಲಕ್ಷ ಕೋಟಿ ರೂ. ಇದೆ ಎಂದು ಹೇಳಲಾಗಿದೆ. ಕರ್ನಾಟಕ ಹಾಗೂ ಆಂಧ್ರಪ್ರದೇಶ ಬಜೆಟ್ ಗಾತ್ರದಷ್ಟೇ ಕುಬೇರನಾಗಿರುವ ವೆಂಕಟೇಶ್ವರ ದೇವಸ್ಥಾನದ ಆಸ್ತಿಗೆ ಸಂಬಂಧಿಸಿದಂತೆ ಟಿಟಿಡಿ ಶ್ವೇತಪತ್ರ ಹೊರಡಿಸಿದ್ದು, ದೇವಾಲಯದ ಒಟ್ಟು ಆಸ್ತಿ ಮೌಲ್ಯ 2.26 ಕೋಟಿ ರೂ ಇದೆ ಎಂದು ಘೋಷಿಸಿದೆ.

ದೇಶಾದ್ಯಂತ ಒಟ್ಟು 960 ಕಡೆ 7123 ಎಕರೆ ಭೂಮಿ ಇದೆ, ದೇಗುಲದ ಹೆಸರಿನಲ್ಲಿ ಬ್ಯಾಂಕ್​ಗಳಲ್ಲಿ 15,938 ಕೋಟಿ ರೂ. ಠೇವಣಿ ಇದೆ. ತಿರುಪತಿ ತಿರುಮಲದಲ್ಲಿರುವ ಆಸ್ತಿಯ ಮೌಲ್ಯ 5 ಸಾವಿರ ಕೋಟಿ ರೂ, ವೆಂಕಟೇಶ್ವರ ಸ್ವಾಮಿ ಹೊಂದಿರುವ ಚಿನ್ನದ ದಾಸ್ತಾನು 10.25 ಟನ್ ಎಂದು ಹೇಳಲಾಗಿದೆ.

ಟ್ರಸ್ಟ್ ಹಂಚಿಕೊಂಡ ಬ್ಯಾಂಕ್‌ವಾರು ಹೂಡಿಕೆಯ ಪ್ರಕಾರ, ಟಿಟಿಡಿ 2019 ರಲ್ಲಿ 7339.74 ಟನ್ ಚಿನ್ನದ ಠೇವಣಿ ಹೊಂದಿದೆ ಮತ್ತು ಕಳೆದ ಮೂರು ವರ್ಷಗಳಲ್ಲಿ 2.9 ಟನ್‌ಗಳನ್ನು ಸೇರಿಸಲಾಗಿದೆ.

ದೇವಸ್ಥಾನದ ಹೆಸರಿನಲ್ಲಿ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ (National Bank) 2019ರಲ್ಲಿ 13,025 ಕೋಟಿ ರೂ. ನಿಶ್ಚಿತ ಠೇವಣಿ ಇಡಲಾಗಿತ್ತು. ಕೋವಿಡ್‌ ಸಾಂಕ್ರಾಮಿಕದ ಬಳಿಕ ಈ ಠೇವಣಿ ಗಾತ್ರ 15,938 ಕೋಟಿ ರೂ.ಗೆ ಏರಿಕೆಯಾಗಿದೆ. ಕಳೆದ 3 ವರ್ಷಗಳಲ್ಲಿ ಒಟ್ಟು 2,900 ಕೋಟಿ ರು. ಠೇವಣಿ ಹೆಚ್ಚಳವಾಗಿದೆ.

ದೇವಾಲಯಕ್ಕೆ ಚಿನ್ನವನ್ನು ಕಾಣಿಕೆಯಾಗಿ ನೀಡುವ ಜನರ ಸಂಖ್ಯೆಯಲ್ಲೂ ಹೆಚ್ಚಳವಾಗಿದೆ. 2019ರಲ್ಲಿ ಟಿಟಿಡಿ 7.3 ಟನ್‌ ಚಿನ್ನ ಹೊಂದಿತ್ತು.

ಇದಕ್ಕೆ ಈಗ ಇನ್ನೂ 2.9 ಟನ್‌ ಚಿನ್ನ ಸೇರಿಕೊಂಡಿದೆ. ಇದರಿಂದ ಒಟ್ಟಾರೆ ಚಿನ್ನದ ಠೇವಣಿ 10.25 ಟನ್‌ಗೆ ಮೂರೇ ವರ್ಷದಲ್ಲಿ ಏರಿದೆ. ದೇಶದ ವಿವಿಧ ಬ್ಯಾಂಕ್‌ಗಳಲ್ಲಿ ಟಿಟಿಡಿಯು 5,309 ಕೋಟಿ ರೂ. ಮೌಲ್ಯದ ಚಿನ್ನವನ್ನು ಠೇವಣಿ ಇಟ್ಟಿದೆ.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ