AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಐ ಚಾಟ್​ಬಾಟ್​ನಿಂದ ಒಂದೇ ಗಂಟೆಯಲ್ಲಿ ತಿರುಪತಿ ತಿಮ್ಮಪ್ಪನ ದರ್ಶನ ಮಾಡಬಹುದು ಹೇಗೆ?

ತಿರುಮಲದ ಶ್ರೀ ವೆಂಕಟೇಶ್ವರ ದೇವಸ್ಥಾನದ ಯಾತ್ರಾರ್ಥಿಗಳ ಸೇವೆಯಲ್ಲಿ ಪಾರದರ್ಶಕತೆ ಮತ್ತು ದಕ್ಷತೆ ವೃದ್ಧಿಸುವ ದೃಷ್ಟಿಯಿಂದ ಕೃತಕ ಬುದ್ಧಿಮತ್ತೆ ಮೂಲಕ ಸ್ವಯಂಚಾಲಿತ ವ್ಯವಸ್ಥೆ ಜಾರಿಗೆ ಟಿಟಿಡಿ ನಿರ್ಧರಿಸಿದೆ. ತಿರುಪತಿ ಪ್ರಸಿದ್ಧ ಹಿಂದೂ ಧಾರ್ಮಿಕ ಕ್ಷೇತ್ರವಾಗಿದೆ, ಭಕ್ತರನ್ನು ಮತ್ತಷ್ಟು ಸೆಳೆಯಲು ಟ್ರಸ್ಟ್​ ಮುಂದಾಗಿದೆ. ಭಕ್ತರಿಗೆ ಬೇಗ ದೇವರ ದರ್ಶನವಾಗುವಂತೆ ನೋಡಿಕೊಳ್ಳಲಾಗುತ್ತದೆ. ಆರ್ಟಿಫಿಶಿಯಲ್ ಇಂಟೆಲಿಜೆನ್ಸ್​ ಬಳಸಿ ಭಕ್ತರಿಗೆ ಕೇವಲ ಒಂದು ಗಂಟೆಯಲ್ಲಿ ದೇವರ ದರ್ಶನ ಮಾಡಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ.

ಎಐ ಚಾಟ್​ಬಾಟ್​ನಿಂದ ಒಂದೇ ಗಂಟೆಯಲ್ಲಿ ತಿರುಪತಿ ತಿಮ್ಮಪ್ಪನ ದರ್ಶನ ಮಾಡಬಹುದು ಹೇಗೆ?
ತಿರುಪತಿ Image Credit source: Cottage 9
ನಯನಾ ರಾಜೀವ್
|

Updated on:Dec 24, 2024 | 1:06 PM

Share

ಭಕ್ತರು ಅರ್ಧ ದಿನಗಟ್ಟಲೆ ತಿರುಪತಿ ತಿಮ್ಮಪ್ಪನ ದರ್ಶನಕ್ಕಾಗಿ ಸರತಿಯಲ್ಲಿ ನಿಲ್ಲುವುದು ಕೊನೆಗೊಳ್ಳಲಿದ್ದು ಎಐ ತಂತ್ರಜ್ಞಾನದ ಮೂಲಕ ದೇವರ ದರ್ಶನ ಬೇಗ ಆಗಲಿದೆ. ತಿರುಪತಿ ತಿಮ್ಮಪ್ಪನ ದೇವಸ್ಥಾನದಲ್ಲಿ ದೇವರ ದರ್ಶನವನ್ನು ಮತ್ತಷ್ಟು ಸುಲಭ ಮಾಡಲು ಟಿಟಿಡಿ ಮುಂದಾಗಿದೆ. ಬದಲಾಗುತ್ತಿರುವ ತಂತ್ರಜ್ಞಾನದ ಸಹಾಯದಿಂದ ಭಕ್ತರಿಗೆ ಕಡಿಮೆ ಸಮಯದಲ್ಲಿ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲು ಚಿಂತನೆ ನಡೆಸಲಾಗುತ್ತಿದೆ.

ಹೆಚ್ಚಿನ ಸಂಖ್ಯೆಯಲ್ಲಿ ಬರುವ ಯಾತ್ರಾರ್ಥಿಗಳಿಗೆ ವಸತಿ, ದರ್ಶನ ಮತ್ತು ಇತರ ಸೇವೆಗಳನ್ನು ವೇಗಗೊಳಿಸಲು ಮತ್ತು ಪಾರದರ್ಶಕತೆ ಹಾಗೂ ದಕ್ಷತೆಯನ್ನು ಹೆಚ್ಚಿಸಲು ಟಿಟಿಡಿ ಹಸ್ತಚಾಲಿತ ಕಾರ್ಯಾಚರಣೆಗಳ ಬದಲಿಗೆ ಯಾಂತ್ರೀಕೃತಗೊಳಿಸುವಿಕೆಯನ್ನು ಪರಿಗಣಿಸುತ್ತಿದೆ. ನಾವು ಯಾತ್ರಿಕರ ಸೇವೆಗಳಿಗಾಗಿ ಎಐ ಚಾಟ್‌ಬಾಟ್‌ ಅನ್ನು ಪರಿಚಯಿಸಲು ಚಿಂತಿಸುತ್ತಿದ್ದೇವೆ ಎಂದು ಟಿಟಿಡಿ ಕಾರ್ಯನಿರ್ವಾಹಕ ಅಧಿಕಾರಿ(ಇಒ) ಜೆ ಶ್ಯಾಮಲಾ ರಾವ್ ಹೇಳಿದ್ದಾರೆ.

ಕೃತಕ ಬುದ್ಧಿಮತ್ತೆಯಲ್ಲಿ ಪರಿಣಿತರಾಗಿರುವ ವಿದೇಶಿ ಪ್ರತಿನಿಧಿಗಳೊಂದಿಗೆ ಟಿಟಿಡಿ ಈಗಾಗಲೇ ಸಂಪರ್ಕದಲ್ಲಿದೆ. ಉಪಕ್ರಮವನ್ನು ಪ್ರಾಯೋಗಿಕವಾಗಿ ಜಾರಿಗೆ ತರಲಾಗುವುದು ಎಂದು ಆಡಳಿತ ಮಂಡಳಿ ಹೇಳಿದೆ. ಭಕ್ತರು ಸರತಿ ಸಾಲಿನಲ್ಲಿ ಮತ್ತು ಕಂಪಾರ್ಟ್‌ಮೆಂಟ್‌ಗಳಲ್ಲಿ ಗಂಟೆಗಟ್ಟಲೆ ಕಾಯದೆ ತ್ವರಿತ ದರ್ಶನ ನೀಡಲು ಮುಂದಾಗಿದೆ.

ಮತ್ತಷ್ಟು ಓದಿ: ತಿರುಪತಿ ದೇವಸ್ಥಾನದ ಹುಂಡಿಯಿಂದ ಹಣ ಕದ್ದ ಭಕ್ತ; ಆಮೇಲೇನಾಯ್ತು?

ಟಿಟಿಡಿ ಟ್ರಸ್ಟಿಗಳ ಮಂಡಳಿಯ ಅಧ್ಯಕ್ಷರಾಗಿ ಬಿಆರ್ ನಾಯ್ಡು ಆಯ್ಕೆಯಾದ ಮೊದಲ ಸಭೆಯಲ್ಲೇ ಇಂಥದ್ದೊಂದು ನಿರ್ಧಾರ ತೆಗೆದುಕೊಳ್ಳಲಾಗಿದೆ. ಪ್ರತಿದಿನ 70 ಸಾವಿರ ಭಕ್ತರು ತಿಮ್ಮಪ್ಪನ ದರ್ಶನ ಪಡೆಯುತ್ತಿದ್ದರೂ ಜನರು ಹರಸಾಹಸ ಪಡುತ್ತಿದ್ದಾರೆ. ಒಂದು ಕ್ಷಣ ದೇವರ ದರ್ಶನ ಸಿಕ್ಕಿದರೆ ಸಾಕಪ್ಪಾ ಎಂದು ಪ್ರಾರ್ಥಿಸಿಕೊಳ್ಳುತ್ತಾರೆ.

ರಾಜ್ಯ ಸರ್ಕಾರದ ಸ್ವರ್ಣ ಆಂಧ್ರ-2047 ಉಪಕ್ರಮಕ್ಕೆ ಅನುಗುಣವಾಗಿ ತನ್ನ ವಿಷನ್ 2047 ಅಡಿಯಲ್ಲಿ ವಿಶ್ವದ ಅತ್ಯಂತ ಶ್ರೀಮಂತ ಹಿಂದೂ ದೇವಾಲಯವನ್ನು ಮಾದರಿ ಯಾತ್ರಾ ಕೇಂದ್ರವಾಗಿ ಪರಿವರ್ತಿಸಲು ಟಿಟಿಡಿ ಗುರಿಯನ್ನು ಹೊಂದಿದೆ.

ಶ್ರೀವಾರಿಯ ದರ್ಶನಕ್ಕೆ ಬರುವ ಭಕ್ತರಿಗೆ ಆಧಾರ್ ಕಾರ್ಡ್ ಸಂಖ್ಯೆ ಹಾಗೂ ಮುಖ ಗುರುತಿಸುವ ರಸೀದಿ ಮೂಲಕ ದರ್ಶನ ಸಮಯವನ್ನು ದೃಢೀಕರಿಸಿ ಟೋಕನ್ ನೀಡುವ ವಿಧಾನದ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ಟೋಕನ್ ಪಡೆದ ಭಕ್ತರು ನಿಗದಿತ ಸಮಯಕ್ಕೆ ವೈಕುಂಠಂ ಸರದಿ ಸಂಕೀರ್ಣವನ್ನು ತಲುಪಿದರೆ, ಫೇಸ್​ ರೆಕಗ್ನಿಷನ್  ಪ್ರವೇಶದ್ವಾರದಲ್ಲಿ ಸ್ಕ್ಯಾನ್ ಮಾಡುವ ಮೂಲಕ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ಸರತಿ ಸಾಲಿನಲ್ಲಿ ಬಂದ ಭಕ್ತರಿಗೆ ಕಾಯುವ ತಲೆನೋವಿಲ್ಲದೆ ಒಂದು ಗಂಟೆಯೊಳಗೆ ಸ್ವಾಮಿಯ ದರ್ಶನ ಪೂರ್ಣಗೊಳ್ಳಲಿದೆ ಎಂದು ಟಿಟಿಡಿ ನಿರೀಕ್ಷಿಸಿದೆ.

ಭಕ್ತರಿಗೆ ಟೋಕನ್ ನೀಡಲು ವಿಶೇಷ ಕೌಂಟರ್ ಗಳನ್ನು ತೆರೆಯಬೇಕು. ತಿರುಮಲ ಹಾಗೂ ಭಕ್ತರು ಹೋಗುವ ಬೆಟ್ಟದ ಹೆಬ್ಬಾಗಿಲು ಅಲಿಪಿರಿಯಲ್ಲಿ ವಿಶೇಷ ಕೌಂಟರ್‌ಗಳನ್ನು ಸ್ಥಾಪಿಸಲು ಮುಂದಾಗಿದೆ. ಸಿಬ್ಬಂದಿ ಅಗತ್ಯವಿಲ್ಲದೇ ತಿರುಮಲ ಬೆಟ್ಟದಲ್ಲಿ ಎಐ ತಂತ್ರಜ್ಞಾನವನ್ನು ಅಳವಡಿಸುವ ಮೂಲಕ ಹೆಚ್ಚು ಪಾರದರ್ಶಕತೆಯನ್ನು ತರುವ ಸಾಧ್ಯತೆಯನ್ನು ಟಿಟಿಡಿ ಕಲ್ಪಿಸಿದೆ.

ಇದನ್ನು ಜಾರಿಗೆ ತರಲು ನಾಲ್ಕು ವಿದೇಶಿ ಕಂಪನಿಗಳು ಆಸಕ್ತಿ ತೋರುತ್ತಿವೆ. ಕೃತಕ ಬುದ್ಧಿಮತ್ತೆ ಸಾಫ್ಟ್‌ವೇರ್ ಒದಗಿಸಲು ಮುಂದೆ ಬರುವ ಏಜೆನ್ಸಿಗಳು ಈ ವಿಧಾನವನ್ನು ಅಳವಡಿಸಿ ಯಶಸ್ಸು ಸಾಧಿಸಲು ಮುಂದಾಗಿವೆ. ಸರತಿ ಸಾಲು ನಿರ್ವಹಣೆಯನ್ನು ಸುಲಭಗೊಳಿಸಲು ಟಿಟಿಡಿ ಆಶಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 1:04 pm, Tue, 24 December 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ