AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tirupati Thimmappa Temple: 3 ಸಾವಿರ ರೂಪಾಯಿಯ ದರ್ಶನ ಟಿಕೆಟ್​ನ್ನು 42 ಸಾವಿರಕ್ಕೆ ಮಾರಾಟ ಮಾಡಿದ ಟಿಟಿಡಿ ಸಿಬ್ಬಂದಿಯ ಬಂಧನ

ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ವಿಐಪಿ ಟಿಕೆಟ್​ನ್ನು​​ 42,000 ರೂ.ಗೆ ಮಾರಾಟ ಮಾಡಿರುವ ಅಲ್ಲಿನ ಸಿಬ್ಬಂದಿಯನ್ನು ಬಂಧಿಸಲಾಗಿದೆ.

Tirupati Thimmappa Temple: 3 ಸಾವಿರ ರೂಪಾಯಿಯ ದರ್ಶನ ಟಿಕೆಟ್​ನ್ನು 42 ಸಾವಿರಕ್ಕೆ ಮಾರಾಟ ಮಾಡಿದ ಟಿಟಿಡಿ ಸಿಬ್ಬಂದಿಯ ಬಂಧನ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Jul 07, 2023 | 11:50 AM

Share

ಆಂಧ್ರಪ್ರದೇಶ: ದೇವಾಲಯಗಳಲ್ಲೂ ಕೂಡ ಅಕ್ರಮವನ್ನು ಮಾಡುತ್ತಾರೆ ಎಂಬುದಕ್ಕೆ ಇದು ಉದಾಹರಣೆ ನೋಡಿ, ಹೌದು ತಿರುಪತಿ ತಿಮ್ಮಪ್ಪನ (Tirupati Thimmappa) ದರ್ಶನಕ್ಕೆ ವಿಐಪಿ ಟಿಕೆಟ್​ನ್ನು​​ 42,000 ರೂ.ಗೆ ಮಾರಾಟ ಮಾಡಿರುವ ಅಲ್ಲಿನ ಸಿಬ್ಬಂದಿಯನ್ನು ಬಂಧಿಸಲಾಗಿದೆ. ಹೌದು ತಿರುಪತಿ ತಿಮ್ಮಪ್ಪ ದೇವಸ್ಥಾನದ (ಟಿಟಿಡಿ) ಸಿಬ್ಬಂದಿಯೊಬ್ಬರು ಗುರುವಾರ ದೇವಸ್ಥಾನದ ಪಟ್ಟಣದಲ್ಲಿ ವಿಐಪಿ ದರ್ಶನದ ಟಿಕೆಟ್‌ಗಳನ್ನು ಬ್ಲಾಕ್ ಮಾರ್ಕೆಟಿಂಗ್‌ನಲ್ಲಿ ಮಾರಾಟ ಮಾಡಿದ್ದಾರೆ ಎಂದು ಹೇಳಲಾಗಿದೆ.

ಈ ಕೃತ್ಯವನ್ನು ದೇವಾಲಯದ ಉದ್ಯೋಗಿ, ಶಂಕರ್ ಮಾಡಿದ್ದಾನೆ ಎಂದು ಗುರುತಿಸಲಾಗಿದ್ದು, ಹೈದರಾಬಾದ್‌ನ ಭಕ್ತರೊಬ್ಬರು ಆರು ಟಿಕೆಟ್‌ಗಳನ್ನು 42,000 ರೂ.ಗೆ ಖರೀದಿಸಲಾಗಿದೆ. ಆದರೆ ನಿಜವಾದ ಟಿಕೆಟ್ ಬೆಲೆ ಕೇವಲ 3,000 ರೂ.

ಟಿಟಿಡಿಯ ವಿಜಿಲೆನ್ಸ್ ಮತ್ತು ಸೆಕ್ಯುರಿಟಿ ವಿಭಾಗಕ್ಕೆ ಈ ಅಕ್ರಮದ ಬಗ್ಗೆ ಮಾಹಿತಿ ನೀಡಿದ್ದು, ಭಕ್ತರೊಬ್ಬರು ತಮ್ಮ ಕುಟುಂಬದ ಜತೆಗೆ ತಿರುಪತಿಗೆ ಬಂದಿದ್ದು, ಈ ಸಮಯದಲ್ಲಿ ವೈಕುಂಟಂ ಕ್ಯೂ ಕಾಂಪ್ಲೆಕ್ಸ್‌ನಲ್ಲಿ ದರ್ಶನ ಟಿಕೆಟ್ ಕೌಂಟರ್‌ನಲ್ಲಿ ವಿರಾಮದ ಬಗ್ಗೆ ತನಿಖೆ ನಡೆಸಿದಾಗ ಶಂಕರ್ ಎಂಬ ವ್ಯಕ್ತಿ ಹೈದರಾಬಾದ್ ಮೂಲದ ಭಕ್ತರೊಬ್ಬರ ಕುಟುಂಬಕ್ಕೆ ದರ್ಶನದ ಟಿಕೆಟ್‌ಗಳನ್ನು 42,000 ರೂ.ಗೆ ಮಾರಾಟ ಮಾಡಿರುವ ಬಗ್ಗೆ ತಿಳಿದು ಬಂದಿದೆ.

ಸ್ಥಳೀಯ ಎಂಎಲ್‌ಸಿಯ ಶಿಫಾರಸು ಪತ್ರವನ್ನು ದುರುಪಯೋಗಪಡಿಸಿಕೊಂಡು ಶಂಕರ್ ಟಿಕೆಟ್ ಪಡೆದಿದ್ದರು ಎಂದು ವರದಿಯಾಗಿದೆ. ನಂತರ ವಿಜಿಲೆನ್ಸ್ ವಿಭಾಗವು ತಿರುಮಲ 2 ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ.

ಇದನ್ನೂ ಓದಿ: Tirupati Temple: ಹೊಸ ವರ್ಷದಂದು ಹೊಸ ದಾಖಲೆ ಬರೆದ ತಿರುಪತಿ ದೇವಸ್ಥಾನ; ಒಂದೇ ದಿನ 7.6 ಕೋಟಿ ರೂ. ಕಾಣಿಕೆ ಸಂಗ್ರಹ

ಟಿಟಿಡಿ ಅಧಿಕಾರಿಗಳು ಟಿಕೆಟ್ ಖರೀದಿಸಲು ಮಧ್ಯವರ್ತಿಗಳನ್ನು ಸಂಪರ್ಕಿಸದಂತೆ ಭಕ್ತರಿಗೆ ಮನವಿ ಮಾಡಿದ್ದಾರೆ. ದೇವರ ದರ್ಶನ ಪಡೆಯಲು ಪಾರದರ್ಶಕತೆಯುತ ಟಿಕೆಟ್​​ ಬೆಲೆಯನ್ನು ಬಗ್ಗೆ ಟಿಟಿಡಿ ವೆಬ್‌ಸೈಟ್​​ನಲ್ಲಿ ತಿಳಿದುಕೊಳ್ಳಬಹುದು ಮತ್ತು ಅಲ್ಲಿಯೇ ಟಿಕೆಟ್​​ ಬುಕ್​​ ಮಾಡಬಹುದು ಎಂದು ಆಡಳಿತ ಮಂಡಳಿ ಹೇಳಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ