Sign In

By signing in or creating an account, you agree with Associated Broadcasting Company's Terms & Conditions and Privacy Policy.

TTD: ತಿರುಪತಿ ತಿಮ್ಮಪ್ಪನಿಗೆ ಬಂಗಾರದ ಶಂಖ, ಕೂರ್ಮಪೀಠ ಸಮರ್ಪಿಸಿದ ಇನ್ಫೋಸಿಸ್ ಮೂರ್ತಿ ದಂಪತಿ

Sudha Murthy, Narayana Murthy at Tirupati: ಇನ್ಫೋಸಿಸ್ ಸಂಸ್ಥಾಪಕ ನಾರಾಯಣಮೂರ್ತಿ ಮತ್ತು ಸುಧಾಮೂರ್ತಿ ದಂಪತಿ ತಿರುಪತಿ ತಿಮ್ಮಪ್ಪನಿಗೆ 1.2 ಕೋಟಿ ರೂ ಮೌಲ್ಯದ ಶಂಖ ಮತ್ತು ಕೂರ್ಮಪೀಠ ಸಮರ್ಪಿಸಿದ್ದಾರೆ.

TTD: ತಿರುಪತಿ ತಿಮ್ಮಪ್ಪನಿಗೆ ಬಂಗಾರದ ಶಂಖ, ಕೂರ್ಮಪೀಠ ಸಮರ್ಪಿಸಿದ ಇನ್ಫೋಸಿಸ್ ಮೂರ್ತಿ ದಂಪತಿ
ಸುಧಾ ಮೂರ್ತಿ ಮತ್ತು ನಾರಾಯಣಮೂರ್ತಿ ದಂಪತಿ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 17, 2023 | 1:10 PM

ತಿರುಪತಿ ತಿಮ್ಮಪ್ಪನ ಭಕ್ತರ ಸಂಖ್ಯೆ ಅಗಾಧವಾದುದು. ಭಕ್ತರ ಇಷ್ಟಾರ್ಥ ಈಡೇರಿಸುತ್ತಾನೆ, ಭಕ್ತರ ಕಷ್ಟಗಳನ್ನು ಕರಗಿಸುತ್ತಾನೆ. ಜಗತ್ತಿನಾದ್ಯಂತ ಜನರು ತಿರುಪತಿ ಸನ್ನಿಧಾನಕ್ಕೆ ಬಂದು ಹೋಗುತ್ತಾರೆ. ಜನಸಾಮಾನ್ಯರಿಂದ ಹಿಡಿದು ರಾಜಕಾರಣಿಗಳು, ಸೆಲಬ್ರಿಟಿಗಳು ತಿರುಪತಿ ಬಾಲಾಜಿ (Tirupati Balaji) ಕಂಡು ಸಂತೃಪ್ತರಾಗುತ್ತಾರೆ. ಹಿಂದೆಲ್ಲಾ ರಾಜ ಮಹಾರಾಜರು ವೆಂಕಟೇಶ್ವರನಿಗೆ ಜಮೀನು, ಬಂಗಾರ, ವಜ್ರ ವೈಡೂರ್ಯಗಳನ್ನು ಸಮರ್ಪಿಸುತ್ತಿದ್ದರು. ನಮ್ಮ ಜನಾರ್ದನ ರೆಡ್ಡಿ ಚಿನ್ನದ ಕಿರೀಟವನ್ನೇ ಕೊಟ್ಟು ಸುದ್ದಿ ಮಾಡಿದ್ದರು. ಇದೀಗ ಇನ್ಫೋಸಿಸ್ ಸಂಸ್ಥಾಪಕ ನಾರಾಯಣಮೂರ್ತಿ ಮತ್ತು ಸುಧಾ ಮೂರ್ತಿ ದಂಪತಿ (Infosys Murthy Couple) ತಿರುಪತಿ ತಿಮ್ಮಪ್ಪನ ಸನ್ನಿಧಾನಕ್ಕೆ ಹೋಗಿ ಬೆಲೆಬಾಳುವ ಕಾಣಿಕೆಗಳನ್ನು ಸಮರ್ಪಿಸಿದ್ದಾರೆ.

ಸುಧಾ ಮೂರ್ತಿ ಮತ್ತು ನಾರಾಯಣಮೂರ್ತಿ ದಂಪತಿ ಸಮರ್ಪಿಸಿದ 2 ಕಿಲೋ ಕಾಣಿಕೆಗಳ ಮೌಲ್ಯ 1.25 ಕೋಟಿ ರೂ ಎನ್ನಲಾಗಿದೆ. ಶ್ರೀವಾರಿ ಪೂಜೆಗೆ ಬಳಸುವ ಅಭಿಷೇಕದ ಶಂಖ ಹಾಗೂ ಕೂರ್ಮಪೀಠವನ್ನು ದಾನವಾಗಿ ಕೊಟ್ಟಿದ್ದಾರೆ. ಎರಡೂ ಕೂಡ ಚಿನ್ನದಿಂದ ಮಾಡಿದುದಾಗಿದೆ. ಟಿಟಿಡಿ ಸಿಇಒ ಧರ್ಮ ರೆಡ್ಡಿ ಅವರು ಈ ಸಂದರ್ಭದಲ್ಲಿ ಮೂರ್ತಿ ದಂಪತಿಗೆ ಶೇಷವಸ್ತ್ರ ತೊಡಿಸಿ ಪ್ರಸಾದ ಕೊಟ್ಟರು.

ಇದನ್ನೂ ಓದಿTamil Nadu: ಉನ್ನತ ಶಿಕ್ಷಣ ಸಚಿವ ಕೆ ಪೊನ್ಮುಡಿ ಮೇಲೆ ಇ.ಡಿ ದಾಳಿ, 9 ಸ್ಥಳಗಳಲ್ಲಿ ಶೋಧ ಸುಧಾ ಮೂರ್ತಿ ಮತ್ತು ನಾರಾಯಣಮೂರ್ತಿ ಇಬ್ಬರೂ ಕೂಡ ತಿರುಪತಿ ತಿಮ್ಮಪ್ಪನ ಭಕ್ತರು. ಸುಧಾ ಮೂರ್ತಿ ಅವರು ಎರಡು ಬಾರಿ ಟಿಟಿಡಿ ಟ್ರಸ್ಟ್ ಬೋರ್ಡ್​ನ ಛೇರ್ಮನ್ ಆಗಿದ್ದರು. ಅವರ ಅವಧಿಯಲ್ಲಿ ತಿರುಪತಿ, ತಿರುಮಲದಲ್ಲಿ ಸೌಕರ್ಯವ್ಯವಸ್ಥೆಯನ್ನು ಉನ್ನತೀಕರಿಲಾಗಿತ್ತು. ಜಗನ್ಮೋಹನ್ ರೆಡ್ಡಿ ಸಿಎ ಆದ ಬಳಿಕ ಸುಧಾ ಮೂರ್ತಿ ಅವರು ಬೋರ್ಡ್ ಛೇರ್ಮನ್ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ