AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

TTD: ತಿರುಪತಿ ತಿಮ್ಮಪ್ಪನಿಗೆ ಬಂಗಾರದ ಶಂಖ, ಕೂರ್ಮಪೀಠ ಸಮರ್ಪಿಸಿದ ಇನ್ಫೋಸಿಸ್ ಮೂರ್ತಿ ದಂಪತಿ

Sudha Murthy, Narayana Murthy at Tirupati: ಇನ್ಫೋಸಿಸ್ ಸಂಸ್ಥಾಪಕ ನಾರಾಯಣಮೂರ್ತಿ ಮತ್ತು ಸುಧಾಮೂರ್ತಿ ದಂಪತಿ ತಿರುಪತಿ ತಿಮ್ಮಪ್ಪನಿಗೆ 1.2 ಕೋಟಿ ರೂ ಮೌಲ್ಯದ ಶಂಖ ಮತ್ತು ಕೂರ್ಮಪೀಠ ಸಮರ್ಪಿಸಿದ್ದಾರೆ.

TTD: ತಿರುಪತಿ ತಿಮ್ಮಪ್ಪನಿಗೆ ಬಂಗಾರದ ಶಂಖ, ಕೂರ್ಮಪೀಠ ಸಮರ್ಪಿಸಿದ ಇನ್ಫೋಸಿಸ್ ಮೂರ್ತಿ ದಂಪತಿ
ಸುಧಾ ಮೂರ್ತಿ ಮತ್ತು ನಾರಾಯಣಮೂರ್ತಿ ದಂಪತಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 17, 2023 | 1:10 PM

Share

ತಿರುಪತಿ ತಿಮ್ಮಪ್ಪನ ಭಕ್ತರ ಸಂಖ್ಯೆ ಅಗಾಧವಾದುದು. ಭಕ್ತರ ಇಷ್ಟಾರ್ಥ ಈಡೇರಿಸುತ್ತಾನೆ, ಭಕ್ತರ ಕಷ್ಟಗಳನ್ನು ಕರಗಿಸುತ್ತಾನೆ. ಜಗತ್ತಿನಾದ್ಯಂತ ಜನರು ತಿರುಪತಿ ಸನ್ನಿಧಾನಕ್ಕೆ ಬಂದು ಹೋಗುತ್ತಾರೆ. ಜನಸಾಮಾನ್ಯರಿಂದ ಹಿಡಿದು ರಾಜಕಾರಣಿಗಳು, ಸೆಲಬ್ರಿಟಿಗಳು ತಿರುಪತಿ ಬಾಲಾಜಿ (Tirupati Balaji) ಕಂಡು ಸಂತೃಪ್ತರಾಗುತ್ತಾರೆ. ಹಿಂದೆಲ್ಲಾ ರಾಜ ಮಹಾರಾಜರು ವೆಂಕಟೇಶ್ವರನಿಗೆ ಜಮೀನು, ಬಂಗಾರ, ವಜ್ರ ವೈಡೂರ್ಯಗಳನ್ನು ಸಮರ್ಪಿಸುತ್ತಿದ್ದರು. ನಮ್ಮ ಜನಾರ್ದನ ರೆಡ್ಡಿ ಚಿನ್ನದ ಕಿರೀಟವನ್ನೇ ಕೊಟ್ಟು ಸುದ್ದಿ ಮಾಡಿದ್ದರು. ಇದೀಗ ಇನ್ಫೋಸಿಸ್ ಸಂಸ್ಥಾಪಕ ನಾರಾಯಣಮೂರ್ತಿ ಮತ್ತು ಸುಧಾ ಮೂರ್ತಿ ದಂಪತಿ (Infosys Murthy Couple) ತಿರುಪತಿ ತಿಮ್ಮಪ್ಪನ ಸನ್ನಿಧಾನಕ್ಕೆ ಹೋಗಿ ಬೆಲೆಬಾಳುವ ಕಾಣಿಕೆಗಳನ್ನು ಸಮರ್ಪಿಸಿದ್ದಾರೆ.

ಸುಧಾ ಮೂರ್ತಿ ಮತ್ತು ನಾರಾಯಣಮೂರ್ತಿ ದಂಪತಿ ಸಮರ್ಪಿಸಿದ 2 ಕಿಲೋ ಕಾಣಿಕೆಗಳ ಮೌಲ್ಯ 1.25 ಕೋಟಿ ರೂ ಎನ್ನಲಾಗಿದೆ. ಶ್ರೀವಾರಿ ಪೂಜೆಗೆ ಬಳಸುವ ಅಭಿಷೇಕದ ಶಂಖ ಹಾಗೂ ಕೂರ್ಮಪೀಠವನ್ನು ದಾನವಾಗಿ ಕೊಟ್ಟಿದ್ದಾರೆ. ಎರಡೂ ಕೂಡ ಚಿನ್ನದಿಂದ ಮಾಡಿದುದಾಗಿದೆ. ಟಿಟಿಡಿ ಸಿಇಒ ಧರ್ಮ ರೆಡ್ಡಿ ಅವರು ಈ ಸಂದರ್ಭದಲ್ಲಿ ಮೂರ್ತಿ ದಂಪತಿಗೆ ಶೇಷವಸ್ತ್ರ ತೊಡಿಸಿ ಪ್ರಸಾದ ಕೊಟ್ಟರು.

ಇದನ್ನೂ ಓದಿTamil Nadu: ಉನ್ನತ ಶಿಕ್ಷಣ ಸಚಿವ ಕೆ ಪೊನ್ಮುಡಿ ಮೇಲೆ ಇ.ಡಿ ದಾಳಿ, 9 ಸ್ಥಳಗಳಲ್ಲಿ ಶೋಧ ಸುಧಾ ಮೂರ್ತಿ ಮತ್ತು ನಾರಾಯಣಮೂರ್ತಿ ಇಬ್ಬರೂ ಕೂಡ ತಿರುಪತಿ ತಿಮ್ಮಪ್ಪನ ಭಕ್ತರು. ಸುಧಾ ಮೂರ್ತಿ ಅವರು ಎರಡು ಬಾರಿ ಟಿಟಿಡಿ ಟ್ರಸ್ಟ್ ಬೋರ್ಡ್​ನ ಛೇರ್ಮನ್ ಆಗಿದ್ದರು. ಅವರ ಅವಧಿಯಲ್ಲಿ ತಿರುಪತಿ, ತಿರುಮಲದಲ್ಲಿ ಸೌಕರ್ಯವ್ಯವಸ್ಥೆಯನ್ನು ಉನ್ನತೀಕರಿಲಾಗಿತ್ತು. ಜಗನ್ಮೋಹನ್ ರೆಡ್ಡಿ ಸಿಎ ಆದ ಬಳಿಕ ಸುಧಾ ಮೂರ್ತಿ ಅವರು ಬೋರ್ಡ್ ಛೇರ್ಮನ್ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ