AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊನ್ನೆಯಷ್ಟೇ ಮತದಾನ ಮುಗಿದಿತ್ತು, ಇಂದು ಅಭ್ಯರ್ಥಿಯೇ ಇಲ್ಲ; ಕೊರೊನಾಕ್ಕೆ ಬಲಿಯಾದ ತೃಣಮೂಲ ಕಾಂಗ್ರೆಸ್ ಮುಖಂಡ ಕಾಜಲ್ ಸಿನ್ಹಾ

ಖರ್ದಾ ವಿಧಾನಸಭಾ ಕ್ಷೇತ್ರದಲ್ಲಿ ಏಪ್ರಿಲ್​ 22ರಂದು ಮತದಾನ ಮುಗಿದಿದೆ. ಈ ಕ್ಷೇತ್ರದಲ್ಲಿ ಮತ್ತೊಮ್ಮೆ ಮತದಾನ ನಡೆಯಲಿದೆಯಾ? ಎಂಬುದು ಇನ್ನು ಮೇಲೆ ನಿರ್ಧಾರವಾಗಲಿದೆ.

ಮೊನ್ನೆಯಷ್ಟೇ ಮತದಾನ ಮುಗಿದಿತ್ತು, ಇಂದು ಅಭ್ಯರ್ಥಿಯೇ ಇಲ್ಲ; ಕೊರೊನಾಕ್ಕೆ ಬಲಿಯಾದ ತೃಣಮೂಲ ಕಾಂಗ್ರೆಸ್ ಮುಖಂಡ ಕಾಜಲ್ ಸಿನ್ಹಾ
ಕಾಜಲ್ ಸಿನ್ಹಾ
Lakshmi Hegde
|

Updated on: Apr 25, 2021 | 5:31 PM

Share

ಕೋಲ್ಕತ್ತ: ಪಶ್ಚಿಮಬಂಗಾಳದಲ್ಲಿ ವಿಧಾನಸಭಾ ಚುನಾವಣೆಯ ಉತ್ತರ 24 ಪರಗಣದ ಖರ್ದಾ ಕ್ಷೇತ್ರದ ತೃಣಮೂಲ ಕಾಂಗ್ರೆಸ್​ ಅಭ್ಯರ್ಥಿ ಕಾಜಲ್​ ಸಿನ್ಹಾ ಕೊರೊನಾ ಸೋಂಕಿನಿಂದ ಇಂದು ಮೃತಪಟ್ಟಿದ್ದಾರೆ. ಸದ್ಯ ಪಶ್ಚಿಮಬಂಗಾಳದಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿದ್ದು, ಮೇ 2ರಂದು ಫಲಿತಾಂಶ ಪ್ರಕಟವಾಗಲಿದೆ. 59 ವರ್ಷದ ಕಾಜಲ್ ಸಿನ್ಹಾರಿಗೆ 2 ದಿನಗಳ ಹಿಂದಷ್ಟೇ ಸೋಂಕು ದೃಢಪಟ್ಟಿತ್ತು. ಬೇಲಿಯಾಘಾಟಾದ ಐಡಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.

ಕಾಜಲ್ ಸಿನ್ಹಾ ಸಾವಿಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಂತಾಪ ಸೂಚಿಸಿದ್ದಾರೆ. ಇದು ನಿಜಕ್ಕೂ ಶಾಕ್​ ಆಗುವಂತಹ ವಿಷಯ ಎಂದು ಹೇಳಿದ್ದಾರೆ. ಟ್ವೀಟ್ ಮಾಡಿರುವ ಮಮತಾ ಬ್ಯಾನರ್ಜಿ, ಕಾಜಲ್ ಸಿನ್ಹಾ ಸಾವಿನ ಸುದ್ದಿ ಕೇಳಿ ತುಂಬತುಂಬ ನೋವಾಗಿದೆ. ಈ ವಿಧಾನಸಭೆ ಚುನಾವಣೆಯಲ್ಲಿ ಖಾರ್ದಾದಿಂದ ನಮ್ಮ ಅಭ್ಯರ್ಥಿಯಾಗಿದ್ದರು. ತಮ್ಮ ಇಡೀ ಜೀವನವನ್ನು ಜನಸೇವೆಗಾಗಿ ಮುಡಿಪಾಗಿಟ್ಟವರಾಗಿದ್ದರು. ನಾವು ಅವರನ್ನು ಮಿಸ್ ಮಾಡಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಖರ್ದಾ ವಿಧಾನಸಭಾ ಕ್ಷೇತ್ರದಲ್ಲಿ ಏಪ್ರಿಲ್​ 22ರಂದು ಮತದಾನ ಮುಗಿದಿದೆ. ಈ ಕ್ಷೇತ್ರದಲ್ಲಿ ಮತ್ತೊಮ್ಮೆ ಮತದಾನ ನಡೆಯಲಿದೆಯಾ? ಚುನಾವಣಾ ಫಲಿತಾಂಶ ಬಂದ ಮೇಲಷ್ಟೇ ನಿರ್ಧಾರ ಮಾಡಲಾಗುತ್ತದಾ ಎಂಬುದು ಇನ್ನು ಮುಂದೆ ಗೊತ್ತಾಗಲಿದೆ.

ಇದನ್ನೂ ಓದಿ: ಕೊವಿಡ್ ಲಾಕ್​ಡೌನ್ ವೇಳೆ ಕಾರ್ಯ ನಿರ್ವಹಿಸುವ ಮುಂಬೈ ಪೊಲೀಸರಿಗೆ ಉಚಿತ ವ್ಯಾನಿಟಿ ವ್ಯಾನ್​ ನೀಡಿದ ಉದ್ಯಮಿ

‘ಅರ್ಜೆಂಟ್ ಆಗಿ ಸರ್ಜರಿ ಮಾಡಿ.. ಇಲ್ಲದೆ ಇದ್ರೆ ಕೊಂದು ಬಿಡಿ’- ಆಸ್ಪತ್ರೆ ಎದುರು ಕೈದಿಯ ಗೋಳಾಟ; ಯಾವುದನ್ನೂ ಒಪ್ಪುತ್ತಿಲ್ಲ ವೈದ್ಯರು

Follow Us
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು