AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nagaland Firing: ನಾಗಾಲ್ಯಾಂಡ್​ ಫೈರಿಂಗ್​ ಪ್ರಕರಣದ ಸಾವಿನ ಸಂಖ್ಯೆ 15ಕ್ಕೆ ಏರಿಕೆ; ಇಂದು ಘಟನಾಸ್ಥಳಕ್ಕೆ ಭೇಟಿಕೊಡಲಿದೆ ಟಿಎಂಸಿ ನಿಯೋಗ

ನಾಗಾಲ್ಯಾಂಡ್ ದುರ್ಘಟನೆಯ ಬೆನ್ನಲ್ಲೇ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಂತಾಪ ಸೂಚಿಸಿದ್ದರು. ನಾಗಾಲ್ಯಾಂಡ್​​ನಲ್ಲಿ ನಡೆದ ದುರ್ಘಟನೆಯಿಂದ ಆತಂಕ, ನೋವಾಗಿದೆ.

Nagaland Firing: ನಾಗಾಲ್ಯಾಂಡ್​ ಫೈರಿಂಗ್​ ಪ್ರಕರಣದ ಸಾವಿನ ಸಂಖ್ಯೆ 15ಕ್ಕೆ ಏರಿಕೆ; ಇಂದು ಘಟನಾಸ್ಥಳಕ್ಕೆ ಭೇಟಿಕೊಡಲಿದೆ ಟಿಎಂಸಿ ನಿಯೋಗ
ಮಮತಾ ಬ್ಯಾನರ್ಜಿ
TV9 Web
| Edited By: |

Updated on: Dec 06, 2021 | 10:50 AM

Share

ನಾಗಾಲ್ಯಾಂಡ್​​ನ ಮೋನ್​ ಜಿಲ್ಲೆಯಲ್ಲಿ ನಿನ್ನೆ ನಡೆದ ಫೈರಿಂಗ್ (Nagaland Firing)​ ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ಅಲ್ಲಿ ಉದ್ವಿಗ್ನ ವಾತಾವರಣವಿದ್ದು, ಮೋನ್​ ಜಿಲ್ಲೆಯಲ್ಲಿ ಕರ್ಫ್ಯೂ ಹೇರಲಾಗಿದೆ. ಈ ಮಧ್ಯೆ ತೃಣಮೂಲ ಕಾಂಗ್ರೆಸ್​​ನ 5 ಜನರ ನಿಯೋಗವೊಂದು ಇಂದು ಮೋನ್​ ಜಿಲ್ಲೆಯಲ್ಲಿ ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಲು ನಿರ್ಧರಿಸಿದೆ. ಹಾಗೇ, ಈ ನಿಯೋಗ ಓಟಿಂಗ್​ ಗ್ರಾಮಕ್ಕೆ ಭೇಟಿ ನೀಡಿ, ದುರ್ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳ ಜನರೊಂದಿಗೆ ಮಾತುಕತಡೆ ನಡೆಸಲಿದೆ ಎಂದು ಹೇಳಲಾಗಿದೆ.  ಈ ನಿಯೋಗದಲ್ಲಿ ಟಿಎಂಸಿ ಸಂಸದ ಪ್ರಸುನ್​ ಬ್ಯಾನರ್ಜಿ, ಸುಷ್ಮಿತಾ ದೇವ್​, ಮುಖಂಡರಾದ ಅಪರೂಪಾ ಪೊಡ್ಡಾರ್​, ಸಂತನು ಸೇನ್​ ಮತ್ತು ಟಿಎಂಸಿ ವಕ್ತಾರ ಬಿಸ್ವಜಿತ್​ ದೇವ್​ ಇರಲಿದ್ದಾರೆ. 

ನಾಗಾಲ್ಯಾಂಡ್​​ನಲ್ಲಿ ನಿನ್ನೆ ಭದ್ರತಾ ಸಿಬ್ಬಂದಿಯ ಗುಂಡಿನ ದಾಳಿಗೆ 14 ನಾಗರಿಕರು ಮೃತಪಟ್ಟಿದ್ದರು. ಹಾಗೇ, ಈ ವೇಳೆ ಒಬ್ಬ ಯೋಧ ಕೂಡ ಮೃತಪಟ್ಟಿದ್ದಾರೆ. ದುರ್ಘಟನೆಯ ಬೆನ್ನಲ್ಲೇ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಂತಾಪ ಸೂಚಿಸಿದ್ದರು. ನಾಗಾಲ್ಯಾಂಡ್​​ನಲ್ಲಿ ನಡೆದ ದುರ್ಘಟನೆಯಿಂದ ಆತಂಕ, ನೋವಾಗಿದೆ. ಮೃತರ ಕುಟುಂಬಕ್ಕೆ ಸಾಂತ್ವನಗಳು. ಹಾಗೇ, ಗಾಯಗೊಂಡವರು ಬೇಗನೇ ಗುಣಮುಖರಾಗಲೆಂದು ನಾನು ಆಶಿಸುತ್ತೇನೆ. ಈ ಬಗ್ಗೆ ಸರಿಯಾದ ರೀತಿಯಲ್ಲಿ ತನಿಖೆಯಾಗಬೇಕು ಎಂದು ಸಂತ್ರಸ್ತರಿಗೆ ನ್ಯಾಯ ಸಿಗಬೇಕು ಎಂದು ಅವರು ಟ್ವೀಟ್ ಮಾಡಿದ್ದರು.

ಆಗಿದ್ದೇನು? ಓಟಿಂಗ್​ ಗ್ರಾಮದ  ಕೂಲಿ ಕಾರ್ಮಿಕರು ಕೆಲಸಕ್ಕೆಂದು ಸಮೀಪದ ಕಲ್ಲಿದ್ದಲು ಗಣಿಗೆ ಹೋಗಿದ್ದರು. ಸಂಜೆ ಕೆಲಸ ಮುಗಿದ ಬಳಿಕ ಒಂದು ಪಿಕ್​ ಅಪ್​ ವಾಹನದಲ್ಲಿ ಅವರೆಲ್ಲ ಮನೆಗೆ ಮರಳುತ್ತಿದ್ದರು. ಆದರೆ ಭದ್ರತಾ ಪಡೆಯ ಗುಂಡಿನ ದಾಳಿಗೆ ಬಲಿಯಾಗಿದ್ದಾರೆ.  ಇವರು ಭದ್ರತಾ ಪಡೆಯ ದಾಳಿಗೆ ಬಲಿಯಾಗಿದ್ದಾರೆ ಎಂದು ಗೊತ್ತಾಗುತ್ತಿದ್ದಂತೆ ಗ್ರಾಮದ ಸ್ವಯಂಸೇವಕರು ಸಿಟ್ಟಿಗೆದ್ದು, ಅವರ ವಾಹನಗಳಿಗೆ ಬೆಂಕಿ ಹಾಕಿದ್ದಾರೆ. ಗಲಾಟೆ ಮಾಡಿದ್ದಾರೆ. ಸೇನೆಯ ಯೋಧರು ಉದ್ದೇಶ ಪೂರ್ವಕವಾಗಿ ಈ ಕೂಲಿ ಕಾರ್ಮಿಕರನ್ನು ಕೊಂದಿದ್ದಲ್ಲ ಎಂದು ಸೇನೆಯ ಅಸ್ಸಾಂ ರೈಫಲ್ಸ್​ ಹೇಳಿಕೆ ನೀಡಿದೆ. ಮ್ಯಾನ್ಮಾರ್‌ನಲ್ಲಿ ನೆಲೆಗೊಂಡಿರುವ ನಿಷೇಧಿತ ಸಂಘಟನೆ ಎನ್‌ಎಸ್‌ಸಿಎನ್ (ಕೆ) ನ ಯುಂಗ್ ಆ್ಯಂಗ್​ ಬಣದ ಉಗ್ರಗಾಮಿಗಳ ಗುಂಪೊಂದರ ಚಲನವಲನ ಈ ಪ್ರದೇಶದಲ್ಲಿ ಹೆಚ್ಚಾಗಿದೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿತ್ತು. ಅದರ ಅನ್ವಯ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸುತ್ತಿದ್ದವು. ಆದರೆ ದುರದೃಷ್ಟಕ್ಕೆ ಕೂಲಿಕಾರ್ಮಿಕರ ವಾಹನದ ಮೇಲೆ ಗುಂಡಿನ ದಾಳಿ ನಡೆದಿದೆ. ಹಾಗೇ, ಈ ಕೃತ್ಯದ ಬಗ್ಗೆ ವಿಷಾದವಿದೆ ಎಂದೂ ಅಸ್ಸಾಂ ರೈಫಲ್ಸ್​ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: Babri Demolition Anniversary ಮಸೀದಿಯಲ್ಲಿ ಕೃಷ್ಣನ ಮೂರ್ತಿ ಪ್ರತಿಷ್ಠಾಪಿಸುವ ಬೆದರಿಕೆ; ಮಥುರಾದಲ್ಲಿ ಭಾರೀ ಭದ್ರತೆ

Follow Us
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್