AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಒಂದಾಗಿ ಬಿಜೆಪಿಯನ್ನು ವಿರೋಧಿಸೋಣ ಬನ್ನಿ..’ ಕಾಂಗ್ರೆಸ್​ಗೆ ಆಹ್ವಾನ ನೀಡಿದ ಟಿಎಂಸಿ

ಕಾಂಗ್ರೆಸ್​ ಮತ್ತು ಎಡ ಪಕ್ಷಗಳು ಕೇಸರಿ ಪಕ್ಷವನ್ನು ವಿರೋಧಿಸುವುದೇ ಹೌದಾದಲ್ಲಿ ಅವರು ಟಿಎಂಸಿ ಜೊತೆ ಕೈಜೋಡಿಸಲಿ. ಮಮತಾ ಬ್ಯಾನರ್ಜಿಯವರನ್ನು ಹಿಂಬಾಲಿಸಲಿ. ಎಲ್ಲರೂ ಒಗ್ಗೂಡಿ ಕೋಮುವಾದಿ ಬಿಜೆಪಿಯ ವಿರುದ್ಧ ಹೋರಾಡೋಣ ಎಂದು ತೃಣಮೂಲ ಕಾಂಗ್ರೆಸ್​ ಸಂಸದ ಸೌಗತಾ ರಾಯ್​ ಹೇಳಿದ್ದಾರೆ.

'ಒಂದಾಗಿ ಬಿಜೆಪಿಯನ್ನು ವಿರೋಧಿಸೋಣ ಬನ್ನಿ..' ಕಾಂಗ್ರೆಸ್​ಗೆ ಆಹ್ವಾನ ನೀಡಿದ ಟಿಎಂಸಿ
ಟಿಎಂಸಿ ಮತ್ತು ಕಾಂಗ್ರೆಸ್​ ಚಿಹ್ನೆ (ಸಾಂದರ್ಭಿಕ ಚಿತ್ರ)
Skanda
|

Updated on:Jan 15, 2021 | 3:41 PM

Share

ಕೋಲ್ಕತ್ತಾ: ಒಡೆದು ಆಳುವ ನೀತಿಯ ಕೋಮುವಾದಿ ಬಿಜೆಯನ್ನು ಸೋಲಿಸಲು ಎಲ್ಲರೂ ಒಂದಾಗಿ ಹೆಜ್ಜೆಯಿಡಬೇಕು. ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯನ್ನು ಮಟ್ಟಹಾಕಬೇಕೆಂದರೆ ಕಾಂಗ್ರೆಸ್​ ಮತ್ತು ಎಡಪಕ್ಷಗಳು ಮಮತಾ ಬ್ಯಾನರ್ಜಿ ಅವರನ್ನು ಹಿಂಬಾಲಿಸಬೇಕು ಎಂದು ತೃಣಮೂಲ ಕಾಂಗ್ರೆಸ್​ ಸಂಸದ ಸೌಗತಾ ರಾಯ್​ ಹೇಳಿಕೆ ನೀಡಿದ್ದಾರೆ.

ಕಾಂಗ್ರೆಸ್​ ಮತ್ತು ಎಡ ಪಕ್ಷಗಳು ಕೇಸರಿ ಪಕ್ಷವನ್ನು ವಿರೋಧಿಸುವುದೇ ಹೌದಾದಲ್ಲಿ ಅವರು ಟಿಎಂಸಿ ಜೊತೆ ಕೈಜೋಡಿಸಲಿ. ಮಮತಾ ಬ್ಯಾನರ್ಜಿಯವರನ್ನು ಹಿಂಬಾಲಿಸಲಿ. ಎಲ್ಲರೂ ಒಗ್ಗೂಡಿ ಕೋಮುವಾದಿ ಬಿಜೆಪಿಯ ವಿರುದ್ಧ ಹೋರಾಡೋಣ ಎಂದು ಹೇಳಿದ್ದಾರೆ.

ಆದರೆ, ಈ ಹೇಳಿಕೆಗೆ ತಿರುಗೇಟು ನೀಡಿರುವ ಪ.ಬಂಗಾಳದ ಕಾಂಗ್ರೆಸ್​ ಮುಖ್ಯಸ್ಥ ಅಧೀರ್ ರಂಜನ್​ ಚೌಧರಿ, ನಾವು ಮಮತಾ ಬ್ಯಾನರ್ಜಿಯನ್ನು ಹಿಂಬಾಲಿಸುವ ಅವಶ್ಯಕತೆ ಇಲ್ಲ. ನಮಗೆ ಆ ಪಕ್ಷದೊಂದಿಗೆ ಮೈತ್ರಿ ಬೆಳೆಸುವ ಆಸಕ್ತಿಯೂ ಇಲ್ಲ. ಬೇಕಿದ್ದರೆ ಮಮತಾ ಬ್ಯಾನರ್ಜಿ ಕಾಂಗ್ರೆಸ್​ ಸೇರಿಕೊಳ್ಳಲಿ. ಟಿಎಂಸಿಯನ್ನು ಕಾಂಗ್ರೆಸ್ ಜೊತೆ ವಿಲೀನ ಮಾಡಲಿ ಎಂದು ಪ್ರತಿಕ್ರಿಯಿಸಿದ್ದಾರೆ.

ಕಾಂಗ್ರೆಸ್​ ರಾಷ್ಟ್ರಮಟ್ಟದಲ್ಲಿ ದೊಡ್ಡ ಪಕ್ಷವಾಗಿದೆ. ಆದ್ದರಿಂದ ಮಮತಾ ಬ್ಯಾನರ್ಜಿ ಕಾಂಗ್ರೆಸ್​ ಸೇರುವುದೇ ಒಳ್ಳೆಯದು. ಅಸಲಿಗೆ ಪ.ಬಂಗಾಳದಲ್ಲಿ ಬಿಜೆಪಿ ಬೆಳೆಯಲು ಟಿಎಂಸಿ ಪಕ್ಷವೇ ಕಾರಣ. ಕಳೆದ 10 ವರ್ಷಗಳಲ್ಲಿ ಕಾಂಗ್ರೆಸ್​ನಿಂದ ಹಲವು ಶಾಸಕರನ್ನು ತನ್ನೆಡೆಗೆ ಸೆಳೆದಿರುವ ಟಿಎಂಸಿ ಕಡೆಗೆ ನಮಗೆ ಯಾವುದೇ ಒಲವಿಲ್ಲ. 1998ರಲ್ಲಿ ಮಮತಾ ಬ್ಯಾನರ್ಜಿ ಕಾಂಗ್ರೆಸ್​ನಿಂದ ಹೊರನಡೆದು ಟಿಎಂಸಿ ಕಟ್ಟಿದರು. ಬಿಜೆಪಿಯನ್ನು ವಿರೋಧಿಸಲು ಅಷ್ಟೊಂದು ಉತ್ಸಾಹವಿದ್ದರೆ ಅವರು ಕಾಂಗ್ರೆಸ್ಸಿಗೆ ಬರಲಿ ಎಂದು ಹೇಳಿದ್ದಾರೆ.

ಮಮತಾದೀ, ಯಾಕೆ ಅಷ್ಟು ಹೆದರಿದ್ದೀರಿ? ಏನಾಯಿತು?: ದೀದಿಗೆ ಕುಟುಕಿದ ಜೆ.ಪಿ. ನಡ್ಡಾ

Published On - 6:52 pm, Thu, 14 January 21

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?