AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಒಂದಾಗಿ ಬಿಜೆಪಿಯನ್ನು ವಿರೋಧಿಸೋಣ ಬನ್ನಿ..’ ಕಾಂಗ್ರೆಸ್​ಗೆ ಆಹ್ವಾನ ನೀಡಿದ ಟಿಎಂಸಿ

ಕಾಂಗ್ರೆಸ್​ ಮತ್ತು ಎಡ ಪಕ್ಷಗಳು ಕೇಸರಿ ಪಕ್ಷವನ್ನು ವಿರೋಧಿಸುವುದೇ ಹೌದಾದಲ್ಲಿ ಅವರು ಟಿಎಂಸಿ ಜೊತೆ ಕೈಜೋಡಿಸಲಿ. ಮಮತಾ ಬ್ಯಾನರ್ಜಿಯವರನ್ನು ಹಿಂಬಾಲಿಸಲಿ. ಎಲ್ಲರೂ ಒಗ್ಗೂಡಿ ಕೋಮುವಾದಿ ಬಿಜೆಪಿಯ ವಿರುದ್ಧ ಹೋರಾಡೋಣ ಎಂದು ತೃಣಮೂಲ ಕಾಂಗ್ರೆಸ್​ ಸಂಸದ ಸೌಗತಾ ರಾಯ್​ ಹೇಳಿದ್ದಾರೆ.

'ಒಂದಾಗಿ ಬಿಜೆಪಿಯನ್ನು ವಿರೋಧಿಸೋಣ ಬನ್ನಿ..' ಕಾಂಗ್ರೆಸ್​ಗೆ ಆಹ್ವಾನ ನೀಡಿದ ಟಿಎಂಸಿ
ಟಿಎಂಸಿ ಮತ್ತು ಕಾಂಗ್ರೆಸ್​ ಚಿಹ್ನೆ (ಸಾಂದರ್ಭಿಕ ಚಿತ್ರ)
Skanda
|

Updated on:Jan 15, 2021 | 3:41 PM

Share

ಕೋಲ್ಕತ್ತಾ: ಒಡೆದು ಆಳುವ ನೀತಿಯ ಕೋಮುವಾದಿ ಬಿಜೆಯನ್ನು ಸೋಲಿಸಲು ಎಲ್ಲರೂ ಒಂದಾಗಿ ಹೆಜ್ಜೆಯಿಡಬೇಕು. ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯನ್ನು ಮಟ್ಟಹಾಕಬೇಕೆಂದರೆ ಕಾಂಗ್ರೆಸ್​ ಮತ್ತು ಎಡಪಕ್ಷಗಳು ಮಮತಾ ಬ್ಯಾನರ್ಜಿ ಅವರನ್ನು ಹಿಂಬಾಲಿಸಬೇಕು ಎಂದು ತೃಣಮೂಲ ಕಾಂಗ್ರೆಸ್​ ಸಂಸದ ಸೌಗತಾ ರಾಯ್​ ಹೇಳಿಕೆ ನೀಡಿದ್ದಾರೆ.

ಕಾಂಗ್ರೆಸ್​ ಮತ್ತು ಎಡ ಪಕ್ಷಗಳು ಕೇಸರಿ ಪಕ್ಷವನ್ನು ವಿರೋಧಿಸುವುದೇ ಹೌದಾದಲ್ಲಿ ಅವರು ಟಿಎಂಸಿ ಜೊತೆ ಕೈಜೋಡಿಸಲಿ. ಮಮತಾ ಬ್ಯಾನರ್ಜಿಯವರನ್ನು ಹಿಂಬಾಲಿಸಲಿ. ಎಲ್ಲರೂ ಒಗ್ಗೂಡಿ ಕೋಮುವಾದಿ ಬಿಜೆಪಿಯ ವಿರುದ್ಧ ಹೋರಾಡೋಣ ಎಂದು ಹೇಳಿದ್ದಾರೆ.

ಆದರೆ, ಈ ಹೇಳಿಕೆಗೆ ತಿರುಗೇಟು ನೀಡಿರುವ ಪ.ಬಂಗಾಳದ ಕಾಂಗ್ರೆಸ್​ ಮುಖ್ಯಸ್ಥ ಅಧೀರ್ ರಂಜನ್​ ಚೌಧರಿ, ನಾವು ಮಮತಾ ಬ್ಯಾನರ್ಜಿಯನ್ನು ಹಿಂಬಾಲಿಸುವ ಅವಶ್ಯಕತೆ ಇಲ್ಲ. ನಮಗೆ ಆ ಪಕ್ಷದೊಂದಿಗೆ ಮೈತ್ರಿ ಬೆಳೆಸುವ ಆಸಕ್ತಿಯೂ ಇಲ್ಲ. ಬೇಕಿದ್ದರೆ ಮಮತಾ ಬ್ಯಾನರ್ಜಿ ಕಾಂಗ್ರೆಸ್​ ಸೇರಿಕೊಳ್ಳಲಿ. ಟಿಎಂಸಿಯನ್ನು ಕಾಂಗ್ರೆಸ್ ಜೊತೆ ವಿಲೀನ ಮಾಡಲಿ ಎಂದು ಪ್ರತಿಕ್ರಿಯಿಸಿದ್ದಾರೆ.

ಕಾಂಗ್ರೆಸ್​ ರಾಷ್ಟ್ರಮಟ್ಟದಲ್ಲಿ ದೊಡ್ಡ ಪಕ್ಷವಾಗಿದೆ. ಆದ್ದರಿಂದ ಮಮತಾ ಬ್ಯಾನರ್ಜಿ ಕಾಂಗ್ರೆಸ್​ ಸೇರುವುದೇ ಒಳ್ಳೆಯದು. ಅಸಲಿಗೆ ಪ.ಬಂಗಾಳದಲ್ಲಿ ಬಿಜೆಪಿ ಬೆಳೆಯಲು ಟಿಎಂಸಿ ಪಕ್ಷವೇ ಕಾರಣ. ಕಳೆದ 10 ವರ್ಷಗಳಲ್ಲಿ ಕಾಂಗ್ರೆಸ್​ನಿಂದ ಹಲವು ಶಾಸಕರನ್ನು ತನ್ನೆಡೆಗೆ ಸೆಳೆದಿರುವ ಟಿಎಂಸಿ ಕಡೆಗೆ ನಮಗೆ ಯಾವುದೇ ಒಲವಿಲ್ಲ. 1998ರಲ್ಲಿ ಮಮತಾ ಬ್ಯಾನರ್ಜಿ ಕಾಂಗ್ರೆಸ್​ನಿಂದ ಹೊರನಡೆದು ಟಿಎಂಸಿ ಕಟ್ಟಿದರು. ಬಿಜೆಪಿಯನ್ನು ವಿರೋಧಿಸಲು ಅಷ್ಟೊಂದು ಉತ್ಸಾಹವಿದ್ದರೆ ಅವರು ಕಾಂಗ್ರೆಸ್ಸಿಗೆ ಬರಲಿ ಎಂದು ಹೇಳಿದ್ದಾರೆ.

ಮಮತಾದೀ, ಯಾಕೆ ಅಷ್ಟು ಹೆದರಿದ್ದೀರಿ? ಏನಾಯಿತು?: ದೀದಿಗೆ ಕುಟುಕಿದ ಜೆ.ಪಿ. ನಡ್ಡಾ

Published On - 6:52 pm, Thu, 14 January 21

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!