AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಶ್ಚಿಮ ಬಂಗಾಳದಲ್ಲಿ ಮಧ್ಯರಾತ್ರಿ ಟಿಎಂಸಿ ಮುಖಂಡನ ಹತ್ಯೆ; ಮನೆಗೇ ಬಂದು ಗುಂಡು ಹೊಡೆದ ದುಷ್ಕರ್ಮಿಗಳು

ಶನಿವಾರ ತಡರಾತ್ರಿ ಹೊತ್ತಿಗೆ ಮಹ್ರಮ್​ ಶೇಖ್​​ ಮನೆಗೆ ಬಂದ ದುಷ್ಕರ್ಮಿಗಳು ಅವರಿಗೆ ಗುಂಡುಹೊಡೆದಿದ್ದಾರೆ. ನಂತರ ಪರಾರಿಯಾಗಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಮಧ್ಯರಾತ್ರಿ ಟಿಎಂಸಿ ಮುಖಂಡನ ಹತ್ಯೆ; ಮನೆಗೇ ಬಂದು ಗುಂಡು ಹೊಡೆದ ದುಷ್ಕರ್ಮಿಗಳು
ಸಾಂಕೇತಿಕ ಚಿತ್ರ
TV9 Web
| Edited By: |

Updated on: Nov 21, 2021 | 8:57 AM

Share

ಪಶ್ಚಿಮ ಬಂಗಾಳದಲ್ಲಿ ಎಷ್ಟು ಹೊತ್ತಿಗೆ ಯಾವ ಪಕ್ಷದ ಮುಖಂಡನ ಮೇಲೆ ದಾಳಿಯಾಗುತ್ತದೆ? ಯಾರಿಗೆ ಗುಂಡೇಟು ಬೀಳುತ್ತದೆ ಎಂದೇ ಗೊತ್ತಾಗುವುದಿಲ್ಲ. ಸದಾ ಒಬ್ಬರಲ್ಲ ಒಬ್ಬ ರಾಜಕೀಯ ಮುಖಂಡರ ಮೇಲೆ ಹಲ್ಲೆಯಾಗುತ್ತದೆ. ಕೊಲೆಗಳು ನಡೆಯುತ್ತವೆ. ಇದೀಗ ಅಲ್ಲಿನ ಆಡಳಿತ ಪಕ್ಷ ತೃಣಮೂಲ ಕಾಂಗ್ರೆಸ್​ ನಾಯಕ ಮಹ್ರಮ್​ ಶೇಖ್​ರನ್ನು ಅವರ ಮನೆಯ ಹೊರಗೇ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಪಶ್ಚಿಮ ಬಂಗಾಳದ 24 ಪರಗಣ ಜಿಲ್ಲೆಯಲ್ಲಿ ಶನಿವಾರ ರಾತ್ರ ದುರ್ಘಟನೆ ನಡೆದಿದೆ.  

ಶನಿವಾರ ತಡರಾತ್ರಿ ಹೊತ್ತಿಗೆ ಮಹ್ರಮ್​ ಶೇಖ್​​ ಮನೆಗೆ ಬಂದ ದುಷ್ಕರ್ಮಿಗಳು ಅವರಿಗೆ ಗುಂಡುಹೊಡೆದಿದ್ದಾರೆ. ನಂತರ ಪರಾರಿಯಾಗಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತಾದರೂ ಪ್ರಯೋಜನ ಆಗಲಿಲ್ಲ. ಭಾನುವಾರ ಮುಂಜಾನೆ ಹೊತ್ತಿಗೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಘಟನೆಗೆ ಸಂಬಂಧಪಟ್ಟಂತೆ ಒಬ್ಬ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆದರೆ ಪ್ರಮುಖ ಆರೋಪಿ ನಾಪತ್ತೆಯಾಗಿದ್ದು, ಆತನನ್ನು ಹಿಡಿಯುವ ಪ್ರಯತ್ನಗಳು ನಡೆಯುತ್ತಿವೆ.  ಯಾವ ಕಾರಣಕ್ಕಾಗಿ ಹತ್ಯೆ ನಡೆದಿದೆ ಎಂಬಿತ್ಯಾದಿ ವಿಚಾತವಾಗಿ ತನಿಖೆ ಪ್ರಾರಂಭವಾಗಿದೆ.

ಪಶ್ಚಿಮಬಂಗಾಳದಲ್ಲಿ ಹಿಂಸಾಚಾರ ಹೊಸದಲ್ಲ. ಯಾವುದಾದರೂ ಚುನಾವಣೆ ಬಂತೆಂದರೆ ಅದರೊಂದಿಗೇ ಅಲ್ಲಿ ಹಿಂಸಾಚಾರವೂ ಶುರುವಾಗುತ್ತದೆ. ಕಳೆದ ಮೇ ತಿಂಗಳಲ್ಲಿ ವಿಧಾನಸಭೆ ಚುನಾವಣೆ ಮುಗಿಯುತ್ತಿದ್ದಂತೆ ಭಾರಿ ಪ್ರಮಾಣದ ಗಲಭೆ ಉಂಟಾಗಿತ್ತು. ಮನೆಗಳಿಗೆಲ್ಲ ಬೆಂಕಿ ಇಡಲಾಗಿತ್ತು. ಬಿಜೆಪಿ ನಮ್ಮ ಪಕ್ಷದ ಮೂವರು ಕಾರ್ಯಕರ್ತರನ್ನು ಹತ್ಯೆ ಮಾಡಿದೆ ಎಂದು ತೃಣಮೂಲ ಕಾಂಗ್ರೆಸ್​ ಆರೋಪಿಸಿತ್ತು. ಇನ್ನು ಪಶ್ಚಿಮಬಂಗಾಳದಲ್ಲಿ ನೇರ ಸ್ಪರ್ಧೆ, ವೈರತ್ವ ಇರುವುದು ಬಿಜೆಪಿ ಮತ್ತು ಟಿಎಂಸಿ ನಡುವೆ. ಈ ರಾಜಕೀಯ ಪಕ್ಷಗಳ ಕಾರ್ಯಕರ್ತರು, ಮುಖಂಡರ ಮೇಲೆ ಹಲ್ಲೆಗಳು ಜಾಸ್ತಿ. ಅದಾದ ಬಳಿಕ ಪರಸ್ಪರರ ಮೇಲೆ ಆರೋಪ ತೀರ ಸಾಮಾನ್ಯವಾಗಿಬಿಟ್ಟಿದೆ.

ಇದನ್ನೂ ಓದಿ: ತುಂಗಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ; ನದಿ ಪಾತ್ರಕ್ಕೆ ತೆರಳದಂತೆ ಡಂಗೂರ ಸಾರಿ ಜನರಿಗೆ ಎಚ್ಚರಿಕೆ

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ