AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಶ್ಚಿಮ ಬಂಗಾಳದಲ್ಲಿ ಮಧ್ಯರಾತ್ರಿ ಟಿಎಂಸಿ ಮುಖಂಡನ ಹತ್ಯೆ; ಮನೆಗೇ ಬಂದು ಗುಂಡು ಹೊಡೆದ ದುಷ್ಕರ್ಮಿಗಳು

ಶನಿವಾರ ತಡರಾತ್ರಿ ಹೊತ್ತಿಗೆ ಮಹ್ರಮ್​ ಶೇಖ್​​ ಮನೆಗೆ ಬಂದ ದುಷ್ಕರ್ಮಿಗಳು ಅವರಿಗೆ ಗುಂಡುಹೊಡೆದಿದ್ದಾರೆ. ನಂತರ ಪರಾರಿಯಾಗಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಮಧ್ಯರಾತ್ರಿ ಟಿಎಂಸಿ ಮುಖಂಡನ ಹತ್ಯೆ; ಮನೆಗೇ ಬಂದು ಗುಂಡು ಹೊಡೆದ ದುಷ್ಕರ್ಮಿಗಳು
ಸಾಂಕೇತಿಕ ಚಿತ್ರ
TV9 Web
| Edited By: |

Updated on: Nov 21, 2021 | 8:57 AM

Share

ಪಶ್ಚಿಮ ಬಂಗಾಳದಲ್ಲಿ ಎಷ್ಟು ಹೊತ್ತಿಗೆ ಯಾವ ಪಕ್ಷದ ಮುಖಂಡನ ಮೇಲೆ ದಾಳಿಯಾಗುತ್ತದೆ? ಯಾರಿಗೆ ಗುಂಡೇಟು ಬೀಳುತ್ತದೆ ಎಂದೇ ಗೊತ್ತಾಗುವುದಿಲ್ಲ. ಸದಾ ಒಬ್ಬರಲ್ಲ ಒಬ್ಬ ರಾಜಕೀಯ ಮುಖಂಡರ ಮೇಲೆ ಹಲ್ಲೆಯಾಗುತ್ತದೆ. ಕೊಲೆಗಳು ನಡೆಯುತ್ತವೆ. ಇದೀಗ ಅಲ್ಲಿನ ಆಡಳಿತ ಪಕ್ಷ ತೃಣಮೂಲ ಕಾಂಗ್ರೆಸ್​ ನಾಯಕ ಮಹ್ರಮ್​ ಶೇಖ್​ರನ್ನು ಅವರ ಮನೆಯ ಹೊರಗೇ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಪಶ್ಚಿಮ ಬಂಗಾಳದ 24 ಪರಗಣ ಜಿಲ್ಲೆಯಲ್ಲಿ ಶನಿವಾರ ರಾತ್ರ ದುರ್ಘಟನೆ ನಡೆದಿದೆ.  

ಶನಿವಾರ ತಡರಾತ್ರಿ ಹೊತ್ತಿಗೆ ಮಹ್ರಮ್​ ಶೇಖ್​​ ಮನೆಗೆ ಬಂದ ದುಷ್ಕರ್ಮಿಗಳು ಅವರಿಗೆ ಗುಂಡುಹೊಡೆದಿದ್ದಾರೆ. ನಂತರ ಪರಾರಿಯಾಗಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತಾದರೂ ಪ್ರಯೋಜನ ಆಗಲಿಲ್ಲ. ಭಾನುವಾರ ಮುಂಜಾನೆ ಹೊತ್ತಿಗೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಘಟನೆಗೆ ಸಂಬಂಧಪಟ್ಟಂತೆ ಒಬ್ಬ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆದರೆ ಪ್ರಮುಖ ಆರೋಪಿ ನಾಪತ್ತೆಯಾಗಿದ್ದು, ಆತನನ್ನು ಹಿಡಿಯುವ ಪ್ರಯತ್ನಗಳು ನಡೆಯುತ್ತಿವೆ.  ಯಾವ ಕಾರಣಕ್ಕಾಗಿ ಹತ್ಯೆ ನಡೆದಿದೆ ಎಂಬಿತ್ಯಾದಿ ವಿಚಾತವಾಗಿ ತನಿಖೆ ಪ್ರಾರಂಭವಾಗಿದೆ.

ಪಶ್ಚಿಮಬಂಗಾಳದಲ್ಲಿ ಹಿಂಸಾಚಾರ ಹೊಸದಲ್ಲ. ಯಾವುದಾದರೂ ಚುನಾವಣೆ ಬಂತೆಂದರೆ ಅದರೊಂದಿಗೇ ಅಲ್ಲಿ ಹಿಂಸಾಚಾರವೂ ಶುರುವಾಗುತ್ತದೆ. ಕಳೆದ ಮೇ ತಿಂಗಳಲ್ಲಿ ವಿಧಾನಸಭೆ ಚುನಾವಣೆ ಮುಗಿಯುತ್ತಿದ್ದಂತೆ ಭಾರಿ ಪ್ರಮಾಣದ ಗಲಭೆ ಉಂಟಾಗಿತ್ತು. ಮನೆಗಳಿಗೆಲ್ಲ ಬೆಂಕಿ ಇಡಲಾಗಿತ್ತು. ಬಿಜೆಪಿ ನಮ್ಮ ಪಕ್ಷದ ಮೂವರು ಕಾರ್ಯಕರ್ತರನ್ನು ಹತ್ಯೆ ಮಾಡಿದೆ ಎಂದು ತೃಣಮೂಲ ಕಾಂಗ್ರೆಸ್​ ಆರೋಪಿಸಿತ್ತು. ಇನ್ನು ಪಶ್ಚಿಮಬಂಗಾಳದಲ್ಲಿ ನೇರ ಸ್ಪರ್ಧೆ, ವೈರತ್ವ ಇರುವುದು ಬಿಜೆಪಿ ಮತ್ತು ಟಿಎಂಸಿ ನಡುವೆ. ಈ ರಾಜಕೀಯ ಪಕ್ಷಗಳ ಕಾರ್ಯಕರ್ತರು, ಮುಖಂಡರ ಮೇಲೆ ಹಲ್ಲೆಗಳು ಜಾಸ್ತಿ. ಅದಾದ ಬಳಿಕ ಪರಸ್ಪರರ ಮೇಲೆ ಆರೋಪ ತೀರ ಸಾಮಾನ್ಯವಾಗಿಬಿಟ್ಟಿದೆ.

ಇದನ್ನೂ ಓದಿ: ತುಂಗಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ; ನದಿ ಪಾತ್ರಕ್ಕೆ ತೆರಳದಂತೆ ಡಂಗೂರ ಸಾರಿ ಜನರಿಗೆ ಎಚ್ಚರಿಕೆ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ