AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈವಾಹಿಕ ಸ್ಥಿತಿ ಬಗ್ಗೆ ತಪ್ಪು ಮಾಹಿತಿ ನೀಡಿದ್ದಕ್ಕೆ ಟಿಎಂಸಿ ಸಂಸದೆ ನುಸ್ರತ್ ಜಹಾನ್ ವಿರುದ್ಧ ಕ್ರಮ ಕೈಗೊಳ್ಳಿ: ಲೋಕಸಭಾ ಸ್ಪೀಕರ್​ಗೆ ಪತ್ರ ಬರೆದ ಬಿಜೆಪಿ ಸಂಸದೆ

Nusrat Jahan Ruhi: ನಿಖಿಲ್ ಜೈನ್ ಅವರೊಂದಿಗಿನ ವಿವಾಹವು ಅಮಾನ್ಯವಾಗಿದೆ ಎಂದು ನುಸ್ರತ್ ಇತ್ತೀಚೆಗೆ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದರು. ಅಂತರ್ ಧರ್ಮದ ವಿವಾಹವಾಗಿದ್ದರಿಂದ ಅದಕ್ಕೆ ಭಾರತದಲ್ಲಿ ವಿಶೇಷ ವಿವಾಹ ಕಾಯ್ದೆ ಅಡಿಯಲ್ಲಿ ಮಾನ್ಯತೆ ದೊರೆಯಬೇಕಿದೆ. ಅದು ಆಗಿಲ್ಲ

ವೈವಾಹಿಕ ಸ್ಥಿತಿ ಬಗ್ಗೆ ತಪ್ಪು ಮಾಹಿತಿ ನೀಡಿದ್ದಕ್ಕೆ ಟಿಎಂಸಿ ಸಂಸದೆ ನುಸ್ರತ್ ಜಹಾನ್ ವಿರುದ್ಧ ಕ್ರಮ ಕೈಗೊಳ್ಳಿ: ಲೋಕಸಭಾ ಸ್ಪೀಕರ್​ಗೆ ಪತ್ರ ಬರೆದ ಬಿಜೆಪಿ ಸಂಸದೆ
ನುಸ್ರತ್ ಜಹಾನ್ ರುಹಿ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Jun 22, 2021 | 2:22 PM

Share

ಕೊಲ್ಕತ್ತಾ: ಸಂಸತ್ತಿನಲ್ಲಿ ನೀಡಿದ ಅಫಿಡವಿಟ್‌ನಲ್ಲಿ ಸುಳ್ಳು ಮಾಹಿತಿ ನೀಡಿದ್ದಕ್ಕಾಗಿ ಬಿಜೆಪಿ ಸಂಸದೆ ಸಂಘಮಿತ್ರ ಮೌರ್ಯ ಅವರು ಟಿಎಂಸಿ ಲೋಕಸಭಾ ಸಂಸದೆ ನುಸ್ರತ್ ಜಹಾನ್ ರುಹಿ ಅವರ ವಿರುದ್ಧ  ದೂರು ದಾಖಲಿಸಿದ ನಂತರ ನುಸ್ರತ್ ಅವರಿಗೆ ಮತ್ತೊಂದು ಕಂಟಕ ಎದುರಾಗಿದೆ.

ನಿಖಿಲ್ ಜೈನ್ ಅವರೊಂದಿಗಿನ ವಿವಾಹವು ಅಮಾನ್ಯವಾಗಿದೆ ಎಂದು ನುಸ್ರತ್ ಇತ್ತೀಚೆಗೆ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದರು. ಅಂತರ್ ಧರ್ಮದ ವಿವಾಹವಾಗಿದ್ದರಿಂದ ಅದಕ್ಕೆ ಭಾರತದಲ್ಲಿ ವಿಶೇಷ ವಿವಾಹ ಕಾಯ್ದೆ ಅಡಿಯಲ್ಲಿ ಮಾನ್ಯತೆ ದೊರೆಯಬೇಕಿದೆ. ಅದು ಆಗಿಲ್ಲ. ಕಾನೂನಿನ ಪ್ರಕಾರ ಅದು ಮದುವೆಯಲ್ಲ, ಇದು ಲಿವ್-ಇನ್ ರಿಲೇಷನ್ ಶಿಪ್, ಹಾಗಾಗಿ ವಿಚ್ಛೇದನ ವಿಷಯವೇ ಉದ್ಭವಿಸುವುದಿಲ್ಲ ಎಂದು ನುಸ್ರತ್ ಜಹಾನ್ ಹೇಳಿದ್ದರು.

ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಮೌರ್ಯ ಪತ್ರವೊಂದನ್ನು ಬರೆದಿದ್ದಾರೆ. ಈ ಪತ್ರದಲ್ಲಿ ತನ್ನ ವೈವಾಹಿಕ ಸ್ಟೇಟಸ್ ಬಗ್ಗೆ ತನ್ನ ಇತ್ತೀಚಿನ ಮಾಧ್ಯಮ ಹೇಳಿಕೆಯಲ್ಲಿ ನುಸ್ರತ್ ಜಹಾನ್ ಉದ್ದೇಶಪೂರ್ವಕವಾಗಿ ಲೋಕಸಭಾ ಸಚಿವಾಲಯಕ್ಕೆ ಸುಳ್ಳು ಮಾಹಿತಿಯನ್ನು ಒದಗಿಸಿದ್ದಾರೆ ಮತ್ತು ಆ ಮೂಲಕ ಕಾನೂನುಬಾಹಿರ ಮತ್ತು ಅನೈತಿಕ ವರ್ತನೆಗೆ ಒಳಗಾಗಿದ್ದಾರೆ ಎಂದು ಸೂಚಿಸುತ್ತದೆ. ಇದು ಉದ್ದೇಶಪೂರ್ವಕ ಸುಳ್ಳು ಮತ್ತು ದಾರಿತಪ್ಪಿಸುವ ಮಾಹಿತಿಯನ್ನು ಒದಗಿಸುವ ಮೂಲಕ ಮತ್ತು ಸಂಸತ್ತು ಮತ್ತು ಅದರ ಗೌರವಾನ್ವಿತ ಸಂಸದರಿಗೆ ಕೆಟ್ಟ ಹೆಸರು ತರುವ ಮೂಲಕ ತನ್ನ ಮತದಾರರನ್ನು ಮೋಸಗೊಳಿಸುವುದಕ್ಕೆ ಸಮಾನವಾಗಿದೆ ಎಂದಿದ್ದಾರೆ.

ಅವರ ವೈವಾಹಿಕ ಸ್ಟೇಟಸ್ ಬಗ್ಗೆ ಅವರ ಮಾಧ್ಯಮ ಹೇಳಿಕೆಯು ಲೋಕಸಭಾ ಸದಸ್ಯತ್ವಕ್ಕಾಗಿ ಪ್ರಮಾಣವಚನದಲ್ಲಿ ಹೇಳಿದ್ದಕ್ಕಿಂತ ಭಿನ್ನವಾಗಿದೆ. ಅದರಲ್ಲಿ ಅವರು ನುಸ್ರತ್ ಜಹಾನ್ ರುಹಿ ಜೈನ್ ಎಂದು ಪ್ರಮಾಣ ವಚನ ಸ್ವೀಕರಿಸಿದರು. ಇದು ಆಕೆಯ ಸದಸ್ಯತ್ವವನ್ನು ಕಾನೂನುಬಾಹಿರ ಎಂದು ಪರಿಣಾಮಕಾರಿಯಾಗಿ ನಿರೂಪಿಸುತ್ತದೆ “ಎಂದು ಪತ್ರದಲ್ಲಿ ಹೇಳಲಾಗಿದೆ.

ಸುಳ್ಳು ಮಾಹಿತಿಗಾಗಿ ಆಕೆಯ ವಿರುದ್ಧ ಏಕೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಕೇಳಿದಾಗ ಲೋಕಸಭಾ ಸಚಿವಾಲಯವು ಸೂಚಿಸಿದಂತೆ ನುಸ್ರತ್ ವಿರುದ್ಧ ಇಲ್ಲಿಯವರೆಗೆ ಯಾವುದೇ ದೂರು ಬಂದಿಲ್ಲ ಎಂಬುದನ್ನು ಗಮನಿಸಬಹುದು.

ಜೂನ್ 25, 2019 ರಂದು ನುಸ್ರತ್ ಲೋಕಸಭಾ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದಾಗ, ಅವರ ಹೆಸರು ನುಸ್ರತ್ ಜಹಾನ್ ರುಹಿ ಜೈನ್ ಎಂದು ಹೇಳಿದರು. ಅವಳು ಹಣೆಗೆ ಸಿಂಧೂರವಿಟ್ಟು ನವ ವಧುವಿನಂತೆ ಸಿಂಗಾರಗೊಂಡಿದ್ದಳು. ಆಕೆಯ ಪ್ರಮಾಣವಚನ ಸ್ವೀಕರಿಸುವ ವಿಡಿಯೋ ಇನ್ನೂ ಅಧಿಕೃತ ದಾಖಲೆಗಳಲ್ಲಿದೆ ಮತ್ತು ಲೋಕಸಭಾ ವೆಬ್‌ಸೈಟ್‌ನಲ್ಲಿ ಆಕೆಯ ಅಫಿಡವಿಟ್‌ನಲ್ಲಿ ವಿವಾಹಿತೆ ಮತ್ತು ಆಕೆಯ ಗಂಡನ ಹೆಸರನ್ನು ನಿಖಿಲ್ ಜೈನ್ ಎಂದು ಉಲ್ಲೇಖಿಸಲಾಗಿದೆ.

ಇಂತಹ ನಡವಳಿಕೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ಮುಂದಿನ ಕ್ರಮಕ್ಕಾಗಿ ಈ ವಿಷಯವನ್ನು ನೈತಿಕ ಸಮಿತಿಗೆ ಶಿಫಾರಸು ಮಾಡಬೇಕೆಂದು ಉತ್ತರ ಪ್ರದೇಶದ ಬಿಜೆಪಿ ಲೋಕಸಭಾ ಸಂಸದೆ ಮೌರ್ಯ ಸ್ಪೀಕರ್‌ಗೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಭಾರತದ ಕಾನೂನಿನ ದೃಷ್ಟಿಯಲ್ಲಿ ನನ್ನದು ಮದುವೆ ಅಲ್ಲವೇ ಅಲ್ಲ, ವಿಚ್ಛೇದನ ಪಡೆಯುವ ಪ್ರಶ್ನೆ ಉದ್ಭವಿಸುವುದಿಲ್ಲ: ನುಸ್ರತ್ ಜಹಾನ್

ಇದನ್ನೂ ಓದಿ: ಫಿಟ್ನೆಸ್​ಗಾಗಿ ನಿತ್ಯ ಇದನ್ನ ತಪ್ಪದೆ ಮಾಡ್ತಾರಂತೆ ಬೆಂಗಾಲಿ ಬೆಡಗಿ ನುಸ್ರತ್ ಜಹಾನ್!

(TMC Lok Sabha MP Nusrat Jahan Ruhi giving False Info About Marital Status Seeks Action BJP MP Writes to Speaker)

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!