AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೀರೆಯುಟ್ಟು, ಸನ್​​​ ಗ್ಲಾಸ್​​ ಧರಿಸಿ ಫುಟ್‌ಬಾಲ್​​ ಆಡಿದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ, ನೆಟ್ಟಿಗರಿಂದ ಮೆಚ್ಚುಗೆ

ಕೃಷ್ಣನಗರ ಎಂಪಿ ಕಪ್ ಟೂರ್ನಮೆಂಟ್ 2022 ರ ಫೈನಲ್‌ನ ಮೋಜಿನ ಕ್ಷಣಗಳು. ಹೌದು, ನಾನು ಸೀರೆಯಲ್ಲಿ ಆಡುತ್ತೇನೆ" ಎಂದು ಮಹುವಾ ಟ್ವೀಟ್ ಮಾಡಿದ್ದಾರೆ.

ಸೀರೆಯುಟ್ಟು, ಸನ್​​​ ಗ್ಲಾಸ್​​ ಧರಿಸಿ ಫುಟ್‌ಬಾಲ್​​ ಆಡಿದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ, ನೆಟ್ಟಿಗರಿಂದ ಮೆಚ್ಚುಗೆ
ಮಹುವಾ ಮೊಯಿತ್ರಾ
TV9 Web
| Edited By: |

Updated on:Sep 19, 2022 | 5:40 PM

Share

ದೆಹಲಿ: ತೃಣಮೂಲ ಕಾಂಗ್ರೆಸ್ (TMC) ಸಂಸದೆ ಮಹುವಾ ಮೊಯಿತ್ರಾ (Mahua Moitra) ಅವರು ಇಂದು ಕೃಷ್ಣಾನಗರ ಎಂಪಿ ಕಪ್ ಟೂರ್ನಮೆಂಟ್‌ನಲ್ಲಿ ಸೀರೆಯುಟ್ಟು ಫುಟ್‌ಬಾಲ್ (Football) ಆಡುತ್ತಿರುವ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.ಮೊಯಿತ್ರಾ ಅವರು ಟ್ವಿಟರ್​​​ ನಲ್ಲಿ ಅಪ್‌ಲೋಡ್ ಮಾಡಿದ ಚಿತ್ರಗಳಲ್ಲಿ, ಅವರು ಕೆಂಪು-ಕಿತ್ತಳೆ ಬಣ್ಣದ ಸೀರೆಯುಟ್ಟಿದ್ದು ಸ್ಫೋರ್ಟ್ಸ್ ಶೂ ಧರಿಸಿದ್ದಾರೆ. ಕಣ್ಣಿಗೆ ಸನ್‌ಗ್ಲಾಸ್‌ಗಳನ್ನು ಧರಿಸಿದ್ದಾರೆ. ಮೊದಲ ಚಿತ್ರದಲ್ಲಿ ಅವರು ಚೆಂಡನ್ನು ಕಿಕ್ ಮಾಡುತ್ತಿದ್ದು, ಇನ್ನೊಂದು ಚಿತ್ರದಲ್ಲಿ ಅವರು ಗೋಲ್ ಕೀಪರ್ ಆಗಿ ಚೆಂಡು ಗೋಲ್ ಪೋಸ್ಟ್ ಗೆ ಹೋಗದಂತೆ ತಡೆಯುತ್ತಿರುವುದನ್ನು ಕಾಣಬಹುದು.  “ಕೃಷ್ಣನಗರ ಎಂಪಿ ಕಪ್ ಟೂರ್ನಮೆಂಟ್ 2022 ರ ಫೈನಲ್‌ನ ಮೋಜಿನ ಕ್ಷಣಗಳು. ಹೌದು, ನಾನು ಸೀರೆಯಲ್ಲಿ ಆಡುತ್ತೇನೆ” ಎಂದು ಮಹುವಾ ಟ್ವೀಟ್ ಮಾಡಿದ್ದಾರೆ. ಸಂಸದೆ ಸೀರೆ ಉಟ್ಟುಕೊಂಡು ಆಟವಾಡುತ್ತಿರುವುದನ್ನು ನೋಡಿ ಸಾಮಾಜಿಕ ಜಾಲತಾಣಗಳ ಬಳಕೆದಾರರು ಮೆಚ್ಚುಗೆ ವ್ಯಕ್ತಪಡಿಸಿದರು.

ರಾಜಕಾರಣಿ ಮತ್ತು ಭಾರತದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಪುತ್ರಿ ಶರ್ಮಿಷ್ಠಾ ಮುಖರ್ಜಿ, ಮಹುವಾ ಟ್ವೀಟ್ ಗೆ ಕಾಮೆಂಟ್ ಮಾಡಿದ್ದು ಕೂಲ್, ಲವ್ ದಿ ಶಾಟ್ ಎಂದು  ಹೇಳಿದ್ದಾರೆ

ಇದು ಅದ್ಭುತವಾಗಿದೆ, ನೀವು ತುಂಬಾ ಪ್ರಶಂಸನೀಯರು ಎಂದು ಮತ್ತೊಬ್ಬ ಬಳಕೆದಾರರು ಹೇಳಿದ್ದಾರೆ.

ಸಂಸದೆ ಮಹುವಾ ಮೊಯಿತ್ರಾ ಅವರು ಫುಟ್‌ಬಾಲ್ ಮೈದಾನದಲ್ಲಿ ಸೀರೆಯುಟ್ಟು ಆಡಿದ್ದು ಇದೇ ಮೊದಲಲ್ಲ. ತೃಣಮೂಲ ಕಾಂಗ್ರೆಸ್ ಖೇಲಾ ಹೋಬ್ ದಿಬಸ್ ಅನ್ನು ಆಚರಿಸಿದಾಗ ಮತ್ತು ಕ್ರೀಡೆಗಳನ್ನು ಉತ್ತೇಜಿಸಲು ಪಶ್ಚಿಮ ಬಂಗಾಳದಾದ್ಯಂತ ಪಂದ್ಯಗಳನ್ನು ಆಯೋಜಿಸಿದಾಗ ಅವರು ಈ ಹಿಂದೆ ಫುಟ್ಬಾಲ್ ಆಡುವ ಚಿತ್ರಗಳನ್ನು ಹಂಚಿಕೊಂಡಿದ್ದರು.

Published On - 4:57 pm, Mon, 19 September 22

ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ